ಪ್ರಸ್ತುತ ಬಿಬಿ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಬದಿಗಳಲ್ಲಿ ಬೀದಿ ದೀಪಗಳು, ಗಿಡ ನೆಡುವುದು, ಪಾರ್ಕಿಂಗ್ ಎಲ್ಲವನ್ನೂ ಕ್ರಮ ಬದ್ಧವಾಗಿ ಮಾಡಬೇಕು. ನಗರದಲ್ಲಿ ಜಕ್ಕಲಮಡುಗು ಕುಡಿಯುವ ನೀರು ಸರಬರಾಜು ಬಗ್ಗೆ ದೂರುಗಳು ಬರುತ್ತಿದ್ದು, ಪ್ರತಿ ನಿತ್ಯವೂ ನೀರು ಸರಬರಾಜು ಮಾಡಬೇಕು. ನಗರದಲ್ಲಿ ಅಗತ್ಯವಿರುವ ಕಡೆ ಶೌಚಾಲಯಗಳ ನಿರ್ಮಾಣಕ್ಕೆ ಜಾಗ ಗುರುತಿಸಿ ಕ್ರಿಯಾಯೋಜನೆ ಕಚೇರಿಗೆ ಸಲ್ಲಿಸುವಂತೆ ಪೌರಾಯುಕ್ತ ಲೋಹಿತ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.