ಚಿಂತಾಮಣಿ:ಕೈವಾರ ತಾತಯ್ಯನವರ ಪವಿತ್ರ ಕ್ಷೇತ್ರದಿಂದ ಜಿಲ್ಲೆಯಲ್ಲಿ ರಥಯಾತ್ರೆಗೆ ಚಾಲನೆ ನೀಡಲಾಗಿದೆ. ಸಮಾಜದಲ್ಲಿ ಯಾವುದೇ ಜಾತಿ, ಧರ್ಮದ ತಾರತಮ್ಯ ಇಲ್ಲದೆ ಬದುಕಬೇಕು ಎನ್ನುವುದು ತಾತಯ್ಯನವರ ಆಶಯವಾಗಿತ್ತು. ಇಲ್ಲಿ ಹಿಂದೂ ಮುಸ್ಲಿಮರು ಅಣ್ಣ-ತಮ್ಮಂದಿರಂತೆ ಶಾಂತಿಯ ಬದುಕನ್ನು ಕಟ್ಟಿಕೊಂಡು ದೇಶಕ್ಕೆ ಮಾದರಿಯಾಗಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಹೇಳಿದರು.