ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥನಲ್ಲ ಎಂದು ಹೇಳಿಕೆ ಕೊಡುತ್ತಿರುವ ರಾಜಕಾರಣಿಗಳು ಯಾವಾಗ ವೈದ್ಯರಾಗಿದ್ದರು? ಯಾವಾಗ ವಿಧಿವಿಜ್ಞಾನ ತಜ್ಞರಾಗಿದ್ದರೊ ನನಗೆ ಗೊತ್ತಿಲ್ಲ. ರಾಜ್ಯದ ಗೃಹಸಚಿವರೊಬ್ಬರು ಜವಾಬ್ದಾರಿಯಿಂದ ಹೇಳಿಕೆ ಕೊಟ್ಟಾಗ ಅದನ್ನು ಸ್ವೀಕಾರ ಮಾಡುವಂತಹ ಕನಿಷ್ಠ ಜ್ಞಾನವಾದರೂ ಮಾಜಿ ಮುಖ್ಯಮಂತ್ರಿ, ಮಾಜಿ ಸಚಿವರಿಗೆ ಇರಬೇಕಿತ್ತು. ಇದು ದುರದೃಷ್ಟಕರ’ ಎಂದು ಹೇಳಿದರು.