<p><strong>ಚಿಕ್ಕಬಳ್ಳಾಪುರ:</strong> ಈಶಾ ಯೋಗ ಕೇಂದ್ರದ ಬಳಿ ರಸ್ತೆಗೆ ಯಾರಾದರೂ ಗೇಟ್ಗಳನ್ನು ಅಡ್ಡಹಾಕಿ ಹಣ ವಸೂಲಿ ಮಾಡುತ್ತಿದ್ದರೆ ಅದು ತಪ್ಪು. ಆ ರೀತಿಯಲ್ಲಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.</p>.<p>ನಗರದ ಜಿಲ್ಲಾಡಳಿತ ಭವನದ ಮುಂಭಾಗ ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು. </p>.<p>ಈ ಹಿಂದೆಯೂ ಬ್ಯಾರಿಕೇಡ್ ಅಳವಡಿಸಿ ಹಣ ವಸೂಲಿ ಮಾಡುತ್ತಿದ್ದರು. ಆಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್ ಕಳುಹಿಸಿ ತೆರವುಗೊಳಿಸಿದ್ದೆ. ಈಗ ಮತ್ತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ನೀವು (ರೈತ ಸಂಘ) ತಿಳಿಸಿದ್ದೀರಿ. ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಪಡೆಯುವೆ ಎಂದರು.</p>.<p>ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಹಣ ವಸೂಲಿ ಮಾಡಿದರೆ ಅದು ತಪ್ಪು. ಪಂಚಾಯಿತಿ ಅವರಿಗೂ ಹಣ ವಸೂಲಿ ಮಾಡುವ ಅಧಿಕಾರ ಇಲ್ಲ. ಗೇಟ್ಗಳನ್ನು ಅಥವಾ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದರೆ ತೆಗೆಸಲಾಗುವುದು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಈಶಾ ಯೋಗ ಕೇಂದ್ರದ ಬಳಿ ರಸ್ತೆಗೆ ಯಾರಾದರೂ ಗೇಟ್ಗಳನ್ನು ಅಡ್ಡಹಾಕಿ ಹಣ ವಸೂಲಿ ಮಾಡುತ್ತಿದ್ದರೆ ಅದು ತಪ್ಪು. ಆ ರೀತಿಯಲ್ಲಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.</p>.<p>ನಗರದ ಜಿಲ್ಲಾಡಳಿತ ಭವನದ ಮುಂಭಾಗ ರೈತ ಸಂಘದ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು. </p>.<p>ಈ ಹಿಂದೆಯೂ ಬ್ಯಾರಿಕೇಡ್ ಅಳವಡಿಸಿ ಹಣ ವಸೂಲಿ ಮಾಡುತ್ತಿದ್ದರು. ಆಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮತ್ತು ತಹಶೀಲ್ದಾರ್ ಕಳುಹಿಸಿ ತೆರವುಗೊಳಿಸಿದ್ದೆ. ಈಗ ಮತ್ತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ನೀವು (ರೈತ ಸಂಘ) ತಿಳಿಸಿದ್ದೀರಿ. ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಮಾಹಿತಿ ಪಡೆಯುವೆ ಎಂದರು.</p>.<p>ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿ ಹಣ ವಸೂಲಿ ಮಾಡಿದರೆ ಅದು ತಪ್ಪು. ಪಂಚಾಯಿತಿ ಅವರಿಗೂ ಹಣ ವಸೂಲಿ ಮಾಡುವ ಅಧಿಕಾರ ಇಲ್ಲ. ಗೇಟ್ಗಳನ್ನು ಅಥವಾ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದರೆ ತೆಗೆಸಲಾಗುವುದು ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>