ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್.ಲತಾ, ‘ಜಿಲ್ಲೆಯಲ್ಲಿ ಕೋವಿಡ್ ಎರಡನೇ ಪ್ರಕರಣದಲ್ಲಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಗುಣಮುಖರಾಗಿ ಸೋಮವಾರ ಮನೆಗೆ ವಾಪಾಸಾಗಿದ್ದಾರೆ. ಉಳಿದ ಎಂಟು ಸೋಂಕಿತ ವ್ಯಕ್ತಿಗಳು ಗುಣಮುಖರಾಗುತ್ತಿರುವುದು ಸಂತಸ ತಂದಿದೆ. ಹಾಗೂ ವಿದೇಶ ಪ್ರಯಾಣ ಮಾಡಿದ್ದ ಜಿಲ್ಲೆಯ ಜನರು ಕ್ವಾರೆಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ.ಆದರೂ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾವಹಿಸಲಾಗುತ್ತಿದೆ’ ಎಂದು ತಿಳಿಸಿದರು.