<p><strong>ಚಿಕ್ಕಬಳ್ಳಾಪುರ: </strong>‘ಸಾರ್ವಜನಿಕರಲ್ಲಿ ಸಕಾಲ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಡಿ. 5ರವರೆಗೆ ಸಕಾಲ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವ ಸಂಬಂಧ ಅರಿವು ಮೂಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಹೇಳಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಕಾಲ ಸಪ್ತಾಹದಲ್ಲಿ ಅವರು ಮಾತನಾಡಿದರು.</p>.<p>ಮೊದಲನೇ ಹಂತದಲ್ಲಿ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಕಾಲ ಸಪ್ತಾಹ ನಡೆಯಲಿದೆ. ಈ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳ ಸಂಬಂಧ ನಿಗದಿತ ಕಾಲಮಿತಿಯಲ್ಲಿ ಸೇವೆ ಒದಗಿಸುವ ಕೆಲಸವಾಗಬೇಕು. ಅರ್ಜಿ ಸ್ವೀಕೃತಿಯಾದ ನಂತರ ವಿಲೇವಾರಿಯಲ್ಲಿ ಅಧಿಕಾರಿಗಳು ಮಹತ್ವದ ಪಾತ್ರವಹಿಸಬೇಕು. ಸಂಪೂರ್ಣ ಮಾಹಿತಿ ಒಳಗೊಂಡ ಮಾಹಿತಿ ಫಲಕ ಹಾಕಬೇಕು ಎಂದು ಸೂಚಿಸಿದರು.</p>.<p>ಈಗಾಗಲೇ ಸಾರ್ವಜನಿಕರಿಂದ ಸ್ವೀಕೃತವಾಗಿ ಬಾಕಿ ಉಳಿದಿರುವ ಅರ್ಜಿ, ಮೇಲ್ಮನವಿಗಳನ್ನು ವಿಲೇ ಮಾಡುವುದು ಸೇರಿದಂತೆ ಹೊಸದಾಗಿ ಸ್ವೀಕೃತವಾಗುವ ಅರ್ಜಿಗಳನ್ನು ಸಕಾಲದಡಿ ನಿಗದಿಪಡಿಸಲಾದ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಸೇವೆಗಳ ಹಕ್ಕು ಪಡೆಯಲು ಬಂದ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.</p>.<p>ಅರ್ಜಿ ಸ್ವೀಕರಿಸಿದ ನಂತರ ಅರ್ಜಿ ಯಾವ ಹಂತದಲ್ಲಿದೆ, ಎಷ್ಟು ದಿನಗಳಲ್ಲಿ ಸೇವೆ ಲಭ್ಯವಾಗುತ್ತಿದೆ ಎಂಬ ಮಾಹಿತಿಯ ಅರಿವು ಮೂಡಿಸಿ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವ ಮೂಲಕ ಸಪ್ತಾಹ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>‘ಸಾರ್ವಜನಿಕರಲ್ಲಿ ಸಕಾಲ ಯೋಜನೆ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಡಿ. 5ರವರೆಗೆ ಸಕಾಲ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವ ಸಂಬಂಧ ಅರಿವು ಮೂಡಿಸಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಹೇಳಿದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಕಾಲ ಸಪ್ತಾಹದಲ್ಲಿ ಅವರು ಮಾತನಾಡಿದರು.</p>.<p>ಮೊದಲನೇ ಹಂತದಲ್ಲಿ ನಗರಾಭಿವೃದ್ಧಿ, ಕಂದಾಯ, ಸಾರಿಗೆ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಕಾಲ ಸಪ್ತಾಹ ನಡೆಯಲಿದೆ. ಈ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅರ್ಜಿಗಳ ಸಂಬಂಧ ನಿಗದಿತ ಕಾಲಮಿತಿಯಲ್ಲಿ ಸೇವೆ ಒದಗಿಸುವ ಕೆಲಸವಾಗಬೇಕು. ಅರ್ಜಿ ಸ್ವೀಕೃತಿಯಾದ ನಂತರ ವಿಲೇವಾರಿಯಲ್ಲಿ ಅಧಿಕಾರಿಗಳು ಮಹತ್ವದ ಪಾತ್ರವಹಿಸಬೇಕು. ಸಂಪೂರ್ಣ ಮಾಹಿತಿ ಒಳಗೊಂಡ ಮಾಹಿತಿ ಫಲಕ ಹಾಕಬೇಕು ಎಂದು ಸೂಚಿಸಿದರು.</p>.<p>ಈಗಾಗಲೇ ಸಾರ್ವಜನಿಕರಿಂದ ಸ್ವೀಕೃತವಾಗಿ ಬಾಕಿ ಉಳಿದಿರುವ ಅರ್ಜಿ, ಮೇಲ್ಮನವಿಗಳನ್ನು ವಿಲೇ ಮಾಡುವುದು ಸೇರಿದಂತೆ ಹೊಸದಾಗಿ ಸ್ವೀಕೃತವಾಗುವ ಅರ್ಜಿಗಳನ್ನು ಸಕಾಲದಡಿ ನಿಗದಿಪಡಿಸಲಾದ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಸೇವೆಗಳ ಹಕ್ಕು ಪಡೆಯಲು ಬಂದ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.</p>.<p>ಅರ್ಜಿ ಸ್ವೀಕರಿಸಿದ ನಂತರ ಅರ್ಜಿ ಯಾವ ಹಂತದಲ್ಲಿದೆ, ಎಷ್ಟು ದಿನಗಳಲ್ಲಿ ಸೇವೆ ಲಭ್ಯವಾಗುತ್ತಿದೆ ಎಂಬ ಮಾಹಿತಿಯ ಅರಿವು ಮೂಡಿಸಿ ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡುವ ಮೂಲಕ ಸಪ್ತಾಹ ಕಾರ್ಯಕ್ರಮವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>