ಚಿಕ್ಕಬಳ್ಳಾಪುರ: ತಾಲ್ಲೂಕಿನ ಜಕ್ಕಲಮಡುಗು ಜಲಾಶಯದಲ್ಲಿ ಮುಳುಗಿದ್ದ ನಗರದ ಭರತ್ (33) ಎಂಬುವರ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಹೊರ ತೆಗೆದಿದ್ದಾರೆ.
ಶನಿವಾರ ಅವರು ಜಲಾಶಯಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚೀಟಿ ವ್ಯವಹಾರದಲ್ಲಿ ತೊಡಗಿದ್ದ ಭರತ್ ನಷ್ಟ ಹೊಂದಿದ್ದರು. ಈ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.