<p><strong>ಗೌರಿಬಿದನೂರು:</strong> ನಗರದ ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಡಾ.ಎಚ್. ನರಸಿಂಹಯ್ಯ ಅವರ ಅಭಿವೃದ್ಧಿ ಪ್ರಾಧಿಕಾರದಿಂದ ಮಂಗಳವಾರ ಉದ್ಯೋಗ ಮೇಳ ಹಮ್ಮಿಕೊಳ್ಳಲಾಯಿತು.</p>.<p>ಡಾ. ಎಚ್.ಎನ್ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಬೆಂಗಳೂರು, ದೇವನಹಳ್ಳಿ ಸೇರಿದಂತೆ ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿರುವ 65ಕ್ಕೂ ಹೆಚ್ಚು ಕಂಪನಿಗಳು ತಾಲ್ಲೂಕಿನ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡಲು ವೇದಿಕೆ ಕಲ್ಪಿಸಿವೆ ಎಂದರು.</p>.<p>ಸಾಕಷ್ಟು ನಿರುದ್ಯೋಗ ಯುವಕರು ಕೆಲಸದ ನಿರೀಕ್ಷೆಯಲ್ಲಿದ್ದಾರೆ. ಕಂಪನಿಗಳು ಅಗತ್ಯತೆಗೆ ಅನುಗುಣವಾಗಿ ಅರ್ಹ ವಿದ್ಯಾರ್ಥಿಗಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಲಿವೆ. ನೇಮಕವಾದ ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗಿದೆ ಎಂದರು. </p>.<p>ಈ ಉದ್ಯೋಗ ಮೇಳದಲ್ಲಿ 1,500 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.</p>.<p>ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ಕೇಶವ ರೆಡ್ಡಿ, ಪ್ರಕಾಶ್ ರೆಡ್ಡಿ, ಭಾರ್ಗವ್ ರೆಡ್ಡಿ, ಹನುಮಂತರೆಡ್ಡಿ, ಬ್ಲಾಕ್ ಕಾಂಗ್ರೆಸ್ ವೇಣು, ತಾರಾನಾಥ್, ವಿ.ರಮೇಶ್, ಗಾಯತ್ರಿ ಬಸವರಾಜ್, ರಫೀಕ್, ಗಿರೀಶ್ ರೆಡ್ಡಿ, ಗಂಗಾಧರಪ್ಪ, ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ನಗರದ ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಡಾ.ಎಚ್. ನರಸಿಂಹಯ್ಯ ಅವರ ಅಭಿವೃದ್ಧಿ ಪ್ರಾಧಿಕಾರದಿಂದ ಮಂಗಳವಾರ ಉದ್ಯೋಗ ಮೇಳ ಹಮ್ಮಿಕೊಳ್ಳಲಾಯಿತು.</p>.<p>ಡಾ. ಎಚ್.ಎನ್ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಬೆಂಗಳೂರು, ದೇವನಹಳ್ಳಿ ಸೇರಿದಂತೆ ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿರುವ 65ಕ್ಕೂ ಹೆಚ್ಚು ಕಂಪನಿಗಳು ತಾಲ್ಲೂಕಿನ ನಿರುದ್ಯೋಗ ಯುವಕರಿಗೆ ಉದ್ಯೋಗ ನೀಡಲು ವೇದಿಕೆ ಕಲ್ಪಿಸಿವೆ ಎಂದರು.</p>.<p>ಸಾಕಷ್ಟು ನಿರುದ್ಯೋಗ ಯುವಕರು ಕೆಲಸದ ನಿರೀಕ್ಷೆಯಲ್ಲಿದ್ದಾರೆ. ಕಂಪನಿಗಳು ಅಗತ್ಯತೆಗೆ ಅನುಗುಣವಾಗಿ ಅರ್ಹ ವಿದ್ಯಾರ್ಥಿಗಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳಲಿವೆ. ನೇಮಕವಾದ ಅರ್ಹ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗಿದೆ ಎಂದರು. </p>.<p>ಈ ಉದ್ಯೋಗ ಮೇಳದಲ್ಲಿ 1,500 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.</p>.<p>ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ಕೇಶವ ರೆಡ್ಡಿ, ಪ್ರಕಾಶ್ ರೆಡ್ಡಿ, ಭಾರ್ಗವ್ ರೆಡ್ಡಿ, ಹನುಮಂತರೆಡ್ಡಿ, ಬ್ಲಾಕ್ ಕಾಂಗ್ರೆಸ್ ವೇಣು, ತಾರಾನಾಥ್, ವಿ.ರಮೇಶ್, ಗಾಯತ್ರಿ ಬಸವರಾಜ್, ರಫೀಕ್, ಗಿರೀಶ್ ರೆಡ್ಡಿ, ಗಂಗಾಧರಪ್ಪ, ಯುವ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>