<p><strong>ಚಿಕ್ಕಬಳ್ಳಾಪುರ: ತ</strong>ಮಿಳುನಾಡಿನ ಕೊಯಮತ್ತೂರು ಈಶಾ ಯೋಗ ಕೇಂದ್ರದಲ್ಲಿ ನಡೆಯುವ ಶಿವರಾತ್ರಿ ಕಾರ್ಯಕ್ರಮದ ನೇರ ಪ್ರಸಾರವು ಚಿಕ್ಕಬಳ್ಳಾಪುರ ಈಶಾ ಯೋಗ ಕೇಂದ್ರದಲ್ಲಿ ಇರಲಿದೆ ಎಂದು ಚಿಕ್ಕಬಳ್ಳಾಪುರ ಈಶಾ ಯೋಗ ಕೇಂದ್ರದ ಸ್ವಾಮಿ ವಿಮೋಹ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದ ಸನ್ನಿಧಿಯಲ್ಲಿ 4ನೇ ವರ್ಷದ ಮಹಾಶಿವರಾತ್ರಿ ಆಚರಣೆ ನಡೆಯುತ್ತದೆ ಎಂದರು.</p>.<p>ಕೊಯಮತ್ತೂರು ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಚಿವ ಎಲ್.ಮುರುಗನ್ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>23 ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ 100 ವಾಹಿನಿಗಳಲ್ಲಿ ಈ ಕಾರ್ಯಕ್ರಮದ ನೇರ ಪ್ರಸಾರವಿದೆ. ಕಳೆದ ವರ್ಷದ ಶಿವರಾತ್ರಿ ದಿನ ಚಿಕ್ಕಬಳ್ಳಾಪುರದ ಕೇಂದ್ರದಲ್ಲಿ 2 ಲಕ್ಷ ಜನರು ಭಾಗವಹಿಸಿದ್ದರು. ಈ ವರ್ಷ 3 ಲಕ್ಷ ಭಕ್ತರನ್ನು ನಿರೀಕ್ಷಿಸಲಾಗಿದೆ ಎಂದರು.</p>.<p>ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಇದೆ. 1 ಲಕ್ಷ ರುದ್ರಾಕ್ಷಿ ವಿತರಿಸಲಾಗುತ್ತದೆ. ಭಕ್ತರಿಗೆ ಅನುಕೂಲ ಆಗುವಂತೆ ಯೋಗ ದ್ವಾರದಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಂದ ಯೋಗ ಕೇಂದ್ರಕ್ಕೆ ಬರಲು ಉಚಿತವಾಗಿ ಸಾರಿಗೆ ವ್ಯವಸ್ಥೆ ಇರಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: ತ</strong>ಮಿಳುನಾಡಿನ ಕೊಯಮತ್ತೂರು ಈಶಾ ಯೋಗ ಕೇಂದ್ರದಲ್ಲಿ ನಡೆಯುವ ಶಿವರಾತ್ರಿ ಕಾರ್ಯಕ್ರಮದ ನೇರ ಪ್ರಸಾರವು ಚಿಕ್ಕಬಳ್ಳಾಪುರ ಈಶಾ ಯೋಗ ಕೇಂದ್ರದಲ್ಲಿ ಇರಲಿದೆ ಎಂದು ಚಿಕ್ಕಬಳ್ಳಾಪುರ ಈಶಾ ಯೋಗ ಕೇಂದ್ರದ ಸ್ವಾಮಿ ವಿಮೋಹ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದ ಸನ್ನಿಧಿಯಲ್ಲಿ 4ನೇ ವರ್ಷದ ಮಹಾಶಿವರಾತ್ರಿ ಆಚರಣೆ ನಡೆಯುತ್ತದೆ ಎಂದರು.</p>.<p>ಕೊಯಮತ್ತೂರು ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಚಿವ ಎಲ್.ಮುರುಗನ್ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>23 ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ 100 ವಾಹಿನಿಗಳಲ್ಲಿ ಈ ಕಾರ್ಯಕ್ರಮದ ನೇರ ಪ್ರಸಾರವಿದೆ. ಕಳೆದ ವರ್ಷದ ಶಿವರಾತ್ರಿ ದಿನ ಚಿಕ್ಕಬಳ್ಳಾಪುರದ ಕೇಂದ್ರದಲ್ಲಿ 2 ಲಕ್ಷ ಜನರು ಭಾಗವಹಿಸಿದ್ದರು. ಈ ವರ್ಷ 3 ಲಕ್ಷ ಭಕ್ತರನ್ನು ನಿರೀಕ್ಷಿಸಲಾಗಿದೆ ಎಂದರು.</p>.<p>ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಇದೆ. 1 ಲಕ್ಷ ರುದ್ರಾಕ್ಷಿ ವಿತರಿಸಲಾಗುತ್ತದೆ. ಭಕ್ತರಿಗೆ ಅನುಕೂಲ ಆಗುವಂತೆ ಯೋಗ ದ್ವಾರದಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಂದ ಯೋಗ ಕೇಂದ್ರಕ್ಕೆ ಬರಲು ಉಚಿತವಾಗಿ ಸಾರಿಗೆ ವ್ಯವಸ್ಥೆ ಇರಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>