ಅ. 1ರಂದು ನಾರಾಯಣಸ್ವಾಮಿ, ಅವರ ಪತ್ನಿ ಅರುಣಾ ಹಾಗೂ ಮಕ್ಕಳು ಮನೆಯ ಬಳಿ ಬಂದು ಶೆಡ್ ಬೀಗದ ಕೀ ಕೊಡಿ ಎಂದು ಉದ್ದೇಶಪೂರ್ವಕವಾಗಿ ಜಗಳ ತೆಗೆದರು. ಶಂಕರಾಚಾರಿ ಮೇಲೆ ಹಲ್ಲೆ ನಡೆಸಿ ನೆಲಕ್ಕೆ ತಳ್ಳಿದರು. ತಲೆಗೆ ಪೆಟ್ಟಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಶನಿವಾರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಎಂ.ವಿ.ಜೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.