<p><strong>ಗುಡಿಬಂಡೆ</strong>: ತಾಲ್ಲೂಕಿನ ಕಂತಾರ್ಲಹಳ್ಳಿ ಸರ್ವೆ ನಂಬರ್ 25 ಎರಡು ಎಕರೆ ಜಮೀನಿನಲ್ಲಿ ವ್ಯಕ್ತಿಯೊಬ್ಬರು ಕಲ್ಲು ಗಣಿ ನಡೆಸುತ್ತಿದ್ದಾರೆ. ಈ ಗಣಿ ಕಾನೂನುಬಾಹಿರವಾಗಿ ಮಿತಿಮೀರಿದ ಬ್ಲಾಸ್ಟಿಂಗ್ ಮಾಡುತ್ತಿದೆ. ತ್ಯಾಜ್ಯ ವಸ್ತುಗಳನ್ನು ರಸ್ತೆ ಪಕ್ಕದ ಸರ್ಕಾರಿ ಜಾಗದಲ್ಲಿ ಹಾಕಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.</p>.<p>ಈ ಬಗ್ಗೆ ಸಾರ್ವಜನಿಕರು ತಹಶೀಲ್ದಾರರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತಹಶೀಲ್ದಾರರು ಗಣಿ ಮಾಲೀಕರಿಗೆ ನೋಟಿಸ್ ನೀಡಿದರು. ಇದಕ್ಕೆ ಮಾಲೀಕರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಕಾನೂನು ಬಾಹಿರ ಕಾರ್ಯ ಮುಂದುವರಿಸಿದ್ದರು.</p>.<p>ಈ ಪರಿಸ್ಥಿತಿ ಪರಿಶೀಲಿಸಿದ ತಹಶೀಲ್ದಾರರು ಸಿಗ್ಬತ್ವುಲ್ಲಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ. ಕಲ್ಲು ಗಣಿಯಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಬ್ಲಾಸ್ಟಿಂಗ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದಾರೆ.</p>.<p>ದಪ್ಪರ್ತಿ, ಭತ್ತಲಹಳ್ಳಿ, ಹನುಮಂತಪುರ ಮುಂತಾದ ಸಮೀಪದ ಗ್ರಾಮಗಳ ಜನರಿಗೂ ಈ ಗಣಿಯಿಂದ ತೊಂದರೆಯಾಗುತ್ತಿದೆ. ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕರ ತೊಂದರೆಗಳನ್ನು ದಾಖಲಿಸಿದ್ದಾರೆ. </p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಾದ ಪದ್ಮಜಾ.ಎಂ.ವಿ ಮಾತನಾಡಿ, ದೂರು ಬಂದಿದ್ದರೆ ಅದನ್ನು ಪರಿಶೀಲನೆ ಮಾಡಿ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಡ ಮಾಡುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ</strong>: ತಾಲ್ಲೂಕಿನ ಕಂತಾರ್ಲಹಳ್ಳಿ ಸರ್ವೆ ನಂಬರ್ 25 ಎರಡು ಎಕರೆ ಜಮೀನಿನಲ್ಲಿ ವ್ಯಕ್ತಿಯೊಬ್ಬರು ಕಲ್ಲು ಗಣಿ ನಡೆಸುತ್ತಿದ್ದಾರೆ. ಈ ಗಣಿ ಕಾನೂನುಬಾಹಿರವಾಗಿ ಮಿತಿಮೀರಿದ ಬ್ಲಾಸ್ಟಿಂಗ್ ಮಾಡುತ್ತಿದೆ. ತ್ಯಾಜ್ಯ ವಸ್ತುಗಳನ್ನು ರಸ್ತೆ ಪಕ್ಕದ ಸರ್ಕಾರಿ ಜಾಗದಲ್ಲಿ ಹಾಕಲಾಗುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.</p>.<p>ಈ ಬಗ್ಗೆ ಸಾರ್ವಜನಿಕರು ತಹಶೀಲ್ದಾರರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತಹಶೀಲ್ದಾರರು ಗಣಿ ಮಾಲೀಕರಿಗೆ ನೋಟಿಸ್ ನೀಡಿದರು. ಇದಕ್ಕೆ ಮಾಲೀಕರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಕಾನೂನು ಬಾಹಿರ ಕಾರ್ಯ ಮುಂದುವರಿಸಿದ್ದರು.</p>.<p>ಈ ಪರಿಸ್ಥಿತಿ ಪರಿಶೀಲಿಸಿದ ತಹಶೀಲ್ದಾರರು ಸಿಗ್ಬತ್ವುಲ್ಲಾ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಿಗೆ ದೂರು ನೀಡಿದ್ದಾರೆ. ಕಲ್ಲು ಗಣಿಯಲ್ಲಿ ನಡೆಯುತ್ತಿರುವ ಕಾನೂನು ಬಾಹಿರ ಬ್ಲಾಸ್ಟಿಂಗ್ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಕೋರಿದ್ದಾರೆ.</p>.<p>ದಪ್ಪರ್ತಿ, ಭತ್ತಲಹಳ್ಳಿ, ಹನುಮಂತಪುರ ಮುಂತಾದ ಸಮೀಪದ ಗ್ರಾಮಗಳ ಜನರಿಗೂ ಈ ಗಣಿಯಿಂದ ತೊಂದರೆಯಾಗುತ್ತಿದೆ. ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕರ ತೊಂದರೆಗಳನ್ನು ದಾಖಲಿಸಿದ್ದಾರೆ. </p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪನಿರ್ದೇಶಕರಾದ ಪದ್ಮಜಾ.ಎಂ.ವಿ ಮಾತನಾಡಿ, ದೂರು ಬಂದಿದ್ದರೆ ಅದನ್ನು ಪರಿಶೀಲನೆ ಮಾಡಿ ಕ್ರಮ ಜರುಗಿಸಲಾಗುವುದು. ಯಾವುದೇ ಕಾರಣಕ್ಕೂ ತಡ ಮಾಡುವುದಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>