ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಮೊಯಿಲಿ ಅವರು ಸುಧಾಕರ್ ಅವರು ಭ್ರಷ್ಟ ಅವರಿಗೆ ಟಿಕೆಟ್ ನೀಡುವುದು ಬೇಡ ಎಂದು ಹೈಕಮಾಂಡ್ಗೆ ಸಲಹೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಅವರು ಸುಧಾಕರ್ ಪರ ವಹಿಸಿ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರು. ಇವತ್ತು ಸುಧಾಕರ್ ಅವರು ತಾಕತ್ ಇದ್ದರೆ ನಮ್ಮನ್ನು ಸಿದ್ದರಾಮಯ್ಯ ಅವರೇ ಸೋಲಿಸಲಿ ಎನ್ನುತ್ತಿದ್ದಾರೆ. ಇವರೇನು ಆಧುನಿಕ ದುರ್ಯೋಧನನಾ’ ಎಂದು ಕೇಳಿದರು.