<p>ಚಿಕ್ಕಬಳ್ಳಾಪುರ: ಜಿಲ್ಲೆಯ ಸಂಘ ಸಂಸ್ಥೆಗಳಲ್ಲಿ 75ನೇ ಸ್ವಾತಂತ್ರ್ಯದ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು ಸ್ವಾತಂತ್ರ್ಯ ಹೋರಾಟಕ್ಕಾಗಿ ಬಲಿದಾನವಾದ ಮಹನೀಯರ ಹೋರಾಟಗಳನ್ನು ಸ್ಮರಿಸಿದರು.</p>.<p>ನಗರಸಭೆ: ನಗರಸಭೆ ಕಟ್ಟಡಕ್ಕೆ ಶನಿವಾರ ರಾತ್ರಿಯಿಂದಲೇ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಧ್ವಜಾರೋಹಣ ನೆರವೇರಿಸಿದ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹಲವರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಜಿಲ್ಲೆಯೂ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿತ್ತು ಎಂದು ಹೇಳಿದರು.</p>.<p>ಜಿಲ್ಲೆಯ ವಿಧುರಾಶ್ವತ್ಥ ಕರ್ನಾಟಕ ಜಲಿಯನ್ ವಾಲಾಬಾಗ್ ಎನಿಸಿದೆ. ಜಿಲ್ಲೆಯ ಹಲವು ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ<br />ದ್ದಾರೆ. ಯುವ ಸಮುದಾಯದ ಸ್ವಾತಂತ್ರ್ಯ ಹೋರಾಟಗಳ ಮಹೋನ್ನತ ಆದರ್ಶಗಳನ್ನು ಎಂದಿಗೂ ಸ್ಮರಿಸಿಕೊಳ್ಳಬೇಕು ಎಂದರು. ನಗರಸಭೆಯ ಸಿಬ್ಬಂದಿ ಹಾಜರಿದ್ದರು.</p>.<p>ಬಿಜಿಎಸ್ ಶಾಲೆ: ಅಗಲಗುರ್ಕಿಯ ಬಿಜಿಎಸ್ ಶಾಲೆಯಲ್ಲಿ ಬಿಡಿಸಿದ್ದ ಭಾರತದ ದೇಶದ ಭೂಪಟ ಗಮನ ಸೆಳೆಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಭಾವುಟದ ಸುತ್ತ ನೃತ್ಯ ಮಾಡಿದರು. ವಿವಿಧ ವೇಷಭೂಷಣವನ್ನು ತೊಟ್ಟಿದ್ದ ಮಕ್ಕಳು ಗಮನ ಸೆಳೆದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಶಿವರಾಮರೆಡ್ಡಿ, ಮುಖ್ಯ ಶಿಕ್ಷಕ ಮೋಹನ್ ಕುಮಾರ್ ಮತ್ತಿತರರು ಇದ್ದರು.</p>.<p>ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆ: ಚಿಕ್ಕಬಳ್ಳಾಪುರದ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆ ಜಿಲ್ಲಾ ಅಧ್ಯಕ್ಷ ಜಿ.ವಿನ್ಸೆಂಟ್ ಅಧ್ಯಕ್ಷತೆವಹಿಸಿದ್ದರು. ಸೆಂಟ್ ಜಾನ್ಸ್ ಮಾರ್ಥೋಮ ಚರ್ಚಿನ ಸಭಾಪಾಲಕ ರೆವರೆಂಡ್ ಕೆ.ಎ. ವರ್ಗಿಸ್ ಧ್ವಜಾರೋಹಣ ನೆರವೇರಿಸಿದರು.</p>.<p>ಆನಂದ್ ಕುಮಾರ್, ಕಾರ್ಯದರ್ಶಿ ಹರಿಪ್ರಸಾದ್, ಖಜಾಂಜಿ ಜೊಬ್, ಸದಸ್ಯರಾದ ಜೋಸೆಫ್, ಮಾರ್ಕ್ ವೆಂಕಟೇಶ್ ವೇದಿಕೆ ಸದಸ್ಯರು ಪಾಲ್ಗೊಂಡಿದ್ದರು.</p>.<p>ನಾಯನಹಳ್ಳಿ ಶಾಲೆ: ಮಳ್ಳೂರು ಜಿ.ಪಾಪಣ್ಣ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ ನಡೆಯಿತು. ಆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ರೈಲು ಹಳಿಗಳನ್ನು ಕೀಳುವುದು, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಹಲವು ರೀತಿಯಲ್ಲಿ ಹೋರಾಟಗಳಿಗೆ ಜಿಲ್ಲೆಯು ಸಾಕ್ಷಿಯಾಯಿತು ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ<br />ತಿಳಿಸಿದರು.</p>.<p>ತಾಲ್ಲೂಕಿನ ನಾಯಕನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಎಸ್.ನಾರಾಯಣಸ್ವಾಮಿ, ಎನ್.ನವೀನ್ ಕುಮಾರ್ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷೆ ಪುಷ್ಪಾ, ಮುಖ್ಯಶಿಕ್ಷಕ ಜಗನ್ನಾಥ್, ಶಿಕ್ಷಕರಾದ ಲಕ್ಷ್ಮಿನಾರಾಯಣ, ನಿವೃತ್ತ ಶಿಕ್ಷಕ ಚನ್ನರಾಯಪ್ಪ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಜಿಲ್ಲೆಯ ಸಂಘ ಸಂಸ್ಥೆಗಳಲ್ಲಿ 75ನೇ ಸ್ವಾತಂತ್ರ್ಯದ ಕಾರ್ಯಕ್ರಮವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು ಸ್ವಾತಂತ್ರ್ಯ ಹೋರಾಟಕ್ಕಾಗಿ ಬಲಿದಾನವಾದ ಮಹನೀಯರ ಹೋರಾಟಗಳನ್ನು ಸ್ಮರಿಸಿದರು.</p>.<p>ನಗರಸಭೆ: ನಗರಸಭೆ ಕಟ್ಟಡಕ್ಕೆ ಶನಿವಾರ ರಾತ್ರಿಯಿಂದಲೇ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಧ್ವಜಾರೋಹಣ ನೆರವೇರಿಸಿದ ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹಲವರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಜಿಲ್ಲೆಯೂ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿತ್ತು ಎಂದು ಹೇಳಿದರು.</p>.<p>ಜಿಲ್ಲೆಯ ವಿಧುರಾಶ್ವತ್ಥ ಕರ್ನಾಟಕ ಜಲಿಯನ್ ವಾಲಾಬಾಗ್ ಎನಿಸಿದೆ. ಜಿಲ್ಲೆಯ ಹಲವು ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ<br />ದ್ದಾರೆ. ಯುವ ಸಮುದಾಯದ ಸ್ವಾತಂತ್ರ್ಯ ಹೋರಾಟಗಳ ಮಹೋನ್ನತ ಆದರ್ಶಗಳನ್ನು ಎಂದಿಗೂ ಸ್ಮರಿಸಿಕೊಳ್ಳಬೇಕು ಎಂದರು. ನಗರಸಭೆಯ ಸಿಬ್ಬಂದಿ ಹಾಜರಿದ್ದರು.</p>.<p>ಬಿಜಿಎಸ್ ಶಾಲೆ: ಅಗಲಗುರ್ಕಿಯ ಬಿಜಿಎಸ್ ಶಾಲೆಯಲ್ಲಿ ಬಿಡಿಸಿದ್ದ ಭಾರತದ ದೇಶದ ಭೂಪಟ ಗಮನ ಸೆಳೆಯಿತು. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಭಾವುಟದ ಸುತ್ತ ನೃತ್ಯ ಮಾಡಿದರು. ವಿವಿಧ ವೇಷಭೂಷಣವನ್ನು ತೊಟ್ಟಿದ್ದ ಮಕ್ಕಳು ಗಮನ ಸೆಳೆದರು. ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಶಿವರಾಮರೆಡ್ಡಿ, ಮುಖ್ಯ ಶಿಕ್ಷಕ ಮೋಹನ್ ಕುಮಾರ್ ಮತ್ತಿತರರು ಇದ್ದರು.</p>.<p>ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆ: ಚಿಕ್ಕಬಳ್ಳಾಪುರದ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೇದಿಕೆ ಜಿಲ್ಲಾ ಅಧ್ಯಕ್ಷ ಜಿ.ವಿನ್ಸೆಂಟ್ ಅಧ್ಯಕ್ಷತೆವಹಿಸಿದ್ದರು. ಸೆಂಟ್ ಜಾನ್ಸ್ ಮಾರ್ಥೋಮ ಚರ್ಚಿನ ಸಭಾಪಾಲಕ ರೆವರೆಂಡ್ ಕೆ.ಎ. ವರ್ಗಿಸ್ ಧ್ವಜಾರೋಹಣ ನೆರವೇರಿಸಿದರು.</p>.<p>ಆನಂದ್ ಕುಮಾರ್, ಕಾರ್ಯದರ್ಶಿ ಹರಿಪ್ರಸಾದ್, ಖಜಾಂಜಿ ಜೊಬ್, ಸದಸ್ಯರಾದ ಜೋಸೆಫ್, ಮಾರ್ಕ್ ವೆಂಕಟೇಶ್ ವೇದಿಕೆ ಸದಸ್ಯರು ಪಾಲ್ಗೊಂಡಿದ್ದರು.</p>.<p>ನಾಯನಹಳ್ಳಿ ಶಾಲೆ: ಮಳ್ಳೂರು ಜಿ.ಪಾಪಣ್ಣ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟ ನಡೆಯಿತು. ಆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ರೈಲು ಹಳಿಗಳನ್ನು ಕೀಳುವುದು, ರಸ್ತೆ ಸಂಪರ್ಕ ಕಡಿತ ಸೇರಿದಂತೆ ಹಲವು ರೀತಿಯಲ್ಲಿ ಹೋರಾಟಗಳಿಗೆ ಜಿಲ್ಲೆಯು ಸಾಕ್ಷಿಯಾಯಿತು ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ<br />ತಿಳಿಸಿದರು.</p>.<p>ತಾಲ್ಲೂಕಿನ ನಾಯಕನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡ ಎಸ್.ನಾರಾಯಣಸ್ವಾಮಿ, ಎನ್.ನವೀನ್ ಕುಮಾರ್ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷೆ ಪುಷ್ಪಾ, ಮುಖ್ಯಶಿಕ್ಷಕ ಜಗನ್ನಾಥ್, ಶಿಕ್ಷಕರಾದ ಲಕ್ಷ್ಮಿನಾರಾಯಣ, ನಿವೃತ್ತ ಶಿಕ್ಷಕ ಚನ್ನರಾಯಪ್ಪ, ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>