‘ಎಲ್ಲ ಹೊಣೆಗಾರಿಕೆಗಳನ್ನು ನಮ್ಮ ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಮುಖ್ಯಮಂತ್ರಿ ಅವರು ಆಸ್ಪತ್ರೆಯಲ್ಲಿದ್ದರೂ ಸಚಿವರು, ಅಧಿಕಾರಿಗಳಿಗೆ ಅಲ್ಲಿಂದಲೇ ಪರಿಸ್ಥಿತಿ ನಿರ್ವಹಣೆಗೆ ಸೂಚನೆ ನೀಡಿದ್ದಾರೆ. ಕಂದಾಯ ಸಚಿವರು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಆಪತ್ತಿನಲ್ಲಿ ಸಿಲುಕಿರುವವರ ರಕ್ಷಣೆಗೆ ಆದ್ಯತೆ ನೀಡಲು ಸೂಚಿಸಿದ್ದಾರೆ. ಅಭಿವೃದ್ಧಿ ಮತ್ತು ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವಲ್ಲಿ ಉತ್ತಮ ರೀತಿಯಲ್ಲಿ ಕೆಲಸ ನಡೆದಿವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.