<p><strong>ಚಿಕ್ಕಬಳ್ಳಾಪುರ</strong>: ವಿಚಾರಣಾಧೀನ ಕೈದಿಗಳು ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹ ಮತ್ತೆ ಸುದ್ದಿಯಲ್ಲಿದೆ. </p>.<p>ಅಧ್ವಾನಗಳ ಕಾರಣಕ್ಕೆ ಜಿಲ್ಲಾ ಕಾರಾಗೃಹವು ಆಗಾಗ್ಗೆ ಸುದ್ದಿ ಆಗುತ್ತಿತ್ತು. ಆದರೆ ಈಗ ಜೈಲರ್, ಸಹಾಯಕ ಜೈಲರ್ ಮಲ್ಲಿಕಾರ್ಜುನಪ್ಪ ಹಾಗೂ ಸಿಬ್ಬಂದಿಯ ಮೇಲಿನ ಹಲ್ಲೆಯ ಕಾರಣದಿಂದ ಜೈಲಿನೊಳಗಿನ ‘ವ್ಯವಹಾರ’ಗಳು ಚರ್ಚೆಗೆ ಕಾರಣವಾಗಿದೆ.</p>.<p>ಜಿಲ್ಲಾ ಕಾರಾಗೃಹದ ಅಧಿಕಾರಿಗಳ ಮೇಲೆ ವಿಚಾರಣಾಧೀನ ಕೈದಿಗಳು ಹಲ್ಲೆ ನಡೆಸಿರುವುದು ಇಲ್ಲಿನ ಸಿಬ್ಬಂದಿಯ ಲೋಪಗಳನ್ನೂ ಎತ್ತಿ ತೋರುತ್ತಿದೆ. </p>.<p>‘ಕಾರಾಗೃಹದಲ್ಲಿರುವ ಕೈದಿಗಳನ್ನು ಅವರ ಕುಟುಂಬ ಸದಸ್ಯರು ಭೇಟಿ ಮಾಡಬೇಕು ಎಂದರೆ ಅಥವಾ ಕೈದಿಗಳು ನಿಯಮಗಳನ್ನು ಮೀರಿ ಸೌಲಭ್ಯಗಳನ್ನು ಪಡೆಯಲು ಸಿಬ್ಬಂದಿಗೆ ಹಣ ನೀಡಬೇಕು. ಕೆಲವರು ಕೈದಿಗಳು ಮೊಬೈಲ್ ಸಹ ಬಳಸುವರು’ ಎಂದು ಎಂದು ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ತಿಳಿಸುವರು. </p>.<p> ಇತ್ತೀಚೆಗೆ ಪೊಲೀಸ್ ಅಧಿಕಾರಿಗಳು ಸಹ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದರು. ಆಗ ತಂಬಾಕು, ಮತ್ತಿತರ ವಸ್ತುಗಳು ಸಹ ಪತ್ತೆಯಾಗಿದ್ದವು ಎನ್ನುತ್ತವೆ ಮೂಲಗಳು.</p>.<p><strong>ಉಪಲೋಕಾಯುಕ್ತರಿಂದ ಪ್ರಕರಣ:</strong> ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದ ಅಧ್ವಾನಗಳು ಇಂದಿನದ್ದೇನಲ್ಲ. ಈ ಹಿಂದೆಯೂ ಅವ್ಯವಸ್ಥೆಗಳು ಕಂಡು ಬಂದಿದ್ದವು. 2022ರ ನವೆಂಬರ್ನಲ್ಲಿ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದ 10 ಸಿಬ್ಬಂದಿ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ನ.5ರಿಂದ 7ರವರೆಗೆ ಕೆ.ಎನ್.ಫಣೀಂದ್ರ ಅವರು ಹಾಗೂ ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳು ಜಿಲ್ಲೆಯಲ್ಲಿ ಪ್ರವಾಸಕೈಗೊಂಡಿದ್ದರು. ನ.6ರಂದು ಸಂಜೆ ನಗರದ ಹೊರವಲಯದ ಅಣಕನೂರಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಅಲ್ಲಿ ವಿಚಾರಣಾಧೀನ ಕೈದಿಗಳ ಕುಂದುಕೊರತೆಗಳನ್ನು ಆಲಿಸಿದ್ದರು. </p>.<p>ಈ ವೇಳೆ ಕೈದಿಗಳು ಲೋಕಾಯುಕ್ತರಿಗೆ ಆಹಾರ, ಔಷಧ ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಜೈಲು ಸಿಬ್ಬಂದಿ ನೀಡುತ್ತಿಲ್ಲ ಎಂದು ದೂರಿದ್ದರು. ಜಿಲ್ಲಾ ಕಾರಾಗೃಹ ಅಧೀಕ್ಷಕ ಜಯರಾಮಯ್ಯ ಉಪ ಲೋಕಾಯುಕ್ತರ ಭೇಟಿ ವೇಳೆ ಹಾಜರಿರಲಿಲ್ಲ. ಉಪಲೋಕಾಯುಕ್ತರು ಭೇಟಿ ನೀಡಿದ್ದ ವೇಳೆ ಹಲವು ಸಮಸ್ಯೆಗಳು ಕಂಡಿದ್ದವು. ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳುವಂತೆ ಉಪ ಲೋಕಾಯುಕ್ತರು ಸೂಚಿಸಿದ್ದರು. ದೂರಿನಲ್ಲಿ ಕಾರಾಗೃಹದಲ್ಲಿನ ಅವ್ಯವಸ್ಥೆಗಳ ಬಗ್ಗೆ ವಿಸ್ತಾರವಾಗಿ ವಿವರಿಸಲಾಗಿತ್ತು. </p>.<p>2022ರ ಜೂ.8ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್ ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದರು. ಕೈದಿಗಳ ಕುಂದುಕೊರತೆಗಳನ್ನು ಆಲಿಸುವಾಗ ಸ್ಥಳದಲ್ಲಿದ್ದ ಪೊಲೀಸರನ್ನು ಹೊರಗೆ ಕಳುಹಿಸಿದರು. </p>.<p>ನ್ಯಾಯಾಧೀಶರ ಪರಿಶೀಲನೆ ವೇಳೆ ಕಾರಾಗೃಹದಲ್ಲಿ ಬಿಡಿ ಮತ್ತು ಬೆಂಕಿಪಟ್ಟಣದ ಸುಟ್ಟ ಕಡ್ಡಿಗಳು, ಗುಟ್ಕಾ, ಸಿಗರೇಟ್ ಪ್ಯಾಕ್ಗಳು ಪತ್ತೆಯಾಗಿದ್ದವು. ಈ ವೇಳೆ ಕೈದಿಗಳ ಜೇಬಿನಲ್ಲಿದ್ದ ಇದ್ದ ಬಿಡಿಗಳನ್ನು ತೆಗೆಸಿದರು. ಜೈಲು ಸಿಬ್ಬಂದಿಯ ಗಮನಕ್ಕೆ ಬಾರದೆಯೇ ಇವು ಇಲ್ಲಿಗೆ ಬರಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. </p>.<p>ಹೀಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹವು ಅಧ್ವಾನಗಳ ಆಗರ ಎನ್ನುವ ಮಾತುಗಳು ಪೊಲೀಸ್ ಇಲಾಖೆಯಲ್ಲಿಯೇ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ವಿಚಾರಣಾಧೀನ ಕೈದಿಗಳು ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹ ಮತ್ತೆ ಸುದ್ದಿಯಲ್ಲಿದೆ. </p>.<p>ಅಧ್ವಾನಗಳ ಕಾರಣಕ್ಕೆ ಜಿಲ್ಲಾ ಕಾರಾಗೃಹವು ಆಗಾಗ್ಗೆ ಸುದ್ದಿ ಆಗುತ್ತಿತ್ತು. ಆದರೆ ಈಗ ಜೈಲರ್, ಸಹಾಯಕ ಜೈಲರ್ ಮಲ್ಲಿಕಾರ್ಜುನಪ್ಪ ಹಾಗೂ ಸಿಬ್ಬಂದಿಯ ಮೇಲಿನ ಹಲ್ಲೆಯ ಕಾರಣದಿಂದ ಜೈಲಿನೊಳಗಿನ ‘ವ್ಯವಹಾರ’ಗಳು ಚರ್ಚೆಗೆ ಕಾರಣವಾಗಿದೆ.</p>.<p>ಜಿಲ್ಲಾ ಕಾರಾಗೃಹದ ಅಧಿಕಾರಿಗಳ ಮೇಲೆ ವಿಚಾರಣಾಧೀನ ಕೈದಿಗಳು ಹಲ್ಲೆ ನಡೆಸಿರುವುದು ಇಲ್ಲಿನ ಸಿಬ್ಬಂದಿಯ ಲೋಪಗಳನ್ನೂ ಎತ್ತಿ ತೋರುತ್ತಿದೆ. </p>.<p>‘ಕಾರಾಗೃಹದಲ್ಲಿರುವ ಕೈದಿಗಳನ್ನು ಅವರ ಕುಟುಂಬ ಸದಸ್ಯರು ಭೇಟಿ ಮಾಡಬೇಕು ಎಂದರೆ ಅಥವಾ ಕೈದಿಗಳು ನಿಯಮಗಳನ್ನು ಮೀರಿ ಸೌಲಭ್ಯಗಳನ್ನು ಪಡೆಯಲು ಸಿಬ್ಬಂದಿಗೆ ಹಣ ನೀಡಬೇಕು. ಕೆಲವರು ಕೈದಿಗಳು ಮೊಬೈಲ್ ಸಹ ಬಳಸುವರು’ ಎಂದು ಎಂದು ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರು ತಿಳಿಸುವರು. </p>.<p> ಇತ್ತೀಚೆಗೆ ಪೊಲೀಸ್ ಅಧಿಕಾರಿಗಳು ಸಹ ಜೈಲಿಗೆ ಭೇಟಿ ನೀಡಿ ತಪಾಸಣೆ ನಡೆಸಿದ್ದರು. ಆಗ ತಂಬಾಕು, ಮತ್ತಿತರ ವಸ್ತುಗಳು ಸಹ ಪತ್ತೆಯಾಗಿದ್ದವು ಎನ್ನುತ್ತವೆ ಮೂಲಗಳು.</p>.