ಚಿಕ್ಕಬಳ್ಳಾಪುರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಇಡುವಂತೆ ಹೇಳಿದ್ದಾರೆ. ಅನ್ನಪೂರ್ಣೇಶ್ವರಿ ಹೆಸರಿಡುವುದು ತಪ್ಪೇನೂ ಇಲ್ಲ. ಇಂದಿರಾ ಗಾಂಧಿ, ಸೇರಿದಂತೆ ನಮ್ಮೆಲ್ಲರಿಗೂ ತಾಯಿ ಅನ್ನಪೂರ್ಣೇಶ್ವರಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.