<p><strong>ಚಿಕ್ಕಬಳ್ಳಾಪುರ</strong>: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಬಿಸಿಯೂಟ ತಯಾರಿಕೆ ಸಿಬ್ಬಂದಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಳವನ್ನು ಪ್ರತಿಭಟನಕಾರರು ಖಂಡಿಸಿದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ನೂತನ ಶಿಕ್ಷಣ ನೀತಿ ಜಾರಿಗೊಳಿಸುವಾಗ ಬಿಸಿಯೂಟ ಯೋಜನೆಯನ್ನು ಬಲಿಷ್ಠಗೊಳಿಸಬೇಕು. ಯೋಜನೆಯನ್ನು ಈಗಿರುವ ಮಾದರಿಯಲ್ಲಿಯೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.</p>.<p>2020–21ರಲ್ಲಿ ಬಿಸಿಯೂಟ ಯೋಜನೆಗೆ ₹ 12,900 ಕೋಟಿ ಖರ್ಚಾಗಿತ್ತು. 2021–22ರಲ್ಲಿ ₹ 1,400 ಕೋಟಿಯನ್ನು ಕಡಿತ ಮಾಡಲಾಗಿದೆ. ಅಲ್ಲದೆ ಕೇಂದ್ರ ಸರ್ಕಾರ 2010ರಿಂದ ನೌಕರರ ಸಂಭಾವನೆ ಹೆಚ್ಚಿಸಿಲ್ಲ. ಎಲ್ಲ ದಿನಬಳಕೆ ವಸ್ತುಗಳ ಬೆಲೆಗಳು ಹೆಚ್ಚಿದ್ದರೂ ನೌಕರರು ಮಾತ್ರ ಅದೇ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ಬಿಸಿಯೂಟ ನೌಕರರನ್ನು ಕಾಯಂ ಮಾಡಿ ಅವರಿಗೆ ಶಾಸನಾತ್ಮಕ ಸೌಲಭ್ಯಗಳನ್ನು ನೀಡಬೇಕು. ಎಲ್ಐಸಿ ಆಧಾರಿತ ಪಿಂಚಣಿ ನಿಗದಿಗೊಳಿಸಬೇಕು, 60 ವರ್ಷದ ನೆಪವೊಡ್ಡಿ ಯಾವುದೇ ಕಾರಣಕ್ಕೂ ನೌಕರರನ್ನು ಕೆಲಸದಿಂದ ತೆಗೆಯಬಾರದು. ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು ಎಂದು ಒತ್ತಾಯಿಸಿದರು.</p>.<p>’ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಅಕ್ಷರ ದಾಸೋಹದ ಕೈಪಿಡಿಯಲ್ಲಿ ಬದಲಾಯಿಸಬೇಕು. ಶಾಲೆಗಳಲ್ಲಿ ’ಡಿ‘ ಗ್ರೂಪ್ ನೌಕರರು ಇಲ್ಲ. ಆದ ಕಾರಣ ಈ ನೌಕರರನ್ನೇ ಸ್ವಚ್ಛತೆ, ಕೈ ತೋಟ ನಿರ್ವಹಣೆ ಇನ್ನಿತರ ಕೆಲಸಗಳಿಗೆ ನೀಡಿ ಶಾಲಾ ಸಿಬ್ಬಂದಿ ಎಂದು ನೇಮಕಾತಿ ಆದೇಶ ನೀಡಬೇಕು. ಕೊರೊನಾ ಸಂದರ್ಭದ 2020ರ ಏಪ್ರಿಲ್ ಮತ್ತು ಮೇ ತಿಂಗಳ ವೇತನ ನೀಡಬೇಕು ಎಂದರು.</p>.<p>ಬಿಸಿಯೂಟ ನೌಕರರನ್ನು ಶಿಕ್ಷಣ ಇಲಾಖೆಯಡಿಯಲ್ಲಿಯೇ ಮೇಲ್ವಿಚಾರಣೆ ಮಾಡಬೇಕು. ಕ್ವಾರಂಟೈನ್ನಲ್ಲಿದ್ದವರಿಗೆ ಊಟ ಸಿದ್ದಗೊಳಿಸಿದವರಿಗೆ ವೇತನ ನೀಡಬೇಕು ಎಂದು ಹೇಳಿದರು.</p>.<p>ನರೇಗಾ ಯೋಜನೆಯ ಕೆಲಸದ ದಿನಗಳನ್ನು ವಾರ್ಷಿಕ 200 ದಿನಗಳಿಗೆ ವಿಸ್ತರಿಸಬೇಕು. ಹಣಕಾಸು ಸೇರಿದಂತೆ ಸಾರ್ವಜನಿಕ ವಲಯದ ಖಾಸಗೀಕರಣ ನಿಲ್ಲಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೃಷಿ, ವಿದ್ಯುತ್ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಉಮಾ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಭಾಗ್ಯಮ್ಮ, ಶಾಂತಮ್ಮ, ನಾರಾಯಣಮ್ಮ, ಚನ್ನಮ್ಮ, ರೂಪಾ, ಬಸಮ್ಮ, ತಿಪ್ಪಮ್ಮ ಮತ್ತಿತರರು ಪ್ರತಿಭಟನೆಯಲ್ಲಿಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಬಿಸಿಯೂಟ ತಯಾರಿಕೆ ಸಿಬ್ಬಂದಿ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಳವನ್ನು ಪ್ರತಿಭಟನಕಾರರು ಖಂಡಿಸಿದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಮಾತನಾಡಿ, ‘ನೂತನ ಶಿಕ್ಷಣ ನೀತಿ ಜಾರಿಗೊಳಿಸುವಾಗ ಬಿಸಿಯೂಟ ಯೋಜನೆಯನ್ನು ಬಲಿಷ್ಠಗೊಳಿಸಬೇಕು. ಯೋಜನೆಯನ್ನು ಈಗಿರುವ ಮಾದರಿಯಲ್ಲಿಯೇ ಮುಂದುವರಿಸಬೇಕು ಎಂದು ಆಗ್ರಹಿಸಿದರು.</p>.<p>2020–21ರಲ್ಲಿ ಬಿಸಿಯೂಟ ಯೋಜನೆಗೆ ₹ 12,900 ಕೋಟಿ ಖರ್ಚಾಗಿತ್ತು. 2021–22ರಲ್ಲಿ ₹ 1,400 ಕೋಟಿಯನ್ನು ಕಡಿತ ಮಾಡಲಾಗಿದೆ. ಅಲ್ಲದೆ ಕೇಂದ್ರ ಸರ್ಕಾರ 2010ರಿಂದ ನೌಕರರ ಸಂಭಾವನೆ ಹೆಚ್ಚಿಸಿಲ್ಲ. ಎಲ್ಲ ದಿನಬಳಕೆ ವಸ್ತುಗಳ ಬೆಲೆಗಳು ಹೆಚ್ಚಿದ್ದರೂ ನೌಕರರು ಮಾತ್ರ ಅದೇ ಸಂಬಳಕ್ಕೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.</p>.<p>ಬಿಸಿಯೂಟ ನೌಕರರನ್ನು ಕಾಯಂ ಮಾಡಿ ಅವರಿಗೆ ಶಾಸನಾತ್ಮಕ ಸೌಲಭ್ಯಗಳನ್ನು ನೀಡಬೇಕು. ಎಲ್ಐಸಿ ಆಧಾರಿತ ಪಿಂಚಣಿ ನಿಗದಿಗೊಳಿಸಬೇಕು, 60 ವರ್ಷದ ನೆಪವೊಡ್ಡಿ ಯಾವುದೇ ಕಾರಣಕ್ಕೂ ನೌಕರರನ್ನು ಕೆಲಸದಿಂದ ತೆಗೆಯಬಾರದು. ಯಾವುದೇ ಖಾಸಗಿ ಸಂಸ್ಥೆಗಳಿಗೆ ಯಾವುದೇ ಸ್ವರೂಪದ ಜವಾಬ್ದಾರಿ ಕೊಡಬಾರದು ಎಂದು ಒತ್ತಾಯಿಸಿದರು.</p>.<p>’ಕೆಲಸದ ಅವಧಿಯನ್ನು 4 ಗಂಟೆಯಿಂದ 6 ಗಂಟೆಗೆ ಅಕ್ಷರ ದಾಸೋಹದ ಕೈಪಿಡಿಯಲ್ಲಿ ಬದಲಾಯಿಸಬೇಕು. ಶಾಲೆಗಳಲ್ಲಿ ’ಡಿ‘ ಗ್ರೂಪ್ ನೌಕರರು ಇಲ್ಲ. ಆದ ಕಾರಣ ಈ ನೌಕರರನ್ನೇ ಸ್ವಚ್ಛತೆ, ಕೈ ತೋಟ ನಿರ್ವಹಣೆ ಇನ್ನಿತರ ಕೆಲಸಗಳಿಗೆ ನೀಡಿ ಶಾಲಾ ಸಿಬ್ಬಂದಿ ಎಂದು ನೇಮಕಾತಿ ಆದೇಶ ನೀಡಬೇಕು. ಕೊರೊನಾ ಸಂದರ್ಭದ 2020ರ ಏಪ್ರಿಲ್ ಮತ್ತು ಮೇ ತಿಂಗಳ ವೇತನ ನೀಡಬೇಕು ಎಂದರು.</p>.<p>ಬಿಸಿಯೂಟ ನೌಕರರನ್ನು ಶಿಕ್ಷಣ ಇಲಾಖೆಯಡಿಯಲ್ಲಿಯೇ ಮೇಲ್ವಿಚಾರಣೆ ಮಾಡಬೇಕು. ಕ್ವಾರಂಟೈನ್ನಲ್ಲಿದ್ದವರಿಗೆ ಊಟ ಸಿದ್ದಗೊಳಿಸಿದವರಿಗೆ ವೇತನ ನೀಡಬೇಕು ಎಂದು ಹೇಳಿದರು.</p>.<p>ನರೇಗಾ ಯೋಜನೆಯ ಕೆಲಸದ ದಿನಗಳನ್ನು ವಾರ್ಷಿಕ 200 ದಿನಗಳಿಗೆ ವಿಸ್ತರಿಸಬೇಕು. ಹಣಕಾಸು ಸೇರಿದಂತೆ ಸಾರ್ವಜನಿಕ ವಲಯದ ಖಾಸಗೀಕರಣ ನಿಲ್ಲಿಸಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರವು ಕೃಷಿ, ವಿದ್ಯುತ್ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.</p>.<p>ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಉಮಾ, ಪ್ರಧಾನ ಕಾರ್ಯದರ್ಶಿ ಕೆ.ಆರ್.ಮಂಜುಳಾ, ಭಾಗ್ಯಮ್ಮ, ಶಾಂತಮ್ಮ, ನಾರಾಯಣಮ್ಮ, ಚನ್ನಮ್ಮ, ರೂಪಾ, ಬಸಮ್ಮ, ತಿಪ್ಪಮ್ಮ ಮತ್ತಿತರರು ಪ್ರತಿಭಟನೆಯಲ್ಲಿಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>