ಚಿಕ್ಕಬಳ್ಳಾಪುರ: ನಗರದ ಪ್ರಶಾಂತ್ ನಗರದಲ್ಲಿರುವ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಸೋದರಳಿಯ ಜಿ.ಎಚ್. ನಾಗರಾಜ್ ಅವರ ಮನೆ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನೆಯಲ್ಲಿ ತಪಾಸಣೆ ಕಾರ್ಯ ನಡೆಸುವ ಜತೆಗೆ ನಾಗರಾಜ್ ಅವರ ವಿಚಾರಣೆಯನ್ನೂ ಮಾಡುತ್ತಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮುಖಂಡರಾಗಿರುವ ನಾಗರಾಜ್ ಅವರು ಆರ್.ಎಲ್.ಜಾಲಪ್ಪ ಆಸ್ಪತ್ರೆಯ ಕಾರ್ಯದರ್ಶಿಯೂ ಆಗಿದ್ದಾರೆ.
ಐಟಿ ಅಧಿಕಾರಿಗಳು ನಾಗರಾಜ್ ಅವರ ಹಣಕಾಸು ವ್ಯವಹಾರ, ಆದಾಯ, ತೆರಿಗೆ ಪಾವತಿಗೆ ಸಂಬಂಧಿಸಿದ ದಾಖಲೆಪತ್ರಗಳನ್ನು ಕಲೆ ಹಾಕುತ್ತಿದ್ದಾರೆ.ನಾಗರಾಜ್ ಕುಟುಂಬದವರು ತನಿಖೆಗೆ ಸಹಕಾರ ನೀಡದ ಕಾರಣ ಐಟಿ ಅಧಿಕಾರಿಗಳು ನಗರದ ಕೀ ರಿಪೇರಿ ಮಾಡುವ ವ್ಯಕ್ತಿಯೊಬ್ಬನನ್ನು ಮನೆಗೆ ಕರೆಯಿಸಿಕೊಂಡರು ಎಂದು ತಿಳಿದುಬಂದಿದೆ.