<p><strong>ಗೌರಿಬಿದನೂರು</strong>: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕಲ್ಲೂಡಿ ಕೆರೆಗೆ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ, ಕೆರೆಯ ಸಮಗ್ರ ಅಭಿವೃದ್ಧಿ ಸಂಬಂಧ ಚರ್ಚಿಸಿದರು.</p>.<p>ಬಳಿಕ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿರುವ 75 ಹೆಕ್ಟೇರ್ ವಿಸ್ತೀರ್ಣದ ಕಲ್ಲೂಡಿ ಕೆರೆ 5.5ಕಿ.ಮೀ ಸುತ್ತಳತೆ ಹೊಂದಿದೆ. 55 ಎಂಸಿಎಫ್ಟಿ ನೀರು ಶೇಖರಣಾ ಸಾಮರ್ಥ್ಯ ಹೊಂದಿದೆ. ಕೆರೆ ಅಭಿವೃದ್ಧಿಗೆ ಸರ್ಕಾರದಿಂದ ಈಗಾಗಲೇ ₹3 ಕೋಟಿ ಅನುದಾನ ಬಂದಿದೆ. ಈ ಅನುದಾನದಲ್ಲಿ ಕೆರೆ ದುರಸ್ತಿ ಜೊತೆಗೆ ನಗರವಾಸಿಗಳು ವಾಯು ವ್ಯವಹಾರ ನಡೆಸಲು ಅನುಕೂಲವಾಗುವಂತೆ ಸುತ್ತಲೂ ವಾಕಿಂಗ್ ಟ್ರ್ಯಾಕ್, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಎಂ.ವಿ.ಶ್ರೀನಿವಾಸ್ಗೆ ಸೂಚಿಸಿದರು.</p>.<p>ನಗರಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಕಲ್ಲೂಡಿ ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲಿನ ನಾಲ್ಕು ವಾರ್ಡ್ನ ಜನರು ಬೆಳಗ್ಗೆ ಸಂಜೆ ವಾಯುವಿಹಾರ ನಡೆಸಲು, ಉತ್ತಮ ಪರಿಸರ ದೊರೆಯಲಿದೆ ಎಂದರು.</p>.<p>ಎಂಜಿನಿಯರ್ ಎಂ.ವಿ.ಶ್ರೀನಿವಾಸ್, ನಗರ ಪ್ರದೇಶಕ್ಕೆ ಹೊಂದಿಕೊಂಡಿರುವ ಕಲ್ಲೂಡಿ ಕೆರೆಯನ್ನು ಶಾಸಕರ ಸೂಚನೆಯಂತೆ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದರು.</p>.<p>ನಗರಸಭ ಉಪಾಧ್ಯಕ್ಷ ಫರೀದ್, ನಗರಸಭೆ ಸದಸ್ಯರಾದ ಖಲೀಂಉಲ್ಲಾ, ಶ್ರೀಕಾಂತ್, ನಗರಸಭೆ ಅಭಿಯಂತರೆ ಧಾನಿಯಾ ಫೈರೋಜ್, ಇನ್ನಿತರ ನಗರದ ಪ್ರಮುಖರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕಲ್ಲೂಡಿ ಕೆರೆಗೆ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ ಅಧಿಕಾರಿಗಳೊಂದಿಗೆ ಬುಧವಾರ ಭೇಟಿ ನೀಡಿ, ಕೆರೆಯ ಸಮಗ್ರ ಅಭಿವೃದ್ಧಿ ಸಂಬಂಧ ಚರ್ಚಿಸಿದರು.</p>.<p>ಬಳಿಕ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿರುವ 75 ಹೆಕ್ಟೇರ್ ವಿಸ್ತೀರ್ಣದ ಕಲ್ಲೂಡಿ ಕೆರೆ 5.5ಕಿ.ಮೀ ಸುತ್ತಳತೆ ಹೊಂದಿದೆ. 55 ಎಂಸಿಎಫ್ಟಿ ನೀರು ಶೇಖರಣಾ ಸಾಮರ್ಥ್ಯ ಹೊಂದಿದೆ. ಕೆರೆ ಅಭಿವೃದ್ಧಿಗೆ ಸರ್ಕಾರದಿಂದ ಈಗಾಗಲೇ ₹3 ಕೋಟಿ ಅನುದಾನ ಬಂದಿದೆ. ಈ ಅನುದಾನದಲ್ಲಿ ಕೆರೆ ದುರಸ್ತಿ ಜೊತೆಗೆ ನಗರವಾಸಿಗಳು ವಾಯು ವ್ಯವಹಾರ ನಡೆಸಲು ಅನುಕೂಲವಾಗುವಂತೆ ಸುತ್ತಲೂ ವಾಕಿಂಗ್ ಟ್ರ್ಯಾಕ್, ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆ ಸಣ್ಣ ನೀರಾವರಿ ಇಲಾಖೆ ಎಂಜಿನಿಯರ್ ಎಂ.ವಿ.ಶ್ರೀನಿವಾಸ್ಗೆ ಸೂಚಿಸಿದರು.</p>.<p>ನಗರಸಭೆ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ಕಲ್ಲೂಡಿ ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲಿನ ನಾಲ್ಕು ವಾರ್ಡ್ನ ಜನರು ಬೆಳಗ್ಗೆ ಸಂಜೆ ವಾಯುವಿಹಾರ ನಡೆಸಲು, ಉತ್ತಮ ಪರಿಸರ ದೊರೆಯಲಿದೆ ಎಂದರು.</p>.<p>ಎಂಜಿನಿಯರ್ ಎಂ.ವಿ.ಶ್ರೀನಿವಾಸ್, ನಗರ ಪ್ರದೇಶಕ್ಕೆ ಹೊಂದಿಕೊಂಡಿರುವ ಕಲ್ಲೂಡಿ ಕೆರೆಯನ್ನು ಶಾಸಕರ ಸೂಚನೆಯಂತೆ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕಾರ್ಯರೂಪಕ್ಕೆ ತರಲಾಗುವುದು ಎಂದರು.</p>.<p>ನಗರಸಭ ಉಪಾಧ್ಯಕ್ಷ ಫರೀದ್, ನಗರಸಭೆ ಸದಸ್ಯರಾದ ಖಲೀಂಉಲ್ಲಾ, ಶ್ರೀಕಾಂತ್, ನಗರಸಭೆ ಅಭಿಯಂತರೆ ಧಾನಿಯಾ ಫೈರೋಜ್, ಇನ್ನಿತರ ನಗರದ ಪ್ರಮುಖರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>