<p><strong>ಚಿಕ್ಕಬಳ್ಳಾಪುರ: </strong>ನಗರದ ಮಹಿಳಾ ಪದವಿ ಕಾಲೇಜಿನ ಆವರಣದಲ್ಲಿ ಅವ್ಯವಸ್ಥೆ ಮತ್ತು ದುಸ್ಥಿತಿ ಕಂಡು ಕೆಂಡಾಮಂಡಲರಾದ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕಾನೂನು ಸೇವಾ ಪ್ರಾಧಿಕಾರದ ರಾಜ್ಯ ಘಟಕದ ಅಧ್ಯಕ್ಷ ವೀರಪ್ಪ, ಸ್ವತಃ ಸ್ವಚ್ಛತಾ ಕಾರ್ಯಕ್ಕೆ ಇಳಿದರು.</p>.<p>ಕಾಲೇಜು ತಾತ್ಕಾಲಿಕವಾಗಿ ನಡೆಯುತ್ತಿರುವ ಸಿಟಿಜನ್ ಕ್ಲಬ್ ಆವರಣಕ್ಕೆ ಬಂದ ನ್ಯಾಯಮೂರ್ತಿ, ಶೌಚಾಲಯ, ಕಾಲೇಜಿನ ಆವರಣ ಪರಿಶೀಲಿಸಿದರು.<br /><br />ಆವರಣದಲ್ಲಿ ಆಳೆತ್ತರದ ಗಿಡಗಂಟಿಗಳು ಬೆಳೆದಿದ್ದವು. ಅನೈರ್ಮನ್ಯ ಹೆಚ್ಚಿತ್ತು. ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು. ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ವ್ಯವಸ್ಥೆ ಸರಿಪಡಿಸುವುದಾಗಿ ಹೇಳಿದರು. 30 ನಿಮಿಷಕ್ಕೂ ಹೆಚ್ಚು ಕಾಲ ಸ್ಥಳದಲ್ಲಿದ್ದರು. ಅಗತ್ಯ ಸಲಕರಣೆಗಳನ್ನು ತರಿಸಿ ನಾನೇ ಸ್ವಚ್ಛತೆ ಮಾಡುತ್ತೇನೆ. ನಂತರವೇ ಇಲ್ಲಿಂದ ತೆರಳುವುದು ಎಂದರು.</p>.<p>ನಂತರ ಅಲ್ಲಿಂದ ನೂತನವಾಗಿ ನಿರ್ಮಾಣ ಆಗುತ್ತಿರುವ ಕಾಲೇಜು ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿದರು. ಕಳೆದ 9 ವರ್ಷದಿಂದ ಕಟ್ಟಡ ಕಾಮಗಾರಿ ತೆವಳುತ್ತ ಸಾಗಿದೆ. ಈ ಬಗ್ಗೆ ಮಾಹಿತಿ ಪಡೆದರು.<br /><br />ಎಂಜಿನಿಯರ್ ಎರಡು ತಿಂಗಳಲ್ಲಿ ಕಾಮಗಾರಿ ಪೂರ್ವ ಗೊಳಿಸುವ ಭರವಸೆ ನೀಡಿದರು.<br /><br />ಮತ್ತೆ ಎರಡು ತಿಂಗಳ ನಂತರ ಭೇಟಿ ನೀಡುವೆ. ಅಷ್ಟರಲ್ಲಿ ಕಾಮಗಾರಿ ಪೂರ್ಣವಾಗಿರಬೇಕು ಎಂದು ತಾಕೀತು ಮಾಡಿದರು.</p>.<p>ನಂತರ ಮತ್ತೆ ಸಿಟಿಜನ್ ಕ್ಲಬ್ ಬಳಿ ಬಂದು ಕುಡುಗೋಲು ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಇಳಿದರು. ಅವರನ್ನು ವಕೀಲರು, ಜಿಲ್ಲಾ ನ್ಯಾಯಾಧೀಶರು ಅನುಸರಿಸಿದರು.<br /><br />ಸ್ವಲ್ಪ ಸಮಯದನ ನಂತರ ನಗರಸಭೆ ಪೌರಕಾರ್ಮಿಕರು, ಅಧಿಕಾರಿಗಳು ಜೆಸಿಬಿ ಜತೆ ಸ್ಥಳಕ್ಕೆ ಬಂದು ಇಡೀ ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿದರು.</p>.<p>ನಗರದಲ್ಲಿ ಎಲ್ಲಿದೆ ಚಿಕ್ಕಬಳ್ಳಾಪುರ ಉತ್ಸವಕ್ಕೆ ಸ್ವಚ್ಚತಾ ಕಾರ್ಯ ನಡೆದಿದೆ. ಎಲ್ಲ ಕಡೆ ಅದ್ದೂರಿಯ ಅಲಂಕಾರ ಮಾಡಲಾಗಿದೆ. ಮತ್ತೊಂದು ಕಡೆ ಖುದ್ದು ನ್ಯಾಯಮೂರ್ತಿಅವರೇ ಕಾಲೇಜು ಆವರಣ ಸ್ವಚ್ಚತಾ ಕಾರ್ಯ ನಡೆಸಿದ್ದು ನಾಗರಿಕರು ವಿದ್ಯಾರ್ಥಿಗಳ ಪ್ರಶಂಸೆಗೆ ಪಾತ್ರವಾಯಿತು.</p>.<p>ಉತ್ಸವಗಳು, ಪ್ರತಿಮೆಗಳ ನಿರ್ಮಾಣ ಮಾಡುತ್ತಾರೆ ಆದರೆ 500 ಮಕ್ಕಳು ಓದುವ ಕಾಲೇಜು ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ ಎಂದು ನ್ಯಾಯಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ನಗರದ ಮಹಿಳಾ ಪದವಿ ಕಾಲೇಜಿನ ಆವರಣದಲ್ಲಿ ಅವ್ಯವಸ್ಥೆ ಮತ್ತು ದುಸ್ಥಿತಿ ಕಂಡು ಕೆಂಡಾಮಂಡಲರಾದ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕಾನೂನು ಸೇವಾ ಪ್ರಾಧಿಕಾರದ ರಾಜ್ಯ ಘಟಕದ ಅಧ್ಯಕ್ಷ ವೀರಪ್ಪ, ಸ್ವತಃ ಸ್ವಚ್ಛತಾ ಕಾರ್ಯಕ್ಕೆ ಇಳಿದರು.</p>.<p>ಕಾಲೇಜು ತಾತ್ಕಾಲಿಕವಾಗಿ ನಡೆಯುತ್ತಿರುವ ಸಿಟಿಜನ್ ಕ್ಲಬ್ ಆವರಣಕ್ಕೆ ಬಂದ ನ್ಯಾಯಮೂರ್ತಿ, ಶೌಚಾಲಯ, ಕಾಲೇಜಿನ ಆವರಣ ಪರಿಶೀಲಿಸಿದರು.<br /><br />ಆವರಣದಲ್ಲಿ ಆಳೆತ್ತರದ ಗಿಡಗಂಟಿಗಳು ಬೆಳೆದಿದ್ದವು. ಅನೈರ್ಮನ್ಯ ಹೆಚ್ಚಿತ್ತು. ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು. ಸ್ಥಳದಲ್ಲಿದ್ದ ಜಿಲ್ಲಾಧಿಕಾರಿ ವ್ಯವಸ್ಥೆ ಸರಿಪಡಿಸುವುದಾಗಿ ಹೇಳಿದರು. 30 ನಿಮಿಷಕ್ಕೂ ಹೆಚ್ಚು ಕಾಲ ಸ್ಥಳದಲ್ಲಿದ್ದರು. ಅಗತ್ಯ ಸಲಕರಣೆಗಳನ್ನು ತರಿಸಿ ನಾನೇ ಸ್ವಚ್ಛತೆ ಮಾಡುತ್ತೇನೆ. ನಂತರವೇ ಇಲ್ಲಿಂದ ತೆರಳುವುದು ಎಂದರು.</p>.<p>ನಂತರ ಅಲ್ಲಿಂದ ನೂತನವಾಗಿ ನಿರ್ಮಾಣ ಆಗುತ್ತಿರುವ ಕಾಲೇಜು ಕಟ್ಟಡದ ಸ್ಥಳಕ್ಕೆ ಭೇಟಿ ನೀಡಿದರು. ಕಳೆದ 9 ವರ್ಷದಿಂದ ಕಟ್ಟಡ ಕಾಮಗಾರಿ ತೆವಳುತ್ತ ಸಾಗಿದೆ. ಈ ಬಗ್ಗೆ ಮಾಹಿತಿ ಪಡೆದರು.<br /><br />ಎಂಜಿನಿಯರ್ ಎರಡು ತಿಂಗಳಲ್ಲಿ ಕಾಮಗಾರಿ ಪೂರ್ವ ಗೊಳಿಸುವ ಭರವಸೆ ನೀಡಿದರು.<br /><br />ಮತ್ತೆ ಎರಡು ತಿಂಗಳ ನಂತರ ಭೇಟಿ ನೀಡುವೆ. ಅಷ್ಟರಲ್ಲಿ ಕಾಮಗಾರಿ ಪೂರ್ಣವಾಗಿರಬೇಕು ಎಂದು ತಾಕೀತು ಮಾಡಿದರು.</p>.<p>ನಂತರ ಮತ್ತೆ ಸಿಟಿಜನ್ ಕ್ಲಬ್ ಬಳಿ ಬಂದು ಕುಡುಗೋಲು ಹಿಡಿದು ಸ್ವಚ್ಛತಾ ಕಾರ್ಯಕ್ಕೆ ಇಳಿದರು. ಅವರನ್ನು ವಕೀಲರು, ಜಿಲ್ಲಾ ನ್ಯಾಯಾಧೀಶರು ಅನುಸರಿಸಿದರು.<br /><br />ಸ್ವಲ್ಪ ಸಮಯದನ ನಂತರ ನಗರಸಭೆ ಪೌರಕಾರ್ಮಿಕರು, ಅಧಿಕಾರಿಗಳು ಜೆಸಿಬಿ ಜತೆ ಸ್ಥಳಕ್ಕೆ ಬಂದು ಇಡೀ ಕಾಲೇಜು ಆವರಣವನ್ನು ಸ್ವಚ್ಛಗೊಳಿಸಿದರು.</p>.<p>ನಗರದಲ್ಲಿ ಎಲ್ಲಿದೆ ಚಿಕ್ಕಬಳ್ಳಾಪುರ ಉತ್ಸವಕ್ಕೆ ಸ್ವಚ್ಚತಾ ಕಾರ್ಯ ನಡೆದಿದೆ. ಎಲ್ಲ ಕಡೆ ಅದ್ದೂರಿಯ ಅಲಂಕಾರ ಮಾಡಲಾಗಿದೆ. ಮತ್ತೊಂದು ಕಡೆ ಖುದ್ದು ನ್ಯಾಯಮೂರ್ತಿಅವರೇ ಕಾಲೇಜು ಆವರಣ ಸ್ವಚ್ಚತಾ ಕಾರ್ಯ ನಡೆಸಿದ್ದು ನಾಗರಿಕರು ವಿದ್ಯಾರ್ಥಿಗಳ ಪ್ರಶಂಸೆಗೆ ಪಾತ್ರವಾಯಿತು.</p>.<p>ಉತ್ಸವಗಳು, ಪ್ರತಿಮೆಗಳ ನಿರ್ಮಾಣ ಮಾಡುತ್ತಾರೆ ಆದರೆ 500 ಮಕ್ಕಳು ಓದುವ ಕಾಲೇಜು ಅಭಿವೃದ್ಧಿ ಮಾಡಲು ಸಾಧ್ಯವಾಗಿಲ್ಲ ಎಂದು ನ್ಯಾಯಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>