ಚಿಕ್ಕಬಳ್ಳಾಪುರ: ‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿಚಾರದಲ್ಲಿ ಮುಸ್ಲಿಮರನ್ನು ಎತ್ತಿಕಟ್ಟಿ, ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್ ಮತ್ತು ಕಮ್ಯೂನಿಸ್ಟ್ ನಾಯಕರು ಬಹಿರಂಗ ವೇದಿಕೆಗೆ ಚರ್ಚೆಗೆ ಬಂದು, ಸಿಎಎಯಿಂದ ಭಾರತದಲ್ಲಿ ಹುಟ್ಟಿದ ಮುಸ್ಲಿಮರಿಗೆ ಯಾವ ರೀತಿ ತೊಂದರೆಯಾಗುತ್ತದೆ ಎಂಬುದರ ಕುರಿತು ಚರ್ಚೆ ಮಾಡಲಿ. ಆದರೆ ವಿರೋಧ ಪಕ್ಷದವರು ಚರ್ಚೆಗೂ ಬರದೆ, ಅದಕ್ಕೆ ಅವಕಾಶವನ್ನೂ ಕೊಡದೆ ನಿರಂತರ ಅಪಪ್ರಚಾರ ಮಾಡುತ್ತಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.