<p><strong>ಕಲ್ಲಿ ತಾಂಡ (ಆಂಧ್ರಪ್ರದೇಶ):</strong> ಪಾಕಿಸ್ತಾನದ ಜೊತೆ ಗುಂಡಿನ ಕಾಳಗದಲ್ಲಿ ವೀರಮರಣ ಹೊಂದಿದ ಹುತಾತ್ಮ ಯೋಧ ಎಂ.ಮುರಳಿ ನಾಯ್ಕ್ (25) ಅಂತ್ಯಸಂಸ್ಕಾರ ಭಾನುವಾರ ಸ್ವಗ್ರಾಮ ಆಂಧ್ರಪ್ರದೇಶದ ಕಲ್ಲಿ ತಾಂಡಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.</p>.<p>ಮುರುಳಿ ಹೆತ್ತವರು, ಸಂಬಂಧಿಕರು ಮತ್ತು ನೆರೆದಿದ್ದ ಸಾವಿರಾರು ಜನರು ಭಾರವಾದ ಹೃದಯದೊಂದಿಗೆ ಕಣ್ಣೀರ ವಿದಾಯ ಹೇಳಿದರು. ‘ಮುರಳಿ ನಾಯ್ಕ್ ಅಮರ್ ರಹೇ’ ಘೋಷಣೆಗಳು ಮುಗಿಲು ಮುಟ್ಟಿದವು. </p>.<p>ಪಾರ್ಥೀವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಸೇನಾ ಅಧಿಕಾರಿಗಳು ಮುರಳಿ ಪೋಷಕರಾದ ಜ್ಯೋತಿಬಾಯಿ ಮತ್ತು ಶ್ರೀರಾಮ ನಾಯ್ಕ್ ಅವರಿಗೆ ಹಸ್ತಾಂತರಿಸಿದರು. ಸೇನಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿ ಅಂತಿಮ ಗೌರವ ಸಲ್ಲಿಸಿದರು.</p>.<p>ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವೆ ಸುನಿತಮ್ಮ ಅಂತಿಮ ನಮನ ಸಲ್ಲಿಸಿ, ಪೋಷಕರನ್ನು ಸಂತೈಸಿದರು. ಸತ್ಯಸಾಯಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದರು. </p>.<p>ಇದಕ್ಕೂ ಮೊದಲು ಗ್ರಾಮದಲ್ಲಿ ನಡೆದ ಪಾರ್ಥೀವ ಶರೀರದ ಮೆರವಣಿಗೆ ಮತ್ತು ಅಂತ್ಯಕ್ರಿಯೆಯಲ್ಲಿ ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ಬಂದಿದ್ದ ಸಾವಿರಾರು ಜನರು ಪಾಲ್ಗೊಂಡು ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲ್ಲಿ ತಾಂಡ (ಆಂಧ್ರಪ್ರದೇಶ):</strong> ಪಾಕಿಸ್ತಾನದ ಜೊತೆ ಗುಂಡಿನ ಕಾಳಗದಲ್ಲಿ ವೀರಮರಣ ಹೊಂದಿದ ಹುತಾತ್ಮ ಯೋಧ ಎಂ.ಮುರಳಿ ನಾಯ್ಕ್ (25) ಅಂತ್ಯಸಂಸ್ಕಾರ ಭಾನುವಾರ ಸ್ವಗ್ರಾಮ ಆಂಧ್ರಪ್ರದೇಶದ ಕಲ್ಲಿ ತಾಂಡಾದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.</p>.<p>ಮುರುಳಿ ಹೆತ್ತವರು, ಸಂಬಂಧಿಕರು ಮತ್ತು ನೆರೆದಿದ್ದ ಸಾವಿರಾರು ಜನರು ಭಾರವಾದ ಹೃದಯದೊಂದಿಗೆ ಕಣ್ಣೀರ ವಿದಾಯ ಹೇಳಿದರು. ‘ಮುರಳಿ ನಾಯ್ಕ್ ಅಮರ್ ರಹೇ’ ಘೋಷಣೆಗಳು ಮುಗಿಲು ಮುಟ್ಟಿದವು. </p>.<p>ಪಾರ್ಥೀವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರಧ್ವಜವನ್ನು ಸೇನಾ ಅಧಿಕಾರಿಗಳು ಮುರಳಿ ಪೋಷಕರಾದ ಜ್ಯೋತಿಬಾಯಿ ಮತ್ತು ಶ್ರೀರಾಮ ನಾಯ್ಕ್ ಅವರಿಗೆ ಹಸ್ತಾಂತರಿಸಿದರು. ಸೇನಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿ ಅಂತಿಮ ಗೌರವ ಸಲ್ಲಿಸಿದರು.</p>.<p>ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವೆ ಸುನಿತಮ್ಮ ಅಂತಿಮ ನಮನ ಸಲ್ಲಿಸಿ, ಪೋಷಕರನ್ನು ಸಂತೈಸಿದರು. ಸತ್ಯಸಾಯಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹಿರಿಯ ಅಧಿಕಾರಿಗಳು ಅಂತಿಮ ಸಂಸ್ಕಾರದಲ್ಲಿ ಭಾಗವಹಿಸಿದ್ದರು. </p>.<p>ಇದಕ್ಕೂ ಮೊದಲು ಗ್ರಾಮದಲ್ಲಿ ನಡೆದ ಪಾರ್ಥೀವ ಶರೀರದ ಮೆರವಣಿಗೆ ಮತ್ತು ಅಂತ್ಯಕ್ರಿಯೆಯಲ್ಲಿ ಆಂಧ್ರಪ್ರದೇಶ ಮತ್ತು ಕರ್ನಾಟಕದಿಂದ ಬಂದಿದ್ದ ಸಾವಿರಾರು ಜನರು ಪಾಲ್ಗೊಂಡು ವೀರಯೋಧನಿಗೆ ಅಂತಿಮ ನಮನ ಸಲ್ಲಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>