<p><strong>ಚಿಕ್ಕಬಳ್ಳಾಪುರ: </strong>‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಗಳಿಸಲು ಓದಿನಷ್ಟೇ ಕೌಶಲವೂ ಮುಖ್ಯ. ಇವತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಆದ್ದರಿಂದ ವಿದ್ಯಾರ್ಥಿಗಳು ಕೌಶಲಕ್ಕೆ ಒತ್ತು ನೀಡಬೇಕು’ ಎಂದು ನಗರದ ಹೊರ ವಲಯದಲ್ಲಿರುವ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದ ಡೀನ್ ಪಿ.ಹರೀಶ್ ಹೇಳಿದರು.</p>.<p>ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವರ್ಚುವಲ್ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಎಷ್ಟೇ ಉನ್ನತ ಶಿಕ್ಷಣ ಪಡೆದರೂ ಸಂವಹನ ಕೌಶಲವನ್ನು ಬೆಳೆಸಿಕೊಳ್ಳಬೇಕು. ಎಷ್ಟೋ ವಿದ್ಯಾರ್ಥಿಗಳಿಗೆ ಇಂದಿಗೂ ಉದ್ಯೋಗ ನೀಡುವ ಕಂಪನಿಗಳು ಏರ್ಪಡಿಸುವ ಸಂದರ್ಶನ ಎದುರಿಸುವ ಕಲೆ ಗೊತ್ತಿಲ್ಲದೇ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಸತತ ಅಧ್ಯಯನದಿಂದ ಜ್ಞಾರ್ನಾಜನೆ ಹೆಚ್ಚಾಗಲು ಸಾಧ್ಯ ಹೆಚ್ಚುತ್ತದೆ. ಆದರೆ ಇಂದಿನ ಬಹಳಷ್ಟು ವಿದ್ಯಾರ್ಥಿಗಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಒಂದು ತರಗತಿ ಮುಗಿದ ತಕ್ಷಣ ಕಲಿಕೆ ಮುಗಿಯುವುದಿಲ್ಲ. ನಿರಂತರವಾದ ಅಧ್ಯಯನ ಇದ್ದರೆ ಮಾತ್ರ ಯಾವುದೇ ರಂಗದಲ್ಲಿ ಯಶಸ್ಸು ಸಾಧಿಸಬಹುದು’ ಎಂದರು.</p>.<p>‘ಪ್ರಸ್ತುತ ದಿನಗಳಲ್ಲಿ ನಾವು ಎಷ್ಟು ಓದಿದ್ದೇವೆ ಎಂಬುದು ಮುಖ್ಯವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಬರೀ ಪುಸ್ತಕಕ್ಕೆ ಸೀಮಿತವಾಗಬಾರದು. ದೇಶ ಮತ್ತು ಸಮಾಜದ ಒಳಿತಿಗೆ ವಿಭಿನ್ನ ಯೋಚನೆಗಳನ್ನು ಮಾಡಬೇಕು. ತಂತ್ರಜ್ಞಾನ ಯುಗದಲ್ಲಿ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆಯೆ ದೇಶದ ಭವಿಷ್ಯ ನಿಂತಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಂಜಿನಿಯರ್ಗಳ ಪಾತ್ರ ಅಮೂಲ್ಯವಾಗಿರುವುದರಿಂದ ಆಳವಾದ ಅಧ್ಯಯನಕ್ಕೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕೆಲ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಕಾಲೇಜಿನಿಂದ ವಿವಿಧ ವಿಭಾಗಗಳ ಒಟ್ಟು 621 ವಿದ್ಯಾರ್ಥಿಗಳು ಪದವಿ ಪಡೆದರು. ಕಾಲೇಜಿನ ಪ್ರಾಂಶುಪಾಲ ಎಸ್.ಜಿ.ಗೋಪಾಲಕೃಷ್ಣ, ಪರೀಕ್ಷಾ ನಿಯಂತ್ರಕ ಎಚ್.ಸಿ.ಯೋಗೀಶ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಜಿ.ಎಂ.ಬಸವರಾಜ, ಕೆ.ಎನ್.ನಾಗೇಶ್, ಎಂ.ವಿ.ಸರ್ವೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಉದ್ಯೋಗ ಗಳಿಸಲು ಓದಿನಷ್ಟೇ ಕೌಶಲವೂ ಮುಖ್ಯ. ಇವತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ಆದ್ದರಿಂದ ವಿದ್ಯಾರ್ಥಿಗಳು ಕೌಶಲಕ್ಕೆ ಒತ್ತು ನೀಡಬೇಕು’ ಎಂದು ನಗರದ ಹೊರ ವಲಯದಲ್ಲಿರುವ ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದ ಡೀನ್ ಪಿ.ಹರೀಶ್ ಹೇಳಿದರು.</p>.<p>ನಾಗಾರ್ಜುನ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವರ್ಚುವಲ್ ಪದವಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಎಷ್ಟೇ ಉನ್ನತ ಶಿಕ್ಷಣ ಪಡೆದರೂ ಸಂವಹನ ಕೌಶಲವನ್ನು ಬೆಳೆಸಿಕೊಳ್ಳಬೇಕು. ಎಷ್ಟೋ ವಿದ್ಯಾರ್ಥಿಗಳಿಗೆ ಇಂದಿಗೂ ಉದ್ಯೋಗ ನೀಡುವ ಕಂಪನಿಗಳು ಏರ್ಪಡಿಸುವ ಸಂದರ್ಶನ ಎದುರಿಸುವ ಕಲೆ ಗೊತ್ತಿಲ್ಲದೇ ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ’ ಎಂದು ತಿಳಿಸಿದರು.</p>.<p>‘ಸತತ ಅಧ್ಯಯನದಿಂದ ಜ್ಞಾರ್ನಾಜನೆ ಹೆಚ್ಚಾಗಲು ಸಾಧ್ಯ ಹೆಚ್ಚುತ್ತದೆ. ಆದರೆ ಇಂದಿನ ಬಹಳಷ್ಟು ವಿದ್ಯಾರ್ಥಿಗಳು ಓದಿನ ಮೇಲೆ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ. ಒಂದು ತರಗತಿ ಮುಗಿದ ತಕ್ಷಣ ಕಲಿಕೆ ಮುಗಿಯುವುದಿಲ್ಲ. ನಿರಂತರವಾದ ಅಧ್ಯಯನ ಇದ್ದರೆ ಮಾತ್ರ ಯಾವುದೇ ರಂಗದಲ್ಲಿ ಯಶಸ್ಸು ಸಾಧಿಸಬಹುದು’ ಎಂದರು.</p>.<p>‘ಪ್ರಸ್ತುತ ದಿನಗಳಲ್ಲಿ ನಾವು ಎಷ್ಟು ಓದಿದ್ದೇವೆ ಎಂಬುದು ಮುಖ್ಯವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಬರೀ ಪುಸ್ತಕಕ್ಕೆ ಸೀಮಿತವಾಗಬಾರದು. ದೇಶ ಮತ್ತು ಸಮಾಜದ ಒಳಿತಿಗೆ ವಿಭಿನ್ನ ಯೋಚನೆಗಳನ್ನು ಮಾಡಬೇಕು. ತಂತ್ರಜ್ಞಾನ ಯುಗದಲ್ಲಿ ಕೌಶಲಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮೇಲೆಯೆ ದೇಶದ ಭವಿಷ್ಯ ನಿಂತಿದೆ. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಂಜಿನಿಯರ್ಗಳ ಪಾತ್ರ ಅಮೂಲ್ಯವಾಗಿರುವುದರಿಂದ ಆಳವಾದ ಅಧ್ಯಯನಕ್ಕೆ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕೆಲ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಕಾಲೇಜಿನಿಂದ ವಿವಿಧ ವಿಭಾಗಗಳ ಒಟ್ಟು 621 ವಿದ್ಯಾರ್ಥಿಗಳು ಪದವಿ ಪಡೆದರು. ಕಾಲೇಜಿನ ಪ್ರಾಂಶುಪಾಲ ಎಸ್.ಜಿ.ಗೋಪಾಲಕೃಷ್ಣ, ಪರೀಕ್ಷಾ ನಿಯಂತ್ರಕ ಎಚ್.ಸಿ.ಯೋಗೀಶ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಜಿ.ಎಂ.ಬಸವರಾಜ, ಕೆ.ಎನ್.ನಾಗೇಶ್, ಎಂ.ವಿ.ಸರ್ವೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>