<p><strong>ಚಿಕ್ಕಬಳ್ಳಾಪುರ</strong>: ರಾಜ್ಯ ಸರ್ಕಾರ ಒಳಮೀಸಲಾತಿ ವಿಚಾರವಾಗಿ ನಡೆಸಿರುವ ಪರಿಶಿಷ್ಟರ ಜಾತಿ ಗಣತಿಯಲ್ಲಿ ಗೊಂದಲಗಳು ಇವೆ. ಆ ಗೊಂದಲಗಳನ್ನು ನಿವಾರಿಸಿ ಆ.15ರ ಒಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಮಾಜಿ ಸಚಿವ ಹಾಗೂ ಮಾದಿಗ ಸಮುದಾಯದ ಮುಖಂಡ ಎ.ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿ ಆ.1ಕ್ಕೆ ಒಂದು ವರ್ಷ ಆಗುತ್ತದೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳ ಜಿಲ್ಲಾಧಿಕಾರಿ ಕಚೇರಿ ಎದುರು ಸಮುದಾಯದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. </p>.<p>ಆ.15ರ ಒಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ರಾಜ್ಯದಲ್ಲಿನ ಮಾದಿಗ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಜೊತೆಗೂಡಿ ಕರ್ನಾಟಕ ಬಂದ್ಗೆ ಕರೆ ನೀಡಲಾಗುವುದು ಎಂದರು.</p>.<p>ಮಾದಿಗ ಸಮುದಾಯವು ಒಳಮೀಸಲಾತಿಗಾಗಿ ಮೂರು ದಶಕಗಳಿಂದ ಹೋರಾಟ ನಡೆಸಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿ ಒಂದು ವರ್ಷವಾದರೂ ಒಳಮೀಸಲಾತಿ ಜಾರಿಯಾಗಿಲ್ಲ. ಈ ಕಾರಣ ಆ.1ರಂದು ಅರೆ ಬೆತ್ತಲೆ ಚಳವಳಿ ನಡೆಸುತ್ತೇವೆ. ಪಕ್ಷಾತೀತವಾಗಿ ಈ ಹೋರಾಟ ನಡೆಯಲಿದೆ ಎಂದರು.</p>.<p>ಆಂಧ್ರಪ್ರದೇಶ, ತೆಲಂಗಾಣದಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಸಮೀಕ್ಷೆಯಲ್ಲಿ ಅಲ್ಲಿ ಸಿದ್ಧಪಡಿಸಿದ್ದ ಕಾಲಂಗಳ ಮಾದರಿಗಳು ನಮ್ಮ ರಾಜ್ಯದಲ್ಲಿ ನಿಗದಿಗೊಳಿಸಿಲ್ಲ. ಈ ಕಾರಣದಿಂದ ಸಮೀಕ್ಷೆಯು ಅನೇಕ ಗೊಂದಲಗಳಿಂದ ಕೂಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ 52 ಮತ್ತು ರಾಜ್ಯದ ಇತರೆ ಕಡೆಗಳಲ್ಲಿ ಶೇ 91ರಷ್ಟು ಸಮೀಕ್ಷೆಯಾಗಿದೆ ಎಂದು ಸರ್ಕಾರ ತಿಳಿಸಿದೆ ಎಂದು ಹೇಳಿದರು.</p>.<p>ಒಳಮೀಸಲಾತಿ ಹೋರಾಟವನ್ನು ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳು ಮಾಡಲಿಲ್ಲ. 30 ವರ್ಷ ಹೋರಾಟ ಮಾಡಿ ಜೀವ ಕಳೆದುಕೊಂಡಿರುವವರು ಮಾದಿಗ ಸಮುದಾಯದ ಉಪಜಾತಿಗಳು ಮಾತ್ರ. ಒಳಮೀಸಲಾತಿ ವಿಚಾರವಾಗಿ ಸರ್ಕಾರದ ಮೇಲೆ ಅನುಮಾನಗಳು ಇವೆ ಎಂದು ಹೇಳಿದರು.</p>.<p>ಸಮೀಕ್ಷೆಯ ವೇಳೆ ಎಕೆ, ಎಡಿ, ಆದಿ ಆಂಧ್ರದ ಬಗ್ಗೆ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸ್ಥಾನಗಳು ಸೇರಿದಂತೆ ಹಲವು ಮಾಹಿತಿಗಳನ್ನು ಕಲೆ ಹಾಕಿಲ್ಲ. ಮಾದಿಗ ಸಮಾಜಕ್ಕೆ ಒಳಮೀಸಲಾತಿ ಕೊಡಬಾರದು ಎಂದು ಗೊಂದ ಸೃಷ್ಟಿ ಮಾಡಿದ್ದಾರೆ ಎಂದು ದೂರಿದರು.</p>.<p>ಉತ್ತರ ಕರ್ನಾಟಕ ಭಾಗದಲ್ಲಿ ಸಂಸದ ಗೋವಿಂದ ಕಾರಜೋಳ ಮತ್ತು ಹಳೆ ಮೈಸೂರು ಭಾಗದಲ್ಲಿ ನನ್ನ ನೇತೃತ್ವದಲ್ಲಿ ಚಳವಳಿ ನಡೆಯಲಿದೆ. ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕು. ಸಮೀಕ್ಷೆಯ ವಿಚಾರದಲ್ಲಿನ ಗೊಂದಲಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಯಾವುದೇ ಸರ್ಕಾರ ಜಾತಿ ಗಣತಿಯನ್ನು ಬದ್ಧತೆಯಿಂದ ನಡೆಸಬೇಕು. ವರದಿ ಬಹಿರಂಗ ಆಗಬಾರದು. ಈ ಹಿಂದೆ ಕಾಂತರಾಜು ನೇತೃತ್ವದಲ್ಲಿ ನಡೆಸಿದ ಸಮೀಕ್ಷೆಯ ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದಾರೆ. ₹170 ಕೋಟಿ ಪೋಲಾಗಿದೆ ಎಂದರು.</p>.<p>75 ವರ್ಷ ಆಡಳಿತ ನಡೆಸಿದ ಸರ್ಕಾರದಿಂದ ಮಾದಿಗ ಸಮುದಾಯವು ಅಭಿವೃದ್ಧಿ ಆಗಲೇ ಇಲ್ಲ ಎಂದು ಆರೋಪಿಸಿದರು. </p>.<p>ಮಾದಿಗ ಸಮುದಾಯದ ಮುಖಂಡರಾದ ತಿರುಮಳಪ್ಪ, ಕೃಷ್ಣಮೂರ್ತಿ, ಬಾಲಕುಂಟಹಳ್ಳಿ ಗಂಗಾಧರ್, ರಾಜಪ್ಪ, ಮುನಿಕೃಷ್ಣಪ್ಪ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. </p>.<p><strong>ಪಕ್ಷದ ವಿಚಾರವಲ್ಲ; ಸಮುದಾಯದ ಹಿತ </strong></p><p>ನಮ್ಮ ಹೋರಾಟದಲ್ಲಿ ಬಿಜೆಪಿ ಕಾಂಗ್ರೆಸ್ ಎನ್ನುವ ಯಾವ ಪ್ರಶ್ನೆಯೂ ಇಲ್ಲ. ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು. ಇದು ಪಕ್ಷದ ವಿಚಾರವಲ್ಲ. ಸಮುದಾಯದ ಹಿತದ ಪ್ರಶ್ನೆ ಎಂದು ಎ.ನಾರಾಯಣಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ರಾಜ್ಯ ಸರ್ಕಾರ ಒಳಮೀಸಲಾತಿ ವಿಚಾರವಾಗಿ ನಡೆಸಿರುವ ಪರಿಶಿಷ್ಟರ ಜಾತಿ ಗಣತಿಯಲ್ಲಿ ಗೊಂದಲಗಳು ಇವೆ. ಆ ಗೊಂದಲಗಳನ್ನು ನಿವಾರಿಸಿ ಆ.15ರ ಒಳಗೆ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಮಾಜಿ ಸಚಿವ ಹಾಗೂ ಮಾದಿಗ ಸಮುದಾಯದ ಮುಖಂಡ ಎ.ನಾರಾಯಣಸ್ವಾಮಿ ಆಗ್ರಹಿಸಿದರು.</p>.<p>ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಒಳಮೀಸಲಾತಿ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿ ಆ.1ಕ್ಕೆ ಒಂದು ವರ್ಷ ಆಗುತ್ತದೆ. ಈ ಹಿನ್ನೆಲೆಯಲ್ಲಿ ಅಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳ ಜಿಲ್ಲಾಧಿಕಾರಿ ಕಚೇರಿ ಎದುರು ಸಮುದಾಯದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು. </p>.<p>ಆ.15ರ ಒಳಗೆ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ರಾಜ್ಯದಲ್ಲಿನ ಮಾದಿಗ ಸಂಘಟನೆಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳ ಜೊತೆಗೂಡಿ ಕರ್ನಾಟಕ ಬಂದ್ಗೆ ಕರೆ ನೀಡಲಾಗುವುದು ಎಂದರು.</p>.<p>ಮಾದಿಗ ಸಮುದಾಯವು ಒಳಮೀಸಲಾತಿಗಾಗಿ ಮೂರು ದಶಕಗಳಿಂದ ಹೋರಾಟ ನಡೆಸಿದೆ. ಸುಪ್ರೀಂಕೋರ್ಟ್ ತೀರ್ಪು ನೀಡಿ ಒಂದು ವರ್ಷವಾದರೂ ಒಳಮೀಸಲಾತಿ ಜಾರಿಯಾಗಿಲ್ಲ. ಈ ಕಾರಣ ಆ.1ರಂದು ಅರೆ ಬೆತ್ತಲೆ ಚಳವಳಿ ನಡೆಸುತ್ತೇವೆ. ಪಕ್ಷಾತೀತವಾಗಿ ಈ ಹೋರಾಟ ನಡೆಯಲಿದೆ ಎಂದರು.</p>.<p>ಆಂಧ್ರಪ್ರದೇಶ, ತೆಲಂಗಾಣದಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಸಮೀಕ್ಷೆಯಲ್ಲಿ ಅಲ್ಲಿ ಸಿದ್ಧಪಡಿಸಿದ್ದ ಕಾಲಂಗಳ ಮಾದರಿಗಳು ನಮ್ಮ ರಾಜ್ಯದಲ್ಲಿ ನಿಗದಿಗೊಳಿಸಿಲ್ಲ. ಈ ಕಾರಣದಿಂದ ಸಮೀಕ್ಷೆಯು ಅನೇಕ ಗೊಂದಲಗಳಿಂದ ಕೂಡಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ 52 ಮತ್ತು ರಾಜ್ಯದ ಇತರೆ ಕಡೆಗಳಲ್ಲಿ ಶೇ 91ರಷ್ಟು ಸಮೀಕ್ಷೆಯಾಗಿದೆ ಎಂದು ಸರ್ಕಾರ ತಿಳಿಸಿದೆ ಎಂದು ಹೇಳಿದರು.</p>.<p>ಒಳಮೀಸಲಾತಿ ಹೋರಾಟವನ್ನು ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳು ಮಾಡಲಿಲ್ಲ. 30 ವರ್ಷ ಹೋರಾಟ ಮಾಡಿ ಜೀವ ಕಳೆದುಕೊಂಡಿರುವವರು ಮಾದಿಗ ಸಮುದಾಯದ ಉಪಜಾತಿಗಳು ಮಾತ್ರ. ಒಳಮೀಸಲಾತಿ ವಿಚಾರವಾಗಿ ಸರ್ಕಾರದ ಮೇಲೆ ಅನುಮಾನಗಳು ಇವೆ ಎಂದು ಹೇಳಿದರು.</p>.<p>ಸಮೀಕ್ಷೆಯ ವೇಳೆ ಎಕೆ, ಎಡಿ, ಆದಿ ಆಂಧ್ರದ ಬಗ್ಗೆ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸ್ಥಾನಗಳು ಸೇರಿದಂತೆ ಹಲವು ಮಾಹಿತಿಗಳನ್ನು ಕಲೆ ಹಾಕಿಲ್ಲ. ಮಾದಿಗ ಸಮಾಜಕ್ಕೆ ಒಳಮೀಸಲಾತಿ ಕೊಡಬಾರದು ಎಂದು ಗೊಂದ ಸೃಷ್ಟಿ ಮಾಡಿದ್ದಾರೆ ಎಂದು ದೂರಿದರು.</p>.<p>ಉತ್ತರ ಕರ್ನಾಟಕ ಭಾಗದಲ್ಲಿ ಸಂಸದ ಗೋವಿಂದ ಕಾರಜೋಳ ಮತ್ತು ಹಳೆ ಮೈಸೂರು ಭಾಗದಲ್ಲಿ ನನ್ನ ನೇತೃತ್ವದಲ್ಲಿ ಚಳವಳಿ ನಡೆಯಲಿದೆ. ಸರ್ಕಾರಕ್ಕೆ ಇಚ್ಛಾಶಕ್ತಿ ಇದ್ದರೆ ತಕ್ಷಣವೇ ಒಳಮೀಸಲಾತಿ ಜಾರಿಗೊಳಿಸಬೇಕು. ಸಮೀಕ್ಷೆಯ ವಿಚಾರದಲ್ಲಿನ ಗೊಂದಲಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಯಾವುದೇ ಸರ್ಕಾರ ಜಾತಿ ಗಣತಿಯನ್ನು ಬದ್ಧತೆಯಿಂದ ನಡೆಸಬೇಕು. ವರದಿ ಬಹಿರಂಗ ಆಗಬಾರದು. ಈ ಹಿಂದೆ ಕಾಂತರಾಜು ನೇತೃತ್ವದಲ್ಲಿ ನಡೆಸಿದ ಸಮೀಕ್ಷೆಯ ವರದಿಯನ್ನು ಕಸದ ಬುಟ್ಟಿಗೆ ಹಾಕಿದ್ದಾರೆ. ₹170 ಕೋಟಿ ಪೋಲಾಗಿದೆ ಎಂದರು.</p>.<p>75 ವರ್ಷ ಆಡಳಿತ ನಡೆಸಿದ ಸರ್ಕಾರದಿಂದ ಮಾದಿಗ ಸಮುದಾಯವು ಅಭಿವೃದ್ಧಿ ಆಗಲೇ ಇಲ್ಲ ಎಂದು ಆರೋಪಿಸಿದರು. </p>.<p>ಮಾದಿಗ ಸಮುದಾಯದ ಮುಖಂಡರಾದ ತಿರುಮಳಪ್ಪ, ಕೃಷ್ಣಮೂರ್ತಿ, ಬಾಲಕುಂಟಹಳ್ಳಿ ಗಂಗಾಧರ್, ರಾಜಪ್ಪ, ಮುನಿಕೃಷ್ಣಪ್ಪ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. </p>.<p><strong>ಪಕ್ಷದ ವಿಚಾರವಲ್ಲ; ಸಮುದಾಯದ ಹಿತ </strong></p><p>ನಮ್ಮ ಹೋರಾಟದಲ್ಲಿ ಬಿಜೆಪಿ ಕಾಂಗ್ರೆಸ್ ಎನ್ನುವ ಯಾವ ಪ್ರಶ್ನೆಯೂ ಇಲ್ಲ. ಪಕ್ಷಾತೀತವಾಗಿ ಹೋರಾಟ ನಡೆಸಲಾಗುವುದು. ಇದು ಪಕ್ಷದ ವಿಚಾರವಲ್ಲ. ಸಮುದಾಯದ ಹಿತದ ಪ್ರಶ್ನೆ ಎಂದು ಎ.ನಾರಾಯಣಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>