<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರ ಗ್ರಾಮದಲ್ಲಿ ಯೋಗಿನಾರೇಯಣ ಮಠ ಮತ್ತು ಬೆಂಗಳೂರಿನ ಎಂ.ಎಸ್. ರಾಮಯ್ಯ ವೈದ್ಯಕೀಯ ಆಸ್ಪತ್ರೆ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಯಿತು. </p>.<p>ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಂ ಮಾತನಾಡಿ, ‘ಆರೋಗ್ಯವೇ ನಿಜವಾದ ಸಂಪತ್ತು. ಉತ್ತಮ ಆರೋಗ್ಯ ಹೊಂದಿದವನೇ ದೊಡ್ಡ ಶ್ರೀಮಂತ. ನಾವು ಆರೋಗ್ಯವಾಗಿದ್ದರೆ, ಏನು ಬೇಕಾದರೂ ಸಾಧಿಸಿ, ಸಂಪತ್ತು ಗಳಿಸಬಹುದು’ ಎಂದರು. </p>.<p>ಮಠದ ವ್ಯವಸ್ಥಾಪಕ ಕೆ. ಲಕ್ಷ್ಮಿನಾರಾಯಣ ಮಾತನಾಡಿ, ಪ್ರತಿ ತಿಂಗಳ ನಾಲ್ಕನೇ ಭಾನುವಾರ ತಾತಯ್ಯನವರ ಮಠದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯುತ್ತದೆ. ಪ್ರತಿಯೊಬ್ಬರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. </p>.<p>ಶಿಬಿರದಲ್ಲಿ ಮಕ್ಕಳ ರೋಗ, ಸಾಮಾನ್ಯ ರೋಗ, ಕಣ್ಣಿನ ತಪಾಸಣೆ, ಕ್ಯಾನ್ಸರ್ ರೋಗ ಪತ್ತೆಹಚ್ಚುವಿಕೆ, ಸ್ತ್ರೀ ರೋಗ, ಕಿವಿ, ಮೂಗು, ಗಂಟಲು ರೋಗ, ಎಲುಬು ಕೀಲುಗಳ ರೋಗ, ಚರ್ಮ ರೋಗ, ಹಲ್ಲಿನ ತಪಾಸಣೆ, ಬಿಪಿ ಶುಗರ್ ತಪಾಸಣೆ, ಇ ಸಿ ಜಿ ಹಾಗೂ ಸಾಮಾನ್ಯ ಶಸ್ತ್ರ ಚಿಕಿತ್ಸೆ ವಿಭಾಗಗಳ ಕೌಂಟರ್ ತೆರೆದು ತಜ್ಞ ವೈದ್ಯರು ರೋಗಿಗಳಿಗೆ ತಪಾಸಣೆ ಮಾಡಿದರು.</p>.<p>ಸಾಮಾನ್ಯ ರೋಗಗಳಿಗೆ ಸ್ಥಳದಲ್ಲಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅವಶ್ಯವಿರುವ ರೋಗಿಗಳಿಗೆ ಬೆಂಗಳೂರು ರಾಮಯ್ಯ ಆಸ್ಪತ್ರೆಯಲ್ಲಿ ರಿಯಾಯತಿ ದರದಲ್ಲಿ ಶಸ್ತ್ರಚಿಕಿತ್ಸೆ ಮತ್ತು ತಂತ್ರಜ್ಞಾನ ಆಧಾರಿತ ಯಂತ್ರಗಳ ಮೂಲಕ ತಪಾಸಣೆ ಮಾಡುವ ಭರವಸೆ ನೀಡಿದರು.</p>.<p>ಎಂ.ಎಸ್. ರಾಮಯ್ಯ ಆಸ್ಪತ್ರೆ ವೈದ್ಯರಾದ ಡಾ. ಅಂಜನ್, ಡಾ. ವೀಣಾ, ಡಾ.ಗರಿಮಾ, ಡಾ.ಕಿರಣ್, ಡಾ. ವೀರೇಶ್, ಡಾ. ಮನಸ್ವಿನಿ ಮತ್ತು ಡಾ. ನಮಿತಾ ಚಂಡೆರ್ ರೋಗಿಗಳಿಗೆ ಆರೋಗ್ಯ ತಪಾಸಣೆ ಮಾಡಿದರು. ಆಪ್ತ ಸಮಾಲೋಚಕರಾದ ಯಮುನಾ ಮತ್ತು ಆನಂದ್ ಸೂಕ್ತ ಸಲಹೆ, ಸೂಚನೆ ನೀಡಿದರು.</p>.<p>ಕೈವಾರ ಹಾಗೂ ಸುತ್ತಮುತ್ತಲಿನ ಗ್ರಾಮಗಳ 150ಕ್ಕೂ ಹೆಚ್ಚು ಜನರು ಆರೋಗ್ಯ ಶಿಬಿರದಲ್ಲಿ ತಪಾಸಣೆ ಮಾಡಿಸಿ ಸದುಪಯೋಗ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರ ಗ್ರಾಮದಲ್ಲಿ ಯೋಗಿನಾರೇಯಣ ಮಠ ಮತ್ತು ಬೆಂಗಳೂರಿನ ಎಂ.ಎಸ್. ರಾಮಯ್ಯ ವೈದ್ಯಕೀಯ ಆಸ್ಪತ್ರೆ ಆಶ್ರಯದಲ್ಲಿ ಇತ್ತೀಚೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಯಿತು. </p>.<p>ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್. ಜಯರಾಂ ಮಾತನಾಡಿ, ‘ಆರೋಗ್ಯವೇ ನಿಜವಾದ ಸಂಪತ್ತು. ಉತ್ತಮ ಆರೋಗ್ಯ ಹೊಂದಿದವನೇ ದೊಡ್ಡ ಶ್ರೀಮಂತ. ನಾವು ಆರೋಗ್ಯವಾಗಿದ್ದರೆ, ಏನು ಬೇಕಾದರೂ ಸಾಧಿಸಿ, ಸಂಪತ್ತು ಗಳಿಸಬಹುದು’ ಎಂದರು. </p>.<p>ಮಠದ ವ್ಯವಸ್ಥಾಪಕ ಕೆ. ಲಕ್ಷ್ಮಿನಾರಾಯಣ ಮಾತನಾಡಿ, ಪ್ರತಿ ತಿಂಗಳ ನಾಲ್ಕನೇ ಭಾನುವಾರ ತಾತಯ್ಯನವರ ಮಠದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯುತ್ತದೆ. ಪ್ರತಿಯೊಬ್ಬರು ಬಂದು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು. </p>.<p>ಶಿಬಿರದಲ್ಲಿ ಮಕ್ಕಳ ರೋಗ, ಸಾಮಾನ್ಯ ರೋಗ, ಕಣ್ಣಿನ ತಪಾಸಣೆ, ಕ್ಯಾನ್ಸರ್ ರೋಗ ಪತ್ತೆಹಚ್ಚುವಿಕೆ, ಸ್ತ್ರೀ ರೋಗ, ಕಿವಿ, ಮೂಗು, ಗಂಟಲು ರೋಗ, ಎಲುಬು ಕೀಲುಗಳ ರೋಗ, ಚರ್ಮ ರೋಗ, ಹಲ್ಲಿನ ತಪಾಸಣೆ, ಬಿಪಿ ಶುಗರ್ ತಪಾಸಣೆ, ಇ ಸಿ ಜಿ ಹಾಗೂ ಸಾಮಾನ್ಯ ಶಸ್ತ್ರ ಚಿಕಿತ್ಸೆ ವಿಭಾಗಗಳ ಕೌಂಟರ್ ತೆರೆದು ತಜ್ಞ ವೈದ್ಯರು ರೋಗಿಗಳಿಗೆ ತಪಾಸಣೆ ಮಾಡಿದರು.</p>.<p>ಸಾಮಾನ್ಯ ರೋಗಗಳಿಗೆ ಸ್ಥಳದಲ್ಲಿ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆ ಅವಶ್ಯವಿರುವ ರೋಗಿಗಳಿಗೆ ಬೆಂಗಳೂರು ರಾಮಯ್ಯ ಆಸ್ಪತ್ರೆಯಲ್ಲಿ ರಿಯಾಯತಿ ದರದಲ್ಲಿ ಶಸ್ತ್ರಚಿಕಿತ್ಸೆ ಮತ್ತು ತಂತ್ರಜ್ಞಾನ ಆಧಾರಿತ ಯಂತ್ರಗಳ ಮೂಲಕ ತಪಾಸಣೆ ಮಾಡುವ ಭರವಸೆ ನೀಡಿದರು.</p>.<p>ಎಂ.ಎಸ್. ರಾಮಯ್ಯ ಆಸ್ಪತ್ರೆ ವೈದ್ಯರಾದ ಡಾ. ಅಂಜನ್, ಡಾ. ವೀಣಾ, ಡಾ.ಗರಿಮಾ, ಡಾ.ಕಿರಣ್, ಡಾ. ವೀರೇಶ್, ಡಾ. ಮನಸ್ವಿನಿ ಮತ್ತು ಡಾ. ನಮಿತಾ ಚಂಡೆರ್ ರೋಗಿಗಳಿಗೆ ಆರೋಗ್ಯ ತಪಾಸಣೆ ಮಾಡಿದರು. ಆಪ್ತ