<p><strong>ಚಿಕ್ಕಬಳ್ಳಾಪುರ:</strong> ಮಹಿಳೆಯರು ಇಂದಿನ ದಿನಗಳಲ್ಲಿ ಒಂದೇ ಕ್ಷೇತ್ರಕ್ಕೆ ಸೀಮಿತವಾಗದೆ ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಕೊಡುಗೆ ಸ್ಮರಿಸಲು ಈ ದಿನವನ್ನು ಅವರಿಗೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ರೈತ ವಿಜ್ಞಾನಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಇಂದು ಮಹಿಳೆ ಸಬಲಳಾಗಿದ್ದಾಳೆ. ಪ್ರಮುಖ ಹುದ್ದೆಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ರಾರಾಜಿಸುತ್ತಿದ್ದಾಳೆ. ಮಹಿಳೆ ಉತ್ತಮ ಶಿಕ್ಷಣ ಪಡೆಯುತ್ತಿದ್ದಾಳೆ. ಒಳಮನೆ ಮಾತ್ರವೇ ಅಲ್ಲ ಹೊರಜಗತ್ತಿನ ಅರಿವೂ ಆಗಿದೆ. ಯಾರನ್ನು ಹೇಗೆ ಎಲ್ಲಿ ನಿಭಾಯಿಸಬೇಕು ಎಂಬ ಕಲೆಯೂ ಕರಗತವಾಗಿದೆ ಎಂದು ಹೇಳಿದರು.</p>.<p>ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ತಾಳ್ಮೆ ಮತ್ತು ಚಾಕಚಕ್ಯತೆ ಆಕೆಯ ರಕ್ತದಲ್ಲೇ ಇದೆ. ಅದಕ್ಕೀಗ ವೇದಿಕೆ ದೊರಕುತ್ತಿದೆ. ಆದರೆ ಇಡೀ ದಿನ ಮನೆಯಲ್ಲಿ ದುಡಿಯುವ ಹೆಂಡತಿ, ತಾಯಿ, ಅಕ್ಕ, ತಂಗಿಯರ ಪರಿಶ್ರಮಕ್ಕೂ ಪ್ರಶಂಸೆ ದೊರೆಯಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು.</p>.<p>ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್. ರೂಪಾ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಬೈರಪ್ಪ, ಚಿಂತಾಮಣಿ ಕೃಷಿ ವಿಜ್ಞಾನ ಕೇಂದ್ರದ ಗಾಯತ್ರಿ, ಕೃಷಿ ಇಲಾಖೆಯ ಅಧಿಕಾರಿಗಳಾದ ಚಂದ್ರಕುಮಾರ್, ಎಡಿಎ ಕೇಶವರೆಡ್ಡಿ, ಪ್ರಗತಿಪರ ರೈತ ಮಹಿಳೆ ರೇಣುಕಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಮಹಿಳೆಯರು ಇಂದಿನ ದಿನಗಳಲ್ಲಿ ಒಂದೇ ಕ್ಷೇತ್ರಕ್ಕೆ ಸೀಮಿತವಾಗದೆ ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಕೊಡುಗೆ ಸ್ಮರಿಸಲು ಈ ದಿನವನ್ನು ಅವರಿಗೆ ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ರೈತ ವಿಜ್ಞಾನಿಗಳ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಇಂದು ಮಹಿಳೆ ಸಬಲಳಾಗಿದ್ದಾಳೆ. ಪ್ರಮುಖ ಹುದ್ದೆಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ರಾರಾಜಿಸುತ್ತಿದ್ದಾಳೆ. ಮಹಿಳೆ ಉತ್ತಮ ಶಿಕ್ಷಣ ಪಡೆಯುತ್ತಿದ್ದಾಳೆ. ಒಳಮನೆ ಮಾತ್ರವೇ ಅಲ್ಲ ಹೊರಜಗತ್ತಿನ ಅರಿವೂ ಆಗಿದೆ. ಯಾರನ್ನು ಹೇಗೆ ಎಲ್ಲಿ ನಿಭಾಯಿಸಬೇಕು ಎಂಬ ಕಲೆಯೂ ಕರಗತವಾಗಿದೆ ಎಂದು ಹೇಳಿದರು.</p>.<p>ಕೊಟ್ಟ ಕೆಲಸವನ್ನು ಅಚ್ಚುಕಟ್ಟಾಗಿ ನಿಭಾಯಿಸುವ ತಾಳ್ಮೆ ಮತ್ತು ಚಾಕಚಕ್ಯತೆ ಆಕೆಯ ರಕ್ತದಲ್ಲೇ ಇದೆ. ಅದಕ್ಕೀಗ ವೇದಿಕೆ ದೊರಕುತ್ತಿದೆ. ಆದರೆ ಇಡೀ ದಿನ ಮನೆಯಲ್ಲಿ ದುಡಿಯುವ ಹೆಂಡತಿ, ತಾಯಿ, ಅಕ್ಕ, ತಂಗಿಯರ ಪರಿಶ್ರಮಕ್ಕೂ ಪ್ರಶಂಸೆ ದೊರೆಯಬೇಕು ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ಗುಡಿಬಂಡೆ, ಚಿಂತಾಮಣಿ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು.</p>.<p>ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್. ರೂಪಾ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಬೈರಪ್ಪ, ಚಿಂತಾಮಣಿ ಕೃಷಿ ವಿಜ್ಞಾನ ಕೇಂದ್ರದ ಗಾಯತ್ರಿ, ಕೃಷಿ ಇಲಾಖೆಯ ಅಧಿಕಾರಿಗಳಾದ ಚಂದ್ರಕುಮಾರ್, ಎಡಿಎ ಕೇಶವರೆಡ್ಡಿ, ಪ್ರಗತಿಪರ ರೈತ ಮಹಿಳೆ ರೇಣುಕಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>