<p><strong>ಕೈವಾರ</strong> (ಚಿಂತಾಮಣಿ): ತಾಲ್ಲೂಕಿನ ಕೈವಾರದ ಗವಿ ಬಳಿ ಪ್ರಕೃತಿ ಮಡಿಲಲ್ಲಿ ನೆಲೆಸಿದ ಯೋಗಾನರಸಿಂಹಸ್ವಾಮಿ ವೈಕುಂಠ ಯಾಗಶಾಲೆಯಲ್ಲಿ ಕೈವಾರ ತಾತಯ್ಯ ಅವರ 300ನೇ ಜಯಂತಿ ಅಂಗವಾಗಿ 10ನೇ ತಿಂಗಳ ರಾಮಭವತಾರಕ ಮಂತ್ರದ ರಾಮಕೋಟಿ ಜಪಯಜ್ಞವನ್ನು ಭಾನುವಾರ ಆಯೋಜಿಸಲಾಯಿತು.</p>.<p>ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಂ ಮಾತನಾಡಿ, ‘ಮಾನವ ಆಸೆಯೆಂಬ ಪಾಶದಲ್ಲಿ ಬಂಧಿತರಾಗಿರುವುದಕ್ಕೆ ಮನಸ್ಸೇ ಕಾರಣ. ಜ್ಞಾನದ ಉದಯ ಮನಸ್ಸಿನಿಂದ ಆರಂಭವಾಗುತ್ತದೆ’ ಎಂದು ಹೇಳಿದರು.</p>.<p>ತನ್ನನ್ನು ತಾನು ಅರಿಯಬೇಕು ಎಂದು ಎಲ್ಲ ಸಂತರು ಉಪದೇಶ ಮಾಡಿದ್ದಾರೆ. ತನ್ನನ್ನು ತಾನು ಅರಿಯುವುದೇ ಮೋಕ್ಷ. ದುರ್ಗುಣಗಳನ್ನು ಒಳಗೊಂಡ ಮನಸ್ಸು ಈ ಸಾಧನೆ ಮಾಡಲು ಬಿಡುವುದಿಲ್ಲ ಎಂದು ಹೇಳಿದರು.</p>.<p>ಯೋಗಿನಾರೇಯಣ ಮಠದಲ್ಲಿ ಅರಂಭದಲ್ಲಿ ಘಂಟಾನಾದ, ಸುಪ್ರಭಾತ, ಗೋಪೂಜೆ ನೆರವೇರಿಸಲಾಯಿತು.</p>.<p>ಉಪನ್ಯಾಸಕ ವೆಂಕಟರಮಣಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು.</p>.<p>ವಿದುಷಿ ಉಷಮ್ಮ, ಸರೋಜಮ್ಮ, ದಾಕ್ಷಾಯಿಣಿ, ಯೋಗಿನಾರೇಯಣ ಮಠದ ಉಪಾಧ್ಯಕ್ಷ ಜೆ.ವಿಭಾಕರರೆಡ್ಡಿ, ಆರ್.ಪಿ.ಎಂ.ಸತ್ಯನಾರಾಯಣ್, ವಾನರಾಶಿ ಬಾಲಕೃಷ್ಣ ಭಾಗವತರ್, ಸದಸ್ಯರಾದ ಕೆ.ನರಸಿಂಹಪ್ಪ, ಕೆ.ವಿ.ಸುರೇಶ್, ಬಿ.ಎನ್. ಕೃಷ್ಣಯ್ಯ, ಉಷಮ್ಮ, ಸರೋಜಮ್ಮ, ದಾಕ್ಷಾಯಿಣಿ ಹಾಗೂ ಭಕ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-1379769390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೈವಾರ</strong> (ಚಿಂತಾಮಣಿ): ತಾಲ್ಲೂಕಿನ ಕೈವಾರದ ಗವಿ ಬಳಿ ಪ್ರಕೃತಿ ಮಡಿಲಲ್ಲಿ ನೆಲೆಸಿದ ಯೋಗಾನರಸಿಂಹಸ್ವಾಮಿ ವೈಕುಂಠ ಯಾಗಶಾಲೆಯಲ್ಲಿ ಕೈವಾರ ತಾತಯ್ಯ ಅವರ 300ನೇ ಜಯಂತಿ ಅಂಗವಾಗಿ 10ನೇ ತಿಂಗಳ ರಾಮಭವತಾರಕ ಮಂತ್ರದ ರಾಮಕೋಟಿ ಜಪಯಜ್ಞವನ್ನು ಭಾನುವಾರ ಆಯೋಜಿಸಲಾಯಿತು.</p>.<p>ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಂ ಮಾತನಾಡಿ, ‘ಮಾನವ ಆಸೆಯೆಂಬ ಪಾಶದಲ್ಲಿ ಬಂಧಿತರಾಗಿರುವುದಕ್ಕೆ ಮನಸ್ಸೇ ಕಾರಣ. ಜ್ಞಾನದ ಉದಯ ಮನಸ್ಸಿನಿಂದ ಆರಂಭವಾಗುತ್ತದೆ’ ಎಂದು ಹೇಳಿದರು.</p>.<p>ತನ್ನನ್ನು ತಾನು ಅರಿಯಬೇಕು ಎಂದು ಎಲ್ಲ ಸಂತರು ಉಪದೇಶ ಮಾಡಿದ್ದಾರೆ. ತನ್ನನ್ನು ತಾನು ಅರಿಯುವುದೇ ಮೋಕ್ಷ. ದುರ್ಗುಣಗಳನ್ನು ಒಳಗೊಂಡ ಮನಸ್ಸು ಈ ಸಾಧನೆ ಮಾಡಲು ಬಿಡುವುದಿಲ್ಲ ಎಂದು ಹೇಳಿದರು.</p>.<p>ಯೋಗಿನಾರೇಯಣ ಮಠದಲ್ಲಿ ಅರಂಭದಲ್ಲಿ ಘಂಟಾನಾದ, ಸುಪ್ರಭಾತ, ಗೋಪೂಜೆ ನೆರವೇರಿಸಲಾಯಿತು.</p>.<p>ಉಪನ್ಯಾಸಕ ವೆಂಕಟರಮಣಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು.</p>.<p>ವಿದುಷಿ ಉಷಮ್ಮ, ಸರೋಜಮ್ಮ, ದಾಕ್ಷಾಯಿಣಿ, ಯೋಗಿನಾರೇಯಣ ಮಠದ ಉಪಾಧ್ಯಕ್ಷ ಜೆ.ವಿಭಾಕರರೆಡ್ಡಿ, ಆರ್.ಪಿ.ಎಂ.ಸತ್ಯನಾರಾಯಣ್, ವಾನರಾಶಿ ಬಾಲಕೃಷ್ಣ ಭಾಗವತರ್, ಸದಸ್ಯರಾದ ಕೆ.ನರಸಿಂಹಪ್ಪ, ಕೆ.ವಿ.ಸುರೇಶ್, ಬಿ.ಎನ್. ಕೃಷ್ಣಯ್ಯ, ಉಷಮ್ಮ, ಸರೋಜಮ್ಮ, ದಾಕ್ಷಾಯಿಣಿ ಹಾಗೂ ಭಕ್ತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-16-1379769390</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>