ಜೆಡಿಎಸ್ ತಾಲ್ಲೂಕು ಘಟಕದ ಗೌರವ ಅಧ್ಯಕ್ಷ ಮತ್ತು ಅಧ್ಯಕ್ಷರಿಗೆ ರಥಯಾತ್ರೆಯ ಪೂರ್ವಭಾವಿ ಸಭೆಗಳಿಗೆ ಆಹ್ವಾನ ಇರಲಿಲ್ಲ. ಇದರಿಂದ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ನರಸಿಂಹ ನಾಯ್ಡು, ತಾಲ್ಲೂಕು ಗೌರವ ಅಧ್ಯಕ್ಷ ಮಹಮದ್ ಎಸ್.ನೂರುಲ್ಲಾ, ಅಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಬಣ ಚಿತ್ರಾವತಿ ಹೋರಾಟ ವೃತ್ತದಲ್ಲಿಕುಮಾರಸ್ವಾಮಿ ಅವರನ್ನು ಸ್ವಾಗತಿಸಿ ಪ್ರತ್ಯೇಕ ಸಭೆ ಮಾಡಿದರು.ಡಿ.ಜೆ.ನಾಗರಾಜ ರೆಡ್ಡಿ ಬಣದವರು ಡಾ.ಎಚ್.ಎನ್.ವೃತ್ತದಲ್ಲಿ ಯಾತ್ರೆಯನ್ನು ಸ್ವಾಗತಿಸಿದರು.