ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರು, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚಳ: ಮನಮೋಹನ್‌ ಸಿಂಗ್ ಆತಂಕ

Last Updated 11 ಏಪ್ರಿಲ್ 2018, 14:19 IST
ಅಕ್ಷರ ಗಾತ್ರ

ಚಂಡೀಗಡ: ದೇಶದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ನಿಯಂತ್ರಿಸದಿದ್ದರೆ ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇದೆ ಎಂದು ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್ ಆತಂಕ ವ್ಯಕ್ತಪಡಿಸಿದರು.

ಪಂಜಾಬ್‌ ವಿಶ್ವವಿದ್ಯಾಲಯದಲ್ಲಿ ಎಸ್.ಬಿ. ರಂಗನೇಕರ್ ಸ್ಮಾರಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೌರ್ಜನ್ಯ ಪ್ರಕರಣಗಳನ್ನು ಲಘುವಾಗಿ ಪರಿಗಣಿಸಿದರೆ ದ್ವೇಷದ ರಾಜಕೀಯಕ್ಕೆ ಆಹ್ವಾನ ನೀಡಿದಂತೆ’ ಎಂದರು.

‘ಜಾತಿ, ಧರ್ಮ, ಭಾಷೆ ಮತ್ತು ಸಂಸ್ಕೃತಿ ಆಧಾರದಲ್ಲಿ ಭಾರತೀಯರನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ. ಈ ರೀತಿಯ ರಾಜಕೀಯವನ್ನು ನಾವು ಬಲವಾಗಿ ತಿರಸ್ಕರಿಸಬೇಕು’ ಎಂದು ಅವರು ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT