<p><strong>ಚಿಕ್ಕಬಳ್ಳಾಪುರ</strong>/ಬಾಗೇಪಲ್ಲಿ: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಆಯೋಗ ರಚಿಸಿದ್ದೇನೆ. ನನಗೆ ಇರುವ ಮಾಹಿತಿ ಪ್ರಕಾರ ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.<p>ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಗುರುವಾರ ಪ್ರಚಾರ ನಡೆಸಿದ ಅವರು, ತನಿಖೆ ಪೂರ್ಣವಾದ ಮೇಲೆ ತಪ್ಪಿತಸ್ಥ ಎಂದು ಸಾಬೀತಾಗುತ್ತದೆ. ಭ್ರಷ್ಟಾಚಾರ ನಡೆದಿದೆ ಎನ್ನುವುದು ನೂರಕ್ಕೆ ನೂರರಷ್ಟು ತೀರ್ಮಾನವಾಗುತ್ತದೆ. ಆಗ ಅವರು ಜೈಲಿಗೆ ಹೋಗಬೇಕಾಗುತ್ತದೆ ಎಂದರು. </p>.<p>ಕೋವಿಡ್ನಲ್ಲಿ ಭ್ರಷ್ಟಾಚಾರ ನಡೆಸಿದ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದರು.</p>.<p>ಮೋದಿಯವರು ತಮ್ಮ ಹತ್ತು ವರ್ಷದ ಆಡಳಿತದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸಿಲ್ಲ. ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದರು.</p>.<p>‘ರಾಜ್ಯ ಸರ್ಕಾರ ಪತನವಾಗುತ್ತದೆ ಎನ್ನುವುದು ಭ್ರಮೆ. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ. ನಂತರದ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>/ಬಾಗೇಪಲ್ಲಿ: ‘ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ಬಹಳಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ಬಗ್ಗೆ ತನಿಖೆಗೆ ಆಯೋಗ ರಚಿಸಿದ್ದೇನೆ. ನನಗೆ ಇರುವ ಮಾಹಿತಿ ಪ್ರಕಾರ ಭ್ರಷ್ಟಾಚಾರ ನಡೆಸಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.</p>.<p>ಚಿಕ್ಕಬಳ್ಳಾಪುರ ಮತ್ತು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಗುರುವಾರ ಪ್ರಚಾರ ನಡೆಸಿದ ಅವರು, ತನಿಖೆ ಪೂರ್ಣವಾದ ಮೇಲೆ ತಪ್ಪಿತಸ್ಥ ಎಂದು ಸಾಬೀತಾಗುತ್ತದೆ. ಭ್ರಷ್ಟಾಚಾರ ನಡೆದಿದೆ ಎನ್ನುವುದು ನೂರಕ್ಕೆ ನೂರರಷ್ಟು ತೀರ್ಮಾನವಾಗುತ್ತದೆ. ಆಗ ಅವರು ಜೈಲಿಗೆ ಹೋಗಬೇಕಾಗುತ್ತದೆ ಎಂದರು. </p>.<p>ಕೋವಿಡ್ನಲ್ಲಿ ಭ್ರಷ್ಟಾಚಾರ ನಡೆಸಿದ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಮೋದಿ ಪ್ರಚಾರ ನಡೆಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಹೀನಾಯವಾಗಿ ಸೋತಿದೆ. ಲೋಕಸಭಾ ಚುನಾವಣೆಯಲ್ಲೂ ಅದೇ ಗತಿ ಆಗುತ್ತದೆ ಎಂದರು.</p>.<p>ಮೋದಿಯವರು ತಮ್ಮ ಹತ್ತು ವರ್ಷದ ಆಡಳಿತದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸಿಲ್ಲ. ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದರು.</p>.<p>‘ರಾಜ್ಯ ಸರ್ಕಾರ ಪತನವಾಗುತ್ತದೆ ಎನ್ನುವುದು ಭ್ರಮೆ. ಐದೂ ವರ್ಷ ನಮ್ಮ ಸರ್ಕಾರ ಸುಭದ್ರವಾಗಿರುತ್ತದೆ. ನಂತರದ ಚುನಾವಣೆಯಲ್ಲಿಯೂ ನಾವೇ ಗೆಲ್ಲುತ್ತೇವೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>