<p><strong>ಚಿಕ್ಕಬಳ್ಳಾಪುರ:</strong> ನಗರಸಭೆಯ ವ್ಯಾಪ್ತಿಯಲ್ಲಿ ತುಂಬಾ ಹದಗೆಟ್ಟಿರುವ ರಸ್ತೆಗಳ ಡಾಂಬರೀಕರಣಕ್ಕೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಸೇನೆ ಪದಾಧಿಕಾರಿಗಳು ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಕನ್ನಡಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ರವಿಕುಮಾರ್, ‘ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ತುಂಬಾ ಹದಗೆಟ್ಟು ಹೋಗಿದ್ದು, ಸಾರ್ವಜನಿಕರು ನಗರದಲ್ಲಿ ಸಂಚರಿಸಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>‘ರಸ್ತೆಗಳಲ್ಲಿ ಗುಂಡಿ ಬಿದ್ದು ವಾಹನ ಸವಾರರು ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ನಂದಿ ರಸ್ತೆ, ಗಂಗಮ್ಮ ಗುಡಿ ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಅಗೆದು ಸರಿಯಾಗಿ ಡಾಂಬರೀಕರಣ ಮಾಡದ ಕಾರಣ ಸಾರ್ವಜನಿಕರು ಸಂಚಾರಕ್ಕೆ ಪರದಾಡುವಂತಾಗಿದೆ’ ಎಂದು ತಿಳಿಸಿದರು.</p>.<p>‘ಜಿಲ್ಲಾಧಿಕಾರಿ ಅವರು ನಗರ ಸಂಚಾರ ಕೈಗೊಂಡು ರಸ್ತೆಗಳ ರಿಪೇರಿಗೆ ಕ್ರಮಕೈಗೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಸಂಘಟನೆ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ನಗರಸಭೆಯ ವ್ಯಾಪ್ತಿಯಲ್ಲಿ ತುಂಬಾ ಹದಗೆಟ್ಟಿರುವ ರಸ್ತೆಗಳ ಡಾಂಬರೀಕರಣಕ್ಕೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಸೇನೆ ಪದಾಧಿಕಾರಿಗಳು ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಈ ವೇಳೆ ಮಾತನಾಡಿದ ಕನ್ನಡಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ರವಿಕುಮಾರ್, ‘ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ತುಂಬಾ ಹದಗೆಟ್ಟು ಹೋಗಿದ್ದು, ಸಾರ್ವಜನಿಕರು ನಗರದಲ್ಲಿ ಸಂಚರಿಸಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>‘ರಸ್ತೆಗಳಲ್ಲಿ ಗುಂಡಿ ಬಿದ್ದು ವಾಹನ ಸವಾರರು ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ನಂದಿ ರಸ್ತೆ, ಗಂಗಮ್ಮ ಗುಡಿ ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಅಗೆದು ಸರಿಯಾಗಿ ಡಾಂಬರೀಕರಣ ಮಾಡದ ಕಾರಣ ಸಾರ್ವಜನಿಕರು ಸಂಚಾರಕ್ಕೆ ಪರದಾಡುವಂತಾಗಿದೆ’ ಎಂದು ತಿಳಿಸಿದರು.</p>.<p>‘ಜಿಲ್ಲಾಧಿಕಾರಿ ಅವರು ನಗರ ಸಂಚಾರ ಕೈಗೊಂಡು ರಸ್ತೆಗಳ ರಿಪೇರಿಗೆ ಕ್ರಮಕೈಗೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಸಂಘಟನೆ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>