<p><strong>ಚಿಕ್ಕಬಳ್ಳಾಪುರ: </strong>‘ಸ್ಥಳೀಯರಿಗೆ ಟಿಕೆಟ್ ನೀಡಿ’–ಇದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜೆಡಿಎಸ್ ನಾಯಕರು ಪಕ್ಷದ ವರಿಷ್ಠರನ್ನು ಆಗ್ರಹಿಸುತ್ತಿರುವ ಪರಿ.</p>.<p>ವಿಧಾನ ಪರಿಷತ್ನ ಕೋಲಾರ ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕಳೆದ ಬಾರಿ ಜೆಡಿಎಸ್ ಗೆಲುವು ಸಾಧಿಸಿತ್ತು. ಬೆಂಗಳೂರಿನ ಸರ್ಜಾಪುರದ ಚಿತ್ರ ನಿರ್ಮಾಪಕ ಸಿ.ಆರ್.ಮನೋಹರ್ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅವರು ಈಗ ಜೆಡಿಎಸ್ನಿಂದ ದೂರ ಸರಿದಿದ್ದಾರೆ. ಈ ಕಾರಣದಿಂದ ಜೆಡಿಎಸ್ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿದೆ.</p>.<p>ಚಿಂತಾಮಣಿ, ಶಿಡ್ಲಘಟ್ಟ, ಮುಳಬಾಗಿಲು, ಕೋಲಾರ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಪ್ರಬಲವಾಗಿದೆ. ಅವಳಿ ಜಿಲ್ಲೆಗಳು ಉಳಿದ ತಾಲ್ಲೂಕುಗಳಲ್ಲಿಯೂ ತನ್ನದೇ ನೆಲೆಯನ್ನು ಹೊಂದಿದೆ. ಜೆಡಿಎಸ್ ಪ್ರಬಲವಾಗಿರುವ ಜಿಲ್ಲೆಗಳಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸಹ ಪ್ರಮುಖವಾದವು. ಈ ಹಿಂದಿನ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆಯೇ ಈ ಕ್ಷೇತ್ರದಲ್ಲಿ ಹಣಾಹಣಿ ನಡೆದಿತ್ತು. ಈ ಎಲ್ಲ ದೃಷ್ಟಿಯಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎನ್ನುವುದು ಅವಳಿ ಜಿಲ್ಲೆಗಳ ಪಕ್ಷಗಳ ಮುಖಂಡರ ಒಕ್ಕೊರಲ ಆಗ್ರಹ.</p>.<p>ಎರಡೂ ಜಿಲ್ಲೆಯಲ್ಲಿ ಪಕ್ಷಕ್ಕೆ ದುಡಿದ ಯಾರಿಗಾದರೂ ಟಿಕೆಟ್ ಕೊಡಲಿ. ಸ್ಥಳೀಯರಿಗೆ ಟಿಕೆಟ್ ನೀಡುವುದರಿಂದ ಪಕ್ಷ ಸಂಘಟನೆಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದ್ದೇವೆ ಎಂದು ಜೆಡಿಎಸ್ ನಾಯಕರು ನುಡಿಯುವರು.</p>.<p>ಸಿ.ಆರ್.ಮನೋಹರ್ ಗೆಲುವು ಸಾಧಿಸಿದ್ದರೂ ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು. ಮುಖಂಡರು, ಕಾರ್ಯಕರ್ತರ ಸಂಪರ್ಕಕ್ಕೂ ದೊರೆಯುತ್ತಿರಲ್ಲ. ಇದು ಪಕ್ಷ ಸಂಘಟನೆಯ ಮೇಲೆ ಪರಿಣಾಮ ಸಹ ಬೀರಿತ್ತು. ಈ ಎಲ್ಲವನ್ನೂ ಆಲೋಚಿಸಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗು ಪಕ್ಷದ ಆಂತರಿಕ ವಲಯದಿಂದ ಕೇಳಿ ಬರುತ್ತಿದೆ.</p>.<p>ಬಿಡದಿಯ ಫಾರಂ ಹೌಸ್ನಲ್ಲಿ ಬುಧವಾರ (ನ.17) ಎರಡೂ ಜಿಲ್ಲೆಗಳ ಜೆಡಿಎಸ್ ನಾಯಕರ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದಾರೆ. ಇಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸುತ್ತವೆ.</p>.<p>ವಿಧಾನ ಪರಿಷತ್ ಮಾಜಿ ಸದಸ್ಯರಾದ ತೂಪಲ್ಲಿ ಆರ್.ಚೌಡರೆಡ್ಡಿ, ಟಿ.ಎ.ಶರವಣ, ಜಿ.ಪಂ ಮಾಜಿ ಸದಸ್ಯ ಕೆ.ಎಸ್.ನಂಜುಂಡಪ್ಪ, ಕೋಲಾರ ಜೆಡಿಎಸ್ ಮುಖಂಡರಾದ ಶ್ರೀನಾಥ್, ವಕ್ಕಲೇರಿ ರಾಮು, ಬೆಂಗಳೂರಿನ ರಮೇಶ್ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ರಾಜ್ಯಸಭಾ ಮಾಜಿ ಸದಸ್ಯಕುಪೇಂದ್ರ ರೆಡ್ಡಿ ಅವರ ಹೆಸರೂ ಸಹ ಕೇಳಿ ಬಂದಿದೆ.</p>.<p>ಪ್ರಬಲ ನೆಲೆಯನ್ನು ಹೊಂದಿರುವ ಅವಳಿ ಜಿಲ್ಲೆಗಳ ಈ ಕ್ಷೇತ್ರದಿಂದ ಪಕ್ಷವು ಯಾರನ್ನು ಕಳಕ್ಕಿಳಿಸಲಿದೆ ಎನ್ನುವ ಕುತೂಹಲ ಸಹ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>‘ಸ್ಥಳೀಯರಿಗೆ ಟಿಕೆಟ್ ನೀಡಿ’–ಇದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜೆಡಿಎಸ್ ನಾಯಕರು ಪಕ್ಷದ ವರಿಷ್ಠರನ್ನು ಆಗ್ರಹಿಸುತ್ತಿರುವ ಪರಿ.</p>.<p>ವಿಧಾನ ಪರಿಷತ್ನ ಕೋಲಾರ ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕಳೆದ ಬಾರಿ ಜೆಡಿಎಸ್ ಗೆಲುವು ಸಾಧಿಸಿತ್ತು. ಬೆಂಗಳೂರಿನ ಸರ್ಜಾಪುರದ ಚಿತ್ರ ನಿರ್ಮಾಪಕ ಸಿ.ಆರ್.ಮನೋಹರ್ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅವರು ಈಗ ಜೆಡಿಎಸ್ನಿಂದ ದೂರ ಸರಿದಿದ್ದಾರೆ. ಈ ಕಾರಣದಿಂದ ಜೆಡಿಎಸ್ ಹೊಸ ಅಭ್ಯರ್ಥಿಯ ಹುಡುಕಾಟದಲ್ಲಿದೆ.</p>.<p>ಚಿಂತಾಮಣಿ, ಶಿಡ್ಲಘಟ್ಟ, ಮುಳಬಾಗಿಲು, ಕೋಲಾರ ಹಾಗೂ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಪ್ರಬಲವಾಗಿದೆ. ಅವಳಿ ಜಿಲ್ಲೆಗಳು ಉಳಿದ ತಾಲ್ಲೂಕುಗಳಲ್ಲಿಯೂ ತನ್ನದೇ ನೆಲೆಯನ್ನು ಹೊಂದಿದೆ. ಜೆಡಿಎಸ್ ಪ್ರಬಲವಾಗಿರುವ ಜಿಲ್ಲೆಗಳಲ್ಲಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸಹ ಪ್ರಮುಖವಾದವು. ಈ ಹಿಂದಿನ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆಯೇ ಈ ಕ್ಷೇತ್ರದಲ್ಲಿ ಹಣಾಹಣಿ ನಡೆದಿತ್ತು. ಈ ಎಲ್ಲ ದೃಷ್ಟಿಯಿಂದ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎನ್ನುವುದು ಅವಳಿ ಜಿಲ್ಲೆಗಳ ಪಕ್ಷಗಳ ಮುಖಂಡರ ಒಕ್ಕೊರಲ ಆಗ್ರಹ.</p>.<p>ಎರಡೂ ಜಿಲ್ಲೆಯಲ್ಲಿ ಪಕ್ಷಕ್ಕೆ ದುಡಿದ ಯಾರಿಗಾದರೂ ಟಿಕೆಟ್ ಕೊಡಲಿ. ಸ್ಥಳೀಯರಿಗೆ ಟಿಕೆಟ್ ನೀಡುವುದರಿಂದ ಪಕ್ಷ ಸಂಘಟನೆಗೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದ್ದೇವೆ ಎಂದು ಜೆಡಿಎಸ್ ನಾಯಕರು ನುಡಿಯುವರು.</p>.<p>ಸಿ.ಆರ್.ಮನೋಹರ್ ಗೆಲುವು ಸಾಧಿಸಿದ್ದರೂ ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದರು. ಮುಖಂಡರು, ಕಾರ್ಯಕರ್ತರ ಸಂಪರ್ಕಕ್ಕೂ ದೊರೆಯುತ್ತಿರಲ್ಲ. ಇದು ಪಕ್ಷ ಸಂಘಟನೆಯ ಮೇಲೆ ಪರಿಣಾಮ ಸಹ ಬೀರಿತ್ತು. ಈ ಎಲ್ಲವನ್ನೂ ಆಲೋಚಿಸಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗು ಪಕ್ಷದ ಆಂತರಿಕ ವಲಯದಿಂದ ಕೇಳಿ ಬರುತ್ತಿದೆ.</p>.<p>ಬಿಡದಿಯ ಫಾರಂ ಹೌಸ್ನಲ್ಲಿ ಬುಧವಾರ (ನ.17) ಎರಡೂ ಜಿಲ್ಲೆಗಳ ಜೆಡಿಎಸ್ ನಾಯಕರ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಕರೆದಿದ್ದಾರೆ. ಇಲ್ಲಿ ಟಿಕೆಟ್ ನೀಡುವ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಮೂಲಗಳು ತಿಳಿಸುತ್ತವೆ.</p>.<p>ವಿಧಾನ ಪರಿಷತ್ ಮಾಜಿ ಸದಸ್ಯರಾದ ತೂಪಲ್ಲಿ ಆರ್.ಚೌಡರೆಡ್ಡಿ, ಟಿ.ಎ.ಶರವಣ, ಜಿ.ಪಂ ಮಾಜಿ ಸದಸ್ಯ ಕೆ.ಎಸ್.ನಂಜುಂಡಪ್ಪ, ಕೋಲಾರ ಜೆಡಿಎಸ್ ಮುಖಂಡರಾದ ಶ್ರೀನಾಥ್, ವಕ್ಕಲೇರಿ ರಾಮು, ಬೆಂಗಳೂರಿನ ರಮೇಶ್ ಪ್ರಮುಖ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ರಾಜ್ಯಸಭಾ ಮಾಜಿ ಸದಸ್ಯಕುಪೇಂದ್ರ ರೆಡ್ಡಿ ಅವರ ಹೆಸರೂ ಸಹ ಕೇಳಿ ಬಂದಿದೆ.</p>.<p>ಪ್ರಬಲ ನೆಲೆಯನ್ನು ಹೊಂದಿರುವ ಅವಳಿ ಜಿಲ್ಲೆಗಳ ಈ ಕ್ಷೇತ್ರದಿಂದ ಪಕ್ಷವು ಯಾರನ್ನು ಕಳಕ್ಕಿಳಿಸಲಿದೆ ಎನ್ನುವ ಕುತೂಹಲ ಸಹ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಲ್ಲಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>