ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಾವಲೋಕನಕ್ಕೆ ಇದು ಸೂಕ್ತ ಸಮಯ: ಡಾ.ಕೆ.ಸುಧಾಕರ್‌

Last Updated 7 ಫೆಬ್ರುವರಿ 2020, 10:16 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಮ್ಮನ್ನು ಅನರ್ಹಗೊಳಿಸಿದ ಹಿಂದಿನ ಸಭಾಧ್ಯಕ್ಷ ಕೆ.ಆರ್‌.ರಮೇಶ್‌ ಕುಮಾರ್ ಅವರು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸೂಕ್ತ ಸಮಯ’ ಎಂದು ನೂತನ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಗರದ ಹೊರವಲಯದ ಮುದ್ದೇನಹಳ್ಳಿ ರಸ್ತೆಯ ಬಂಡಹಳ್ಳಿ ಕ್ರಾಸ್ ಬಳಿ ಎಚ್‌.ಎನ್‌.ವ್ಯಾಲಿ ನೀರಾವರಿ ಯೋಜನೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ‘ಸ್ಪೀಕರ್‌ ರಮೇಶ್‌ ಕುಮಾರ್‌, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದರು. ಜನರ ತೀರ್ಪನ್ನು ಧಿಕ್ಕರಿಸಿ ಪಕ್ಷಪಾತಿಯಾಗಿ ನಡೆದುಕೊಂಡು ನಮ್ಮನ್ನು ಅನರ್ಹಗೊಳಿಸಿದರು. ಆದರೆ, ಸುಪ್ರೀಂ ಕೋರ್ಟ್‌ ನಮ್ಮ ಪರ ತೀರ್ಪು ನೀಡಿತು. ಮೈತ್ರಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ನನಗೆ ಮೋಸ ಮಾಡಿ, ನನ್ನ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಕಿಡಿಕಾರಿದರು.

ನನ್ನ ಮೇಲೆ ನಂಬಿಕೆ ಇಟ್ಟು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರು ಸಚಿವ ಸ್ಥಾನ ನೀಡಿದ್ದಾರೆ. ಅವರ ನಂಬಿಕೆಯಂತೆ ಕೆಲಸ ಮಾಡುತ್ತೇನೆ. ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಶ್ರಮ ವಹಿಸುತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT