ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಭೇಟಿಗೆ ಸಿದ್ದರಾಮಯ್ಯನ ಅನುಮತಿ ಬೇಕಾ?–ಎಚ್‌.ಡಿ.ದೇವೇಗೌಡ

ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಆಕ್ರೋಶ
Last Updated 2 ಡಿಸೆಂಬರ್ 2021, 19:42 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರೇಳು ಬಾರಿ ಭೇಟಿ ಮಾಡಿದ್ದೇನೆ. ಭೇಟಿ ಮಾಡಲು ಸಿದ್ದರಾಮಯ್ಯನ ಅನುಮತಿ ಪಡೆಯಬೇಕಾ?’ ಎಂದು ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್ ಯಾರದೇ ಬಿ ಟೀಂ ಅಲ್ಲ. ಕೋಲಾರ, ಚಿಕ್ಕಬಳ್ಳಾಪುರ ವಿಧಾನsi ಪರಿಷತ್ ಕ್ಷೇತ್ರದಲ್ಲಿ ಮೂರು ಪಕ್ಷಗಳು ಹೋರಾಡುತ್ತಿವೆ.ಕಾಂಗ್ರೆಸ್‌ನಿಂದ ದೂರವಿದ್ದು ಪಕ್ಷವನ್ನು ಸಂಘಟಿಸುತ್ತೇವೆ. ಈಹಿಂದೆ ಪ್ರಧಾನಿ ಆಗಿದ್ದ ಮನನೋಹನ್ ಸಿಂಗ್ ಹಾಗೂ ವಾಜಪೇಯಿ ಅವರನ್ನೂ ಭೇಟಿ ಮಾಡಿದ್ದೇನೆ. ಎಲ್ಲರೂ ನನ್ನನ್ನು ಗೌರವದಿಂದ ಕಂಡಿದ್ದರು’ ಎಂದು ಹೇಳಿದರು.

‘ಈ ಹಿಂದೆ ನನ್ನ ಜಿಲ್ಲೆ ಹಾಸನದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ರಾಹುಲ್ ಗಾಂಧಿ, ಜೆಡಿಎಸ್, ಬಿಜೆಪಿಯ ಬಿ ಟೀಂ ಎಂದು ಕರೆದಿದ್ದರು. ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ಚೋರ್ ಪಕ್ಷ ಎಂದಿದ್ದಾರೆ ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT