<p><strong>ಚಿಂತಾಮಣಿ:</strong> ‘ರೈತರು ಸಮಗ್ರ ಕೃಷಿ ಪದ್ಧತಿ ಅನುಸರಿಸಿದರೆ ಸಮಸ್ಯೆಗಳಿಂದ ದೂರವಾಗಿ ಕೃಷಿಯೂ ಲಾಭದಾಯಕವಾಗುತ್ತದೆ’ ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ತನ್ವೀರ್ ಅಹ್ಮದ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮಣ್ಣು ಆರೋಗ್ಯ ಅಭಿಯಾನ ಮತ್ತು ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಏಕ ಬೆಳೆ ಪದ್ಧತಿ, ಬೆಳೆ ನಷ್ಟ, ಕೃಷಿ ಕಾರ್ಮಿಕರ ಕೊರತೆ, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದಿರುವುದು ಮತ್ತಿತರ ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಸಮಸ್ಯೆಗಳಿಂದ ಕಂಗೆಟ್ಟ ರೈತರು ಆತ್ಮಹತ್ಯೆಗೂ ಮುಂದಾಗುತ್ತಿರುವುದು ದುರಂತ ಎಂದರು.</p>.<p>ಸಣ್ಣ ರೈತರು ಸತತವಾಗಿ ಒಂದೇ ಬೆಳೆ ಬೆಳೆದು, ಆ ಬೆಳೆಗೆ ಸೂಕ್ತ ಬೆಲೆ ಸಿಗದೆ ಅಥವಾ ಬೆಳೆ ನಷ್ಟವಾದರೆ ಜೀವನ ಮಾಡುವುದು ತುಂಬಾ ಕಷ್ಟವಾಗುತ್ತದೆ. ಈ ಸಮಸ್ಯೆಗಳಿಂದ ಹೊರಬರಲು ಸಮಗ್ರ ಕೃಷಿ ಪದ್ಧತಿ ಸಹಕಾರಿಯಾಗಿದೆ. ಇದರಿಂದ ಸುಸ್ಥಿರ ಆದಾಯವೂ ದೊರೆಯುತ್ತದೆ ಎಂದು ಹೇಳಿದರು.</p>.<p>ತೋಟಗಾರಿಕೆ ಬೆಳೆಯ ಜತೆಗೆ ಕೃಷಿ ಬೆಳೆ, ಹೈನುಗಾರಿಕೆ, ರೇಷ್ಮೆ, ಜೇನುಕೃಷಿ, ಮೀನು ಸಾಕಾಣಿಕೆ, ಕೃಷಿ ಅರಣ್ಯ, ಮೇವು ಉತ್ಪಾದನೆ, ಕುರಿ-ಕೋಳಿ ಸಾಕಾಣಿಕೆ ಮಾಡಬೇಕು. ಒಂದರಲ್ಲಿ ನಷ್ಟವಾದರೂ ಮತ್ತೊಂದು ಕೈಹಿಡಿಯುತ್ತದೆ ಎಂದು ಸಲಹೆ ನೀಡಿದರು.</p>.<p>ಕೃಷಿ ಅಧಿಕಾರಿ ನೇತ್ರಾವತಿ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯ ಕುರಿತು ಮಾಹಿತಿ ನೀಡಿದರು. ಸುತ್ತಮುತ್ತಲಿನ ಗ್ರಾಮಗಳ ಅನೇಕ ರೈತರು ಭಾಗವಹಿಸಿ ಅಧಿಕಾರಿಗಳು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ‘ರೈತರು ಸಮಗ್ರ ಕೃಷಿ ಪದ್ಧತಿ ಅನುಸರಿಸಿದರೆ ಸಮಸ್ಯೆಗಳಿಂದ ದೂರವಾಗಿ ಕೃಷಿಯೂ ಲಾಭದಾಯಕವಾಗುತ್ತದೆ’ ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ತನ್ವೀರ್ ಅಹ್ಮದ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಊಲವಾಡಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮಣ್ಣು ಆರೋಗ್ಯ ಅಭಿಯಾನ ಮತ್ತು ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಏಕ ಬೆಳೆ ಪದ್ಧತಿ, ಬೆಳೆ ನಷ್ಟ, ಕೃಷಿ ಕಾರ್ಮಿಕರ ಕೊರತೆ, ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದಿರುವುದು ಮತ್ತಿತರ ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಸಮಸ್ಯೆಗಳಿಂದ ಕಂಗೆಟ್ಟ ರೈತರು ಆತ್ಮಹತ್ಯೆಗೂ ಮುಂದಾಗುತ್ತಿರುವುದು ದುರಂತ ಎಂದರು.</p>.<p>ಸಣ್ಣ ರೈತರು ಸತತವಾಗಿ ಒಂದೇ ಬೆಳೆ ಬೆಳೆದು, ಆ ಬೆಳೆಗೆ ಸೂಕ್ತ ಬೆಲೆ ಸಿಗದೆ ಅಥವಾ ಬೆಳೆ ನಷ್ಟವಾದರೆ ಜೀವನ ಮಾಡುವುದು ತುಂಬಾ ಕಷ್ಟವಾಗುತ್ತದೆ. ಈ ಸಮಸ್ಯೆಗಳಿಂದ ಹೊರಬರಲು ಸಮಗ್ರ ಕೃಷಿ ಪದ್ಧತಿ ಸಹಕಾರಿಯಾಗಿದೆ. ಇದರಿಂದ ಸುಸ್ಥಿರ ಆದಾಯವೂ ದೊರೆಯುತ್ತದೆ ಎಂದು ಹೇಳಿದರು.</p>.<p>ತೋಟಗಾರಿಕೆ ಬೆಳೆಯ ಜತೆಗೆ ಕೃಷಿ ಬೆಳೆ, ಹೈನುಗಾರಿಕೆ, ರೇಷ್ಮೆ, ಜೇನುಕೃಷಿ, ಮೀನು ಸಾಕಾಣಿಕೆ, ಕೃಷಿ ಅರಣ್ಯ, ಮೇವು ಉತ್ಪಾದನೆ, ಕುರಿ-ಕೋಳಿ ಸಾಕಾಣಿಕೆ ಮಾಡಬೇಕು. ಒಂದರಲ್ಲಿ ನಷ್ಟವಾದರೂ ಮತ್ತೊಂದು ಕೈಹಿಡಿಯುತ್ತದೆ ಎಂದು ಸಲಹೆ ನೀಡಿದರು.</p>.<p>ಕೃಷಿ ಅಧಿಕಾರಿ ನೇತ್ರಾವತಿ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ದೊರೆಯುವ ವಿವಿಧ ಸೌಲಭ್ಯ ಕುರಿತು ಮಾಹಿತಿ ನೀಡಿದರು. ಸುತ್ತಮುತ್ತಲಿನ ಗ್ರಾಮಗಳ ಅನೇಕ ರೈತರು ಭಾಗವಹಿಸಿ ಅಧಿಕಾರಿಗಳು ಮತ್ತು ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>