ಸಭೆಯಲ್ಲಿ ಮಾತನಾಡಿದ ಶಿವಶಂಕರರೆಡ್ಡಿ ಅವರು, ‘ಎಚ್.ನರಸಿಂಹಯ್ಯ ವಿಜ್ಞಾನ ಕೇಂದ್ರದಲ್ಲಿ ಸಭಾಂಗಣ ಕಾಮಗಾರಿ ಪೂರ್ಣಗೊಳಿಸಬೇಕು. ತಾರಾಲಯ ಸ್ಥಾಪನೆಗೆ ಕ್ರಮಕೈಗೊಳ್ಳಬೇಕು. ಕುರೂಡಿ ಅರಣ್ಯ ಪ್ರದೇಶದಲ್ಲಿ ನೀರು ಸಂರಕ್ಷಣಾ ಯೋಜನೆಯನ್ನು ಜಾರಿಗೊಳಿಸಬೇಕು. ಮಿನಿ ವಿಧಾನಸೌಧ ಹಾಗೂ ಅಂಬೇಡ್ಕರ್ ಅಧ್ಯಯನ ಕೇಂದ್ರದ ಕಾಮಗಾರಿಗಳು ತ್ವರಿತವಾಗಿ ಅನುಷ್ಠಾನಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.