‘ರೈತರಿಗೆನಿಗದಿತ ಬೆಲೆಯಲ್ಲಿ ಬಿತ್ತನೆ ಬೀಜ, ಗೊಬ್ಬರ, ಕೀಟ ನಿವಾರಕಗಳನ್ನು ಒದಗಿಸಬೇಕು. ಪ್ಯಾಕೆಟ್ ಮೇಲೆನಿಗದಿತ ಬೆಲೆಯನ್ನು ನಮೂದಿಸಬೇಕು. ಜಿಲ್ಲೆಯಲ್ಲಿ 1.30 ಲಕ್ಷ ರೇಷ್ಮೆ ಬೆಳೆಗಾರರಿದ್ದು, 1.96 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪುನೇರಳೆ ಬೆಳೆ ಬೆಳೆಯುತ್ತಾರೆ. ಸುಮಾರು 3 ಸಾವಿರ ಜನ ರೀಲರ್ಸ್ ಇರುವುದರಿಂದ ತರಬೇತಿ ಕೇಂದ್ರವನ್ನು ಸ್ಥಾಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ’ ಎಂದು ತಿಳಿಸಿದರು.