<p>ಚಿಂತಾಮಣಿ: ತಾಲ್ಲೂಕಿನ ಕೈವಾರದಲ್ಲಿ ಶನಿವಾರ ಸದ್ಗುರು ಯೋಗಿನಾರೇಯಣ ಮಠದಲ್ಲಿ ಚೈತ್ರ ಮಾಸದ ದವನದ ಹುಣ್ಣಿಮೆ ಪ್ರಯುಕ್ತ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ಸದ್ಗುರು ಯೋಗಿ ನಾರೇಯಣ ತಾತಯ್ಯನವರ ಮೂಲ ಬೃಂದಾವನವನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಹುಣ್ಣಿಮೆ ಪೂಜೆಗಾಗಿ ಪೀಠವನ್ನು ಅಲಂಕರಿಸಿ ಶ್ರೀದೇವಿ ಭೂದೇವಿ ಸಮೇತ ಅಮರನಾರೇಯಣಸ್ವಾಮಿ ಹಾಗೂ ತಾತಯ್ಯನವರ ಉತ್ಸವ ಮೂರ್ತಿಗಳನ್ನು ಕುಳ್ಳರಿಸಲಾಗಿತ್ತು. ಉತ್ಸವಮೂರ್ತಿಗಳಿಗೆ ಪಂಚಾಮೃತ ಮತ್ತು ಮಂಗಳ ದ್ರವ್ಯಗಳಿಂದ ಅಭಿಷೇಕ ನೆರವೇರಿಸಲಾಯಿತು.</p>.<p>ಶಾಸ್ತ್ರೋಕ್ತವಾಗಿ ಅಷ್ಟಾವಧಾನ ಸೇವೆಯನ್ನು ಸಮರ್ಪಿಸಿ ಮಹಾಮಂಗಳಾರತಿಯನ್ನು ಮಾಡಲಾಯಿತು. ತಾತಯ್ಯ ಅವರ ಉತ್ಸವಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಕರೆತಂದು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.</p>.<p>ಗೋವಿಂದ, ಗೋವಿಂದ ನಾಮಸ್ಮರಣೆಯೊಂದಿಗೆ ದೇವಾಲಯದ ಸುತ್ತಲೂ ರಥೋತ್ಸವ ನಡೆಯಿತು. ನೂರಾರು ಜನ ಭಕ್ತರು ರಥದೊಂದಿಗೆ ಸುತ್ತು ಹಾಕಿ ಭಕ್ತಿ ಮೆರೆದರು.</p>.<p>ಮಠದಲ್ಲಿ ಮುಂಜಾನೆಯಿಂದಲೇ ಘಂಟಾನಾದ, ಸುಪ್ರಭಾತದೊಂದಿಗೆ ಗೋಪೂಜೆ ನಡೆಯಿತು. ಮಧ್ಯಾಹ್ನ ಅನ್ನ ಸಂತರ್ಪಣೆ ನೆರವೇರಿತು. ಕೈವಾರ ತಾತಯ್ಯ ವಿರಚಿತ ಶ್ರೀರಾಮ ತಾರಕ ಮಂತ್ರವನ್ನು 108 ಬಾರಿ ಜಪಿಸಲಾಯಿತು.</p>.<p>ಭೀಮ ಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ರುದ್ರಾಭಿಷೇಕ, ಅಷ್ಟೋತ್ತರ ನಾಮಾವಳಿ, ಸಹಸ್ರ ಬಿಲ್ವಾಚರಣೆ ಮತ್ತು ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರವನ್ನು ಮಾಡಲಾಗಿತ್ತು.</p>.<p>ಸಂಜೆ ನಾದಸುಧಾರಸ ಸಂಕೀರ್ತನ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. ಧರ್ಮಾಧಿಕಾರಿ ಎಂ.ಆರ್. ಜಯರಾಂ, ವಾನರಾಶಿ ಬಾಲಕೃಷ್ಣ ಭಾಗವತ್, ಟಿ.ಎಲ್.ಆನಂದ್, ಟ್ರಸ್ಟ್ ಪದಾಧಿಕಾರಿಗಳು, ಲಕ್ಷ್ಮಿ ನಾರಾಯಣ್ ಹಾಗೂ ನೂರಾರು ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ತಾಲ್ಲೂಕಿನ ಕೈವಾರದಲ್ಲಿ ಶನಿವಾರ ಸದ್ಗುರು ಯೋಗಿನಾರೇಯಣ ಮಠದಲ್ಲಿ ಚೈತ್ರ ಮಾಸದ ದವನದ ಹುಣ್ಣಿಮೆ ಪ್ರಯುಕ್ತ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.</p>.<p>ಸದ್ಗುರು ಯೋಗಿ ನಾರೇಯಣ ತಾತಯ್ಯನವರ ಮೂಲ ಬೃಂದಾವನವನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಹುಣ್ಣಿಮೆ ಪೂಜೆಗಾಗಿ ಪೀಠವನ್ನು ಅಲಂಕರಿಸಿ ಶ್ರೀದೇವಿ ಭೂದೇವಿ ಸಮೇತ ಅಮರನಾರೇಯಣಸ್ವಾಮಿ ಹಾಗೂ ತಾತಯ್ಯನವರ ಉತ್ಸವ ಮೂರ್ತಿಗಳನ್ನು ಕುಳ್ಳರಿಸಲಾಗಿತ್ತು. ಉತ್ಸವಮೂರ್ತಿಗಳಿಗೆ ಪಂಚಾಮೃತ ಮತ್ತು ಮಂಗಳ ದ್ರವ್ಯಗಳಿಂದ ಅಭಿಷೇಕ ನೆರವೇರಿಸಲಾಯಿತು.</p>.<p>ಶಾಸ್ತ್ರೋಕ್ತವಾಗಿ ಅಷ್ಟಾವಧಾನ ಸೇವೆಯನ್ನು ಸಮರ್ಪಿಸಿ ಮಹಾಮಂಗಳಾರತಿಯನ್ನು ಮಾಡಲಾಯಿತು. ತಾತಯ್ಯ ಅವರ ಉತ್ಸವಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಕರೆತಂದು ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.</p>.<p>ಗೋವಿಂದ, ಗೋವಿಂದ ನಾಮಸ್ಮರಣೆಯೊಂದಿಗೆ ದೇವಾಲಯದ ಸುತ್ತಲೂ ರಥೋತ್ಸವ ನಡೆಯಿತು. ನೂರಾರು ಜನ ಭಕ್ತರು ರಥದೊಂದಿಗೆ ಸುತ್ತು ಹಾಕಿ ಭಕ್ತಿ ಮೆರೆದರು.</p>.<p>ಮಠದಲ್ಲಿ ಮುಂಜಾನೆಯಿಂದಲೇ ಘಂಟಾನಾದ, ಸುಪ್ರಭಾತದೊಂದಿಗೆ ಗೋಪೂಜೆ ನಡೆಯಿತು. ಮಧ್ಯಾಹ್ನ ಅನ್ನ ಸಂತರ್ಪಣೆ ನೆರವೇರಿತು. ಕೈವಾರ ತಾತಯ್ಯ ವಿರಚಿತ ಶ್ರೀರಾಮ ತಾರಕ ಮಂತ್ರವನ್ನು 108 ಬಾರಿ ಜಪಿಸಲಾಯಿತು.</p>.<p>ಭೀಮ ಲಿಂಗೇಶ್ವರ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ರುದ್ರಾಭಿಷೇಕ, ಅಷ್ಟೋತ್ತರ ನಾಮಾವಳಿ, ಸಹಸ್ರ ಬಿಲ್ವಾಚರಣೆ ಮತ್ತು ವಿಶೇಷ ಪೂಜೆ ಹಾಗೂ ಹೂವಿನ ಅಲಂಕಾರವನ್ನು ಮಾಡಲಾಗಿತ್ತು.</p>.<p>ಸಂಜೆ ನಾದಸುಧಾರಸ ಸಂಕೀರ್ತನ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು. ಧರ್ಮಾಧಿಕಾರಿ ಎಂ.ಆರ್. ಜಯರಾಂ, ವಾನರಾಶಿ ಬಾಲಕೃಷ್ಣ ಭಾಗವತ್, ಟಿ.ಎಲ್.ಆನಂದ್, ಟ್ರಸ್ಟ್ ಪದಾಧಿಕಾರಿಗಳು, ಲಕ್ಷ್ಮಿ ನಾರಾಯಣ್ ಹಾಗೂ ನೂರಾರು ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>