ನಗರದ ಹೊರವಲಯದ ಮುದ್ದೇನಹಳ್ಳಿ ರಸ್ತೆಯ ಬಂಡಹಳ್ಳಿ ಕ್ರಾಸ್ ಬಳಿ ಎಚ್.ಎನ್.ವ್ಯಾಲಿ ನೀರಾವರಿ ಯೋಜನೆಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ‘ಸ್ಪೀಕರ್ ರಮೇಶ್ ಕುಮಾರ್, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ವರ್ತಿಸಿದರು. ಜನರ ತೀರ್ಪನ್ನು ಧಿಕ್ಕರಿಸಿ ಪಕ್ಷಪಾತಿಯಾಗಿ ನಡೆದುಕೊಂಡು ನಮ್ಮನ್ನು ಅನರ್ಹಗೊಳಿಸಿದರು. ಆದರೆ, ಸುಪ್ರೀಂ ಕೋರ್ಟ್ ನಮ್ಮ ಪರ ತೀರ್ಪು ನೀಡಿತು. ಮೈತ್ರಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ನನಗೆ ಮೋಸ ಮಾಡಿ, ನನ್ನ ಮೇಲೆ ದೌರ್ಜನ್ಯ ನಡೆಸಿದ್ದರು ಎಂದು ಕಿಡಿಕಾರಿದರು.