<p><strong>ಗೌರಿಬಿದನೂರು</strong>: ನಗರದಲ್ಲಿ ಮಂಗಳವಾರ ಜೈನ ಸಮುದಾಯದ ಮುಖಂಡರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಮೌನ ಮೆರವಣಿಗೆ ನಡೆಸಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದರು. </p>.<p>ನಗರದ ಎಂ.ಜಿ.ವೃತ್ತದಲ್ಲಿ ಜೈನ ಧರ್ಮೀಯರ ಮೌನ ಪ್ರತಿಭಟನೆಯಲ್ಲಿ ಇತರ ಸಮಾಜದ ಜನರೂ ಭಾಗವಹಿಸಿದ್ದರು. ಜೈನ ಸಮುದಾಯದವರಿಗೆ ನ್ಯಾಯ ಕೊಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿ ‘ಜೈನ ಮುನಿಗಳಿಗೆ ರಕ್ಷಣೆ ಒದಗಿಸಬೇಕು. ಇಂತಹ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಒತ್ತಾಯಿಸಲಾಯಿತು. </p>.<p>ಜೈನ ಸಮುದಾಯದ ತಾಲ್ಲೂಕು ಅಧ್ಯಕ್ಷ ದೇವಕುಮಾರ್ ಮಾತನಾಡಿ, ‘ಜೈನ ಮುನಿ ಹತ್ಯೆ ಹೇಯ ಕೃತ್ಯ. ಯಾವುದೇ ಸಮಾಜದ ಸ್ವಾಮೀಜಿಗಳಿಗೆ ಇಂಥ ಸ್ಥಿತಿ ಬರಬಾರದು. ಈ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ, ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p>.<p>ಬಳಿಕ ಎಲ್ಲರೂ ನಗರದ ಹೊರವಲಯದಲ್ಲಿರುವ ಮಿನಿ ವಿಧಾನಸೌಧದ ಬಳಿ ತೆರಳಿ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅವರಿಗೆ ಮನವಿ ಪತ್ರ ನೀಡಿದರು.</p>.<p>ಈ ವೇಳೆ ಧರಣೇಂದ್ರಯ್ಯ, ಜಯಣ್ಣ, ಎಂ.ಎಸ್.ದೇವರಾಜ್, ಎಂ.ಎನ್.ಸುರೇಶ್, ವಿಜಿಕುಮಾರ್ ಸೇರಿ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ನಗರದಲ್ಲಿ ಮಂಗಳವಾರ ಜೈನ ಸಮುದಾಯದ ಮುಖಂಡರು ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಮೌನ ಮೆರವಣಿಗೆ ನಡೆಸಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಿದರು. </p>.<p>ನಗರದ ಎಂ.ಜಿ.ವೃತ್ತದಲ್ಲಿ ಜೈನ ಧರ್ಮೀಯರ ಮೌನ ಪ್ರತಿಭಟನೆಯಲ್ಲಿ ಇತರ ಸಮಾಜದ ಜನರೂ ಭಾಗವಹಿಸಿದ್ದರು. ಜೈನ ಸಮುದಾಯದವರಿಗೆ ನ್ಯಾಯ ಕೊಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿ ‘ಜೈನ ಮುನಿಗಳಿಗೆ ರಕ್ಷಣೆ ಒದಗಿಸಬೇಕು. ಇಂತಹ ಹೇಯ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಒತ್ತಾಯಿಸಲಾಯಿತು. </p>.<p>ಜೈನ ಸಮುದಾಯದ ತಾಲ್ಲೂಕು ಅಧ್ಯಕ್ಷ ದೇವಕುಮಾರ್ ಮಾತನಾಡಿ, ‘ಜೈನ ಮುನಿ ಹತ್ಯೆ ಹೇಯ ಕೃತ್ಯ. ಯಾವುದೇ ಸಮಾಜದ ಸ್ವಾಮೀಜಿಗಳಿಗೆ ಇಂಥ ಸ್ಥಿತಿ ಬರಬಾರದು. ಈ ಘಟನೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ, ತನಿಖೆ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p>.<p>ಬಳಿಕ ಎಲ್ಲರೂ ನಗರದ ಹೊರವಲಯದಲ್ಲಿರುವ ಮಿನಿ ವಿಧಾನಸೌಧದ ಬಳಿ ತೆರಳಿ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅವರಿಗೆ ಮನವಿ ಪತ್ರ ನೀಡಿದರು.</p>.<p>ಈ ವೇಳೆ ಧರಣೇಂದ್ರಯ್ಯ, ಜಯಣ್ಣ, ಎಂ.ಎಸ್.ದೇವರಾಜ್, ಎಂ.ಎನ್.ಸುರೇಶ್, ವಿಜಿಕುಮಾರ್ ಸೇರಿ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>