<p><strong>ಗೌರಿಬಿದನೂರು/ಮಂಚೇನಹಳ್ಳಿ:</strong> ಗೌಬಿದನೂರು ತಾಲ್ಲೂಕಿನ 296 ಗ್ರಾಮಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ₹102 ಕೋಟಿ ಅನುದಾನದಲ್ಲಿ ಜಲಜೀವನ್ ಮಿಷನ್ ಜಾರಿಯಾಗಿದೆ. ಹಳ್ಳಿಗಳಿಗೆ ನೀರು ನೀಡುವುದು ನಮ್ಮ ಆದ್ಯತೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.</p>.<p>ತಾಲ್ಲೂಕಿನ ನಕ್ಕಲಹಳ್ಳಿಯಲ್ಲಿ ₹87 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದರು. ಇದೇ ವೇಳೆ ನಕ್ಕಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿಬಿದನೂರಿನಲ್ಲಿ ಪ್ರತಿ ಹಳ್ಳಿಗಳಿಗೆ ಜಲಜೀವನ್ ಮಿಷನ್ನಿಂದ ನೀರು ಸಿಗಲಿದೆ. ಮನೆಗಳಿಗೆ ಕೊಳಾಯಿ ನೀರು ಸಿಗುವುದರಿಂದ ಬಡಜನರ ಸಂಕಷ್ಟ ತಪ್ಪಲಿದೆ. ತಾಲ್ಲೂಕಿನ ಅಮೃತ್ ಯೋಜನೆಗೆ ₹66 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿದೆ. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ಗೌರಿಬಿದನೂರು–ಹಿಂದೂಪುರ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಕೇಂದ್ರ ಸರ್ಕಾರದ ‘ಸೇತು ಬಂಧನ್’ ಯೋಜನೆಯಡಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. </p>.<p>ರೈಲ್ವೆ ಮೇಲ್ಸೇತುವೆಗೆ ₹100 ಕೋಟಿ ಅಂದಾಜು ವೆಚ್ಚ ಎಂದು ಪ್ರಸ್ತಾವದಲ್ಲಿ ಹೇಳಲಾಗಿದೆ. ಈ ಕಾಮಗಾರಿ ನಡೆದರೆ ಗೌರಿಬಿದನೂರಿನ ಜನರಿಗೆ ಬಹಳ ಪ್ರಯೋಜನವಾಗಲಿದೆ. ಇದನ್ನು ಜಾರಿ ಮಾಡುವ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.</p>.<p>ಗೌರಿಬಿದನೂರಿನ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ₹25 ಕೋಟಿ ಮಂಜೂರು ಮಾಡಿದ್ದು ಈ ಕಾಮಗಾರಿ ಪರಿಶೀಲಿಸಿದರು. </p>.<p>ಮಂಚೇನಹಳ್ಳಿ ತಾಲ್ಲೂಕು ಜರಬಂಡಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೃಷಿ ಜಮೀನುಗಳಿಗೆ ಭೇಟಿ ನೀಡಿ ರಾಗಿ ಬೆಳೆ ಹಾನಿ ಪರಿಶೀಲಿಸಿದರು.</p>.<p>ನೆರೆಯಿಂದಾಗಿ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರವನ್ನು ಒತ್ತಾಯಿಸಿ ಈ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಅತಿಯಾದ ಮಳೆಯಿಂದಾಗಿ ರಾಗಿ ಬೆಳೆಗೆ ಹಾನಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಗಿಗೆ ಬೆಂಬಲ ಬೆಲೆ ನೀಡಿದ್ದಾರೆ. ಇದು ಕರ್ನಾಟಕಕ್ಕೆ ಹೆಚ್ಚು ಅನುಕೂಲವಾಗಿದೆ. ಒಂದು ಎಕರೆಗೆ ₹400 ವಿಮೆಯನ್ನು ರೈತರು ಕಟ್ಟುತ್ತಾರೆ. ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅಧಿಕಾರಿಗಳು ನೀಡುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಆದಷ್ಟು ಬೇಗ ವಿಮೆ ಪರಿಹಾರ ಕೊಡಿಸುತ್ತೇನೆ ಎಂದರು. </p>.<p>ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಮುಖಂಡರಾದ ರವಿನಾರಾಯಣರೆಡ್ಡಿ, ಶಶಿಧರ್ ಮತ್ತಿತರರು ಈ ವೇಳೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು/ಮಂಚೇನಹಳ್ಳಿ:</strong> ಗೌಬಿದನೂರು ತಾಲ್ಲೂಕಿನ 296 ಗ್ರಾಮಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ₹102 ಕೋಟಿ ಅನುದಾನದಲ್ಲಿ ಜಲಜೀವನ್ ಮಿಷನ್ ಜಾರಿಯಾಗಿದೆ. ಹಳ್ಳಿಗಳಿಗೆ ನೀರು ನೀಡುವುದು ನಮ್ಮ ಆದ್ಯತೆ ಎಂದು ಸಂಸದ ಡಾ.ಕೆ.ಸುಧಾಕರ್ ಹೇಳಿದರು.</p>.<p>ತಾಲ್ಲೂಕಿನ ನಕ್ಕಲಹಳ್ಳಿಯಲ್ಲಿ ₹87 ಲಕ್ಷ ವೆಚ್ಚದಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದರು. ಇದೇ ವೇಳೆ ನಕ್ಕಲಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿಬಿದನೂರಿನಲ್ಲಿ ಪ್ರತಿ ಹಳ್ಳಿಗಳಿಗೆ ಜಲಜೀವನ್ ಮಿಷನ್ನಿಂದ ನೀರು ಸಿಗಲಿದೆ. ಮನೆಗಳಿಗೆ ಕೊಳಾಯಿ ನೀರು ಸಿಗುವುದರಿಂದ ಬಡಜನರ ಸಂಕಷ್ಟ ತಪ್ಪಲಿದೆ. ತಾಲ್ಲೂಕಿನ ಅಮೃತ್ ಯೋಜನೆಗೆ ₹66 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿದೆ. ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ಗೌರಿಬಿದನೂರು–ಹಿಂದೂಪುರ ರಸ್ತೆಯಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಕೇಂದ್ರ ಸರ್ಕಾರದ ‘ಸೇತು ಬಂಧನ್’ ಯೋಜನೆಯಡಿ ಕೈಗೆತ್ತಿಕೊಂಡಿರುವ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು. </p>.<p>ರೈಲ್ವೆ ಮೇಲ್ಸೇತುವೆಗೆ ₹100 ಕೋಟಿ ಅಂದಾಜು ವೆಚ್ಚ ಎಂದು ಪ್ರಸ್ತಾವದಲ್ಲಿ ಹೇಳಲಾಗಿದೆ. ಈ ಕಾಮಗಾರಿ ನಡೆದರೆ ಗೌರಿಬಿದನೂರಿನ ಜನರಿಗೆ ಬಹಳ ಪ್ರಯೋಜನವಾಗಲಿದೆ. ಇದನ್ನು ಜಾರಿ ಮಾಡುವ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.</p>.<p>ಗೌರಿಬಿದನೂರಿನ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ₹25 ಕೋಟಿ ಮಂಜೂರು ಮಾಡಿದ್ದು ಈ ಕಾಮಗಾರಿ ಪರಿಶೀಲಿಸಿದರು. </p>.<p>ಮಂಚೇನಹಳ್ಳಿ ತಾಲ್ಲೂಕು ಜರಬಂಡಹಳ್ಳಿ ಪಂಚಾಯಿತಿ ವ್ಯಾಪ್ತಿಯ ಗೊಲ್ಲಹಳ್ಳಿ ಗ್ರಾಮದ ಬಳಿ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಕೃಷಿ ಜಮೀನುಗಳಿಗೆ ಭೇಟಿ ನೀಡಿ ರಾಗಿ ಬೆಳೆ ಹಾನಿ ಪರಿಶೀಲಿಸಿದರು.</p>.<p>ನೆರೆಯಿಂದಾಗಿ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರವನ್ನು ಒತ್ತಾಯಿಸಿ ಈ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಅತಿಯಾದ ಮಳೆಯಿಂದಾಗಿ ರಾಗಿ ಬೆಳೆಗೆ ಹಾನಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಗಿಗೆ ಬೆಂಬಲ ಬೆಲೆ ನೀಡಿದ್ದಾರೆ. ಇದು ಕರ್ನಾಟಕಕ್ಕೆ ಹೆಚ್ಚು ಅನುಕೂಲವಾಗಿದೆ. ಒಂದು ಎಕರೆಗೆ ₹400 ವಿಮೆಯನ್ನು ರೈತರು ಕಟ್ಟುತ್ತಾರೆ. ಈ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಅಧಿಕಾರಿಗಳು ನೀಡುವ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಆದಷ್ಟು ಬೇಗ ವಿಮೆ ಪರಿಹಾರ ಕೊಡಿಸುತ್ತೇನೆ ಎಂದರು. </p>.<p>ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ, ಮುಖಂಡರಾದ ರವಿನಾರಾಯಣರೆಡ್ಡಿ, ಶಶಿಧರ್ ಮತ್ತಿತರರು ಈ ವೇಳೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>