<p><strong>ಉಪಲೋಕಾಯುಕ್ತರಿಂದ ಪ್ರಕರಣ:</strong> ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದ ಅಧ್ವಾನಗಳು ಇಂದಿನದ್ದೇನಲ್ಲ. ಈ ಹಿಂದೆಯೂ ಅವ್ಯವಸ್ಥೆಗಳು ಕಂಡು ಬಂದಿದ್ದವು. 2022ರ ನವೆಂಬರ್ನಲ್ಲಿ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದ 10 ಸಿಬ್ಬಂದಿ ವಿರುದ್ಧ ಲೋಕಾಯುಕ್ತ ಸಂಸ್ಥೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ನ.5ರಿಂದ 7ರವರೆಗೆ ಕೆ.ಎನ್.ಫಣೀಂದ್ರ ಅವರು ಹಾಗೂ ಲೋಕಾಯುಕ್ತ ಸಂಸ್ಥೆ ಅಧಿಕಾರಿಗಳು ಜಿಲ್ಲೆಯಲ್ಲಿ ಪ್ರವಾಸಕೈಗೊಂಡಿದ್ದರು. ನ.6ರಂದು ಸಂಜೆ ನಗರದ ಹೊರವಲಯದ ಅಣಕನೂರಿನ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ್ದರು. ಅಲ್ಲಿ ವಿಚಾರಣಾಧೀನ ಕೈದಿಗಳ ಕುಂದುಕೊರತೆಗಳನ್ನು ಆಲಿಸಿದ್ದರು. </p>.<p>ಈ ವೇಳೆ ಕೈದಿಗಳು ಲೋಕಾಯುಕ್ತರಿಗೆ ಆಹಾರ, ಔಷಧ ಮತ್ತಿತರ ಸೌಲಭ್ಯಗಳನ್ನು ಸಮರ್ಪಕವಾಗಿ ಜೈಲು ಸಿಬ್ಬಂದಿ ನೀಡುತ್ತಿಲ್ಲ ಎಂದು ದೂರಿದ್ದರು. ಜಿಲ್ಲಾ ಕಾರಾಗೃಹ ಅಧೀಕ್ಷಕ ಜಯರಾಮಯ್ಯ ಉಪ ಲೋಕಾಯುಕ್ತರ ಭೇಟಿ ವೇಳೆ ಹಾಜರಿರಲಿಲ್ಲ. ಉಪಲೋಕಾಯುಕ್ತರು ಭೇಟಿ ನೀಡಿದ್ದ ವೇಳೆ ಹಲವು ಸಮಸ್ಯೆಗಳು ಕಂಡಿದ್ದವು. ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಳ್ಳುವಂತೆ ಉಪ ಲೋಕಾಯುಕ್ತರು ಸೂಚಿಸಿದ್ದರು. ದೂರಿನಲ್ಲಿ ಕಾರಾಗೃಹದಲ್ಲಿನ ಅವ್ಯವಸ್ಥೆಗಳ ಬಗ್ಗೆ ವಿಸ್ತಾರವಾಗಿ ವಿವರಿಸಲಾಗಿತ್ತು. </p>.<p>2022ರ ಜೂ.8ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್ ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದರು. ಕೈದಿಗಳ ಕುಂದುಕೊರತೆಗಳನ್ನು ಆಲಿಸುವಾಗ ಸ್ಥಳದಲ್ಲಿದ್ದ ಪೊಲೀಸರನ್ನು ಹೊರಗೆ ಕಳುಹಿಸಿದರು. </p>.<p>ನ್ಯಾಯಾಧೀಶರ ಪರಿಶೀಲನೆ ವೇಳೆ ಕಾರಾಗೃಹದಲ್ಲಿ ಬಿಡಿ ಮತ್ತು ಬೆಂಕಿಪಟ್ಟಣದ ಸುಟ್ಟ ಕಡ್ಡಿಗಳು, ಗುಟ್ಕಾ, ಸಿಗರೇಟ್ ಪ್ಯಾಕ್ಗಳು ಪತ್ತೆಯಾಗಿದ್ದವು. ಈ ವೇಳೆ ಕೈದಿಗಳ ಜೇಬಿನಲ್ಲಿದ್ದ ಇದ್ದ ಬಿಡಿಗಳನ್ನು ತೆಗೆಸಿದರು. ಜೈಲು ಸಿಬ್ಬಂದಿಯ ಗಮನಕ್ಕೆ ಬಾರದೆಯೇ ಇವು ಇಲ್ಲಿಗೆ ಬರಲು ಸಾಧ್ಯವಿಲ್ಲ ಎಂದು ನ್ಯಾಯಾಧೀಶರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. </p>.<p>ಹೀಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹವು ಅಧ್ವಾನಗಳ ಆಗರ ಎನ್ನುವ ಮಾತುಗಳು ಪೊಲೀಸ್ ಇಲಾಖೆಯಲ್ಲಿಯೇ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>