ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಚಿವ ಸ್ಥಾನದ ಬಗ್ಗೆ ಗೊಂದಲ ಬೇಡ. ಮುಖ್ಯಮಂತ್ರಿ ಅವರು ಒಳ್ಳೆಯ ಮೂಹೂರ್ತ, ಶುಭಗಳಿಗೆಯಲ್ಲಿ ನಮಗೆ ಅಧಿಕಾರ ಕೊಡಲು ತೀರ್ಮಾನ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಂದೂ ಕೊಟ್ಟ ಮಾತಿಗೆ ತಪ್ಪಿ ನಡೆದಿಲ್ಲ. ಹಾಗಾಗಿ ಅವರು ನಮಗೆ ಕೊಟ್ಟ ಮಾತು ತಪ್ಪುವುದಿಲ್ಲ ಎಂದು ನಂಬಿರುವೆ. ಸಂಕ್ರಾಂತಿ ನಂತರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ’ ಎಂದು ತಿಳಿಸಿದರು.