‘ಕೋವಿಡ್ ಕಾರಣಕ್ಕೆ ಜನಸಾಮಾನ್ಯರು ಆಸ್ಪತ್ರೆಗಳಿಗೆ ಹೋಗುವುದಕ್ಕೆ ಕಷ್ಟವಾಗುತ್ತಿದೆ. ಇಂತಹ ಹೊತ್ತಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಗ್ರಾಮ ಆರೋಗ್ಯ ಸೇವಾ ಕೇಂದ್ರ ತೆರೆದಿರುವುದು ಉತ್ತಮ ಕಾರ್ಯ. ಮಧುಮೇಹ ಪರೀಕ್ಷೆ, ರಕ್ತದೊತ್ತಡ, ಜ್ವರ, ಶೀತ, ಕೆಮ್ಮು, ನೆಗಡಿ ಹಾಗೂ ಉಸಿರಾಟ ತೊಂದರೆಯಂಥ ಕಾಯಿಲೆಗಳನ್ನು ಸ್ಥಳೀಯವಾಗಿ ಪರೀಕ್ಷೆ ಮಾಡಿಕೊಳ್ಳಲು ಈ ಕೇಂದ್ರ ಸಹಕಾರಿ ಆಗಲಿದೆ’ ಎಂದು ಪಟ್ರೇನಹಳ್ಳಿ ನಿವಾಸಿ ರಾಜಗೋಪಾಲ್ ತಿಳಿಸಿದರು.