<p><strong>ಚಿಕ್ಕಬಳ್ಳಾಪುರ: </strong>ನಗರದ ಎಸ್ಜೆಸಿಐಟಿಯಲ್ಲಿ ಗುರುವಾರ ರೋಟರಿ ಚಿಕ್ಕಬಳ್ಳಾಪುರ ಬಿಜಿಎಸ್ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.</p>.<p>ನಿಕಟಪೂರ್ವ ಅಧ್ಯಕ್ಷ ಎಸ್.ವಿ. ಮಧುಸೂದನ್ ಅವರು ನೂತನ ಅಧ್ಯಕ್ಷ ಜಿ. ನಾರಾಯಣ್ ಅವರಿಗೆ, ನಿಕಟಪೂರ್ವ ಕಾರ್ಯದರ್ಶಿ ವೈ.ಎ. ಸತೀಶ್, ನೂತನ ಕಾರ್ಯದರ್ಶಿ ಬಿ. ಸುನೀಲ್ ಕುಮಾರ್ ಅವರಿಗೆ ಅಧಿಕಾರ ವರ್ಗಾವಣೆ ಮಾಡಿದರು.</p>.<p>ಸೇವಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದೇ ರೋಟರಿ ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ. ಈ ಹಿಂದಿನ ಅಧ್ಯಕ್ಷರು, ಕಾರ್ಯದರ್ಶಿ ಅವರ ನೇತೃತ್ವದಲ್ಲಿ ನಡೆದ ಸೇವಾ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ನೂತನ ಪದಾಧಿಕಾರಿಗಳು ತಿಳಿಸಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ರೋಟರಿ ಸಂಸ್ಥೆಯು ತನ್ನದೇ ಆದ ಕಾರ್ಯಸೂಚಿ ಹೊಂದಿದೆ. ಸೇವೆಯೇ ಸಂಸ್ಥೆಯ ಆದರ್ಶವಾಗಿದೆ. ಎಲ್ಲರ ಸಹಕಾರದಲ್ಲಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.</p>.<p>ರೋಟರಿ ಸಂಸ್ಥೆಯು 2020–21ನೇ ಸಾಲಿನಲ್ಲಿ ನಡೆಸಿದ ಕಾರ್ಯಕ್ರಮಗಳ ಚಿತ್ರ ಪ್ರದರ್ಶಿಸಲಾಯಿತು. 2021–22ನೇ ಸಾಲಿನಲ್ಲಿ ಕೈಗೊಳ್ಳುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ವಿಜಯ್ನಾಗ್, ಎಂ.ಎನ್.ವತ್ಸಲಾ, ರಾಜನ್, ಎಂ.ವಿ.ಶಶಿಕುಮಾರ್, ಪುರುಷೋತ್ತಮ್, ಮೋಹನ್ ಬಾಬು, ಎಂ.ಟ.ನಟರಾಜ್, ಗೀತಾದೇವಿ ಸಂಸ್ಥೆಯ ನೂತನ ಪದಾಧಿಕಾರಿಗಳಾಗಿ ನೇಮಕವಾದರು. ಸಂಸ್ಥೆಯ ಉದಯಕುಮಾರ್ ಭಾಸ್ಕರ, ವಿ. ಶ್ರೀನಿವಾಸಮೂರ್ತಿ, ಎಸ್.ವಿ. ಸುಧಾಕರ್, ಡಿ.ಪಿ. ಮುನಿಯಪ್ಪ, ಜಿ.ಟಿ. ರಾಜು, ಜೆ. ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ನಗರದ ಎಸ್ಜೆಸಿಐಟಿಯಲ್ಲಿ ಗುರುವಾರ ರೋಟರಿ ಚಿಕ್ಕಬಳ್ಳಾಪುರ ಬಿಜಿಎಸ್ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.</p>.<p>ನಿಕಟಪೂರ್ವ ಅಧ್ಯಕ್ಷ ಎಸ್.ವಿ. ಮಧುಸೂದನ್ ಅವರು ನೂತನ ಅಧ್ಯಕ್ಷ ಜಿ. ನಾರಾಯಣ್ ಅವರಿಗೆ, ನಿಕಟಪೂರ್ವ ಕಾರ್ಯದರ್ಶಿ ವೈ.ಎ. ಸತೀಶ್, ನೂತನ ಕಾರ್ಯದರ್ಶಿ ಬಿ. ಸುನೀಲ್ ಕುಮಾರ್ ಅವರಿಗೆ ಅಧಿಕಾರ ವರ್ಗಾವಣೆ ಮಾಡಿದರು.</p>.<p>ಸೇವಾ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದೇ ರೋಟರಿ ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ. ಈ ಹಿಂದಿನ ಅಧ್ಯಕ್ಷರು, ಕಾರ್ಯದರ್ಶಿ ಅವರ ನೇತೃತ್ವದಲ್ಲಿ ನಡೆದ ಸೇವಾ ಕಾರ್ಯಕ್ರಮಗಳನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ನೂತನ ಪದಾಧಿಕಾರಿಗಳು ತಿಳಿಸಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ರೋಟರಿ ಸಂಸ್ಥೆಯು ತನ್ನದೇ ಆದ ಕಾರ್ಯಸೂಚಿ ಹೊಂದಿದೆ. ಸೇವೆಯೇ ಸಂಸ್ಥೆಯ ಆದರ್ಶವಾಗಿದೆ. ಎಲ್ಲರ ಸಹಕಾರದಲ್ಲಿ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.</p>.<p>ರೋಟರಿ ಸಂಸ್ಥೆಯು 2020–21ನೇ ಸಾಲಿನಲ್ಲಿ ನಡೆಸಿದ ಕಾರ್ಯಕ್ರಮಗಳ ಚಿತ್ರ ಪ್ರದರ್ಶಿಸಲಾಯಿತು. 2021–22ನೇ ಸಾಲಿನಲ್ಲಿ ಕೈಗೊಳ್ಳುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.</p>.<p>ವಿಜಯ್ನಾಗ್, ಎಂ.ಎನ್.ವತ್ಸಲಾ, ರಾಜನ್, ಎಂ.ವಿ.ಶಶಿಕುಮಾರ್, ಪುರುಷೋತ್ತಮ್, ಮೋಹನ್ ಬಾಬು, ಎಂ.ಟ.ನಟರಾಜ್, ಗೀತಾದೇವಿ ಸಂಸ್ಥೆಯ ನೂತನ ಪದಾಧಿಕಾರಿಗಳಾಗಿ ನೇಮಕವಾದರು. ಸಂಸ್ಥೆಯ ಉದಯಕುಮಾರ್ ಭಾಸ್ಕರ, ವಿ. ಶ್ರೀನಿವಾಸಮೂರ್ತಿ, ಎಸ್.ವಿ. ಸುಧಾಕರ್, ಡಿ.ಪಿ. ಮುನಿಯಪ್ಪ, ಜಿ.ಟಿ. ರಾಜು, ಜೆ. ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>