<p><strong>ಕೈವಾರ(ಚಿಂತಾಮಣಿ):</strong> ತಾಲ್ಲೂಕಿನ ಕೈವಾರದಲ್ಲಿ ಯೋಗಿನಾರೇಯಣ ತಾತಯ್ಯನವರ 300ನೇ ಜಯಂತಿ ಅಂಗವಾಗಿ ಮೇ 31ರಂದು ರಾಮಭವತಾರ ಮಂತ್ರಿ ಕೋಟಿ ಜಪಯತ್ನವು 24 ಗಂಟೆಗಳ ಕಾಲ ಸಾಮೂಹಿಕವಾಗಿ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<p>ಈ ಪ್ರಕಾರ ಭಾನುವಾರ ಬೆಳಗ್ಗೆ 6 ಗಂಟೆಗೆ ಗವಿ ಯೋಗನರಸಿಂಹ ದೇಗುಲದ ಯಾಗಶಾಲೆ ವೈಕುಂಠದಲ್ಲಿ ಆರಂಭವಾಗಲಿರುವ ಜಪಯಜ್ಞವು ಸೋಮವಾರ ಬೆಳಗ್ಗೆ 6 ಗಂಟೆವರೆಗೆ ನಡೆಯಲಿದೆ. ಭಾನುವಾರ ಹುಣ್ಣಿಮೆ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಸದ್ಗುರು ತಾತಯ್ಯನವರಿಗೆ ಅಭಿಷೇಕ, 11 ಗಂಟೆಗೆ ವಿದ್ವಾನ್ ವಾನರಾಶಿ ಬಾಲಕೃಷ್ಣ ಭಾಗವತರ್ ಅವರಿಂದ ವಿಶೇಷ ಪ್ರವಚನ, ಮಧ್ಯಾಹ್ನ 12ಕ್ಕೆ ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ರಥೋತ್ಸವ, ಸಂಜೆ 4 ಗಂಟೆಗೆ ಆಲಂಬಗಿರಿಯಲ್ಲಿ ಗಿರಿ ಪ್ರದಕ್ಷಿಣೆ ಹಾಗೂ ಹುಣ್ಣಿಮೆ ದೀಪೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-16-64370218</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈವಾರ(ಚಿಂತಾಮಣಿ):</strong> ತಾಲ್ಲೂಕಿನ ಕೈವಾರದಲ್ಲಿ ಯೋಗಿನಾರೇಯಣ ತಾತಯ್ಯನವರ 300ನೇ ಜಯಂತಿ ಅಂಗವಾಗಿ ಮೇ 31ರಂದು ರಾಮಭವತಾರ ಮಂತ್ರಿ ಕೋಟಿ ಜಪಯತ್ನವು 24 ಗಂಟೆಗಳ ಕಾಲ ಸಾಮೂಹಿಕವಾಗಿ ನಡೆಯಲಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.</p>.<p>ಈ ಪ್ರಕಾರ ಭಾನುವಾರ ಬೆಳಗ್ಗೆ 6 ಗಂಟೆಗೆ ಗವಿ ಯೋಗನರಸಿಂಹ ದೇಗುಲದ ಯಾಗಶಾಲೆ ವೈಕುಂಠದಲ್ಲಿ ಆರಂಭವಾಗಲಿರುವ ಜಪಯಜ್ಞವು ಸೋಮವಾರ ಬೆಳಗ್ಗೆ 6 ಗಂಟೆವರೆಗೆ ನಡೆಯಲಿದೆ. ಭಾನುವಾರ ಹುಣ್ಣಿಮೆ ಅಂಗವಾಗಿ ಬೆಳಗ್ಗೆ 9 ಗಂಟೆಗೆ ಸದ್ಗುರು ತಾತಯ್ಯನವರಿಗೆ ಅಭಿಷೇಕ, 11 ಗಂಟೆಗೆ ವಿದ್ವಾನ್ ವಾನರಾಶಿ ಬಾಲಕೃಷ್ಣ ಭಾಗವತರ್ ಅವರಿಂದ ವಿಶೇಷ ಪ್ರವಚನ, ಮಧ್ಯಾಹ್ನ 12ಕ್ಕೆ ಅಷ್ಟಾವಧಾನ ಸೇವೆ, ಮಹಾಮಂಗಳಾರತಿ, ರಥೋತ್ಸವ, ಸಂಜೆ 4 ಗಂಟೆಗೆ ಆಲಂಬಗಿರಿಯಲ್ಲಿ ಗಿರಿ ಪ್ರದಕ್ಷಿಣೆ ಹಾಗೂ ಹುಣ್ಣಿಮೆ ದೀಪೋತ್ಸವ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-16-64370218</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>