<p><strong>ಚಿಕ್ಕಬಳ್ಳಾಪುರ</strong>: ‘ನನ್ನ 40 ದಿನದ ಹಸುಳೆಯನ್ನು ಅಜ್ಜಿಯೇ ಕೊಲೆ ಮಾಡಿದ್ದಾಳೆ’ ಎಂದು 17 ವರ್ಷದ ಬಾಲಕಿಯೊಬ್ಬಳು ದೂರು ನೀಡಿದ್ದಾಳೆ.</p><p>ದೂರಿನ ಹಿಂದೆಯೇ, ಅಂತ್ಯಸಂಸ್ಕಾರ ನಡೆದಿದ್ದ ಮಗುವಿನ ಶವವನ್ನು ಬುಧವಾರ ಚಿಕ್ಕಬಳ್ಳಾಪುರ ಅಪರಾಧ ವಿಭಾಗದ ತನಿಖಾ ತಂಡವು ತನಿಖೆಯ ಭಾಗವಾಗಿ ಸಮಾಧಿಯಿಂದ ಹೊರತೆಗೆಯಿತು. </p><p>ಚೇಳೂರು ತಹಶೀಲ್ದಾರ್ ಶ್ವೇತಾ ಹಾಗೂ ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಸುಜಿತ್ ರೆಡ್ಡಿ, ವೈದ್ಯಾಧಿಕಾರಿ ಭಾಸ್ಕರ್ ಸಮಕ್ಷಮದಲ್ಲಿ ಪಂಚನಾಮೆ ನಡೆದಿದ್ದು, ಶವಪರೀಕ್ಷೆ ಮಾಡಲಾಯಿತು. ದೂರು ನೀಡಿದ ಬಾಲಕಿಯನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಆಕೆಯ ಪತಿಯ ವಿರುದ್ಧ ಪೋಕ್ಸೊ ಅನ್ವಯ ಪ್ರಕರಣ ದಾಖಲಾಗಿದೆ.</p><p><strong>ಘಟನೆ ಹಿನ್ನೆಲೆ: ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಬಾಲಕಿ ರಾಜೇಶ್ ಎಂಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು.</strong></p><p>ಇದೇ ನ.12ರಂದು ಬಾಲಕಿ ಆಂಧ್ರಪ್ರದೇಶದ ಆಸ್ಪತ್ರೆಯೊಂದರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಡಿಸೆಂಬರ್ನಲ್ಲಿ ಮಗುವಿನೊಂದಿಗೆ ಹುಟ್ಟೂರಿಗೆ ಬಂದಿದ್ದರು.</p><p>‘ಮಗುವನ್ನು ಪೋಷಿಸುವುದಾಗಿ ಅಜ್ಜಿ ತೆಗೆದುಕೊಂಡಿದ್ದರು. ಆದರೆ, ಈಗ ಮಗು ಮೃತಪಟ್ಟಿದೆ ಎನ್ನುತ್ತಿದ್ದಾರೆ. ಮಗುವನ್ನು ಅಜ್ಜಿ ಕೊಲೆ ಮಾಡಿರುವ ಶಂಕೆ ಇದೆ. ತನಿಖೆ ನಡೆಸಿ’ ಎಂದು ಬಾಲಕಿ ದೂರು ನೀಡಿದ್ದಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ನನ್ನ 40 ದಿನದ ಹಸುಳೆಯನ್ನು ಅಜ್ಜಿಯೇ ಕೊಲೆ ಮಾಡಿದ್ದಾಳೆ’ ಎಂದು 17 ವರ್ಷದ ಬಾಲಕಿಯೊಬ್ಬಳು ದೂರು ನೀಡಿದ್ದಾಳೆ.</p><p>ದೂರಿನ ಹಿಂದೆಯೇ, ಅಂತ್ಯಸಂಸ್ಕಾರ ನಡೆದಿದ್ದ ಮಗುವಿನ ಶವವನ್ನು ಬುಧವಾರ ಚಿಕ್ಕಬಳ್ಳಾಪುರ ಅಪರಾಧ ವಿಭಾಗದ ತನಿಖಾ ತಂಡವು ತನಿಖೆಯ ಭಾಗವಾಗಿ ಸಮಾಧಿಯಿಂದ ಹೊರತೆಗೆಯಿತು. </p><p>ಚೇಳೂರು ತಹಶೀಲ್ದಾರ್ ಶ್ವೇತಾ ಹಾಗೂ ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಸುಜಿತ್ ರೆಡ್ಡಿ, ವೈದ್ಯಾಧಿಕಾರಿ ಭಾಸ್ಕರ್ ಸಮಕ್ಷಮದಲ್ಲಿ ಪಂಚನಾಮೆ ನಡೆದಿದ್ದು, ಶವಪರೀಕ್ಷೆ ಮಾಡಲಾಯಿತು. ದೂರು ನೀಡಿದ ಬಾಲಕಿಯನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ. ಆಕೆಯ ಪತಿಯ ವಿರುದ್ಧ ಪೋಕ್ಸೊ ಅನ್ವಯ ಪ್ರಕರಣ ದಾಖಲಾಗಿದೆ.</p><p><strong>ಘಟನೆ ಹಿನ್ನೆಲೆ: ಪದವಿಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ಬಾಲಕಿ ರಾಜೇಶ್ ಎಂಬ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು.</strong></p><p>ಇದೇ ನ.12ರಂದು ಬಾಲಕಿ ಆಂಧ್ರಪ್ರದೇಶದ ಆಸ್ಪತ್ರೆಯೊಂದರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಡಿಸೆಂಬರ್ನಲ್ಲಿ ಮಗುವಿನೊಂದಿಗೆ ಹುಟ್ಟೂರಿಗೆ ಬಂದಿದ್ದರು.</p><p>‘ಮಗುವನ್ನು ಪೋಷಿಸುವುದಾಗಿ ಅಜ್ಜಿ ತೆಗೆದುಕೊಂಡಿದ್ದರು. ಆದರೆ, ಈಗ ಮಗು ಮೃತಪಟ್ಟಿದೆ ಎನ್ನುತ್ತಿದ್ದಾರೆ. ಮಗುವನ್ನು ಅಜ್ಜಿ ಕೊಲೆ ಮಾಡಿರುವ ಶಂಕೆ ಇದೆ. ತನಿಖೆ ನಡೆಸಿ’ ಎಂದು ಬಾಲಕಿ ದೂರು ನೀಡಿದ್ದಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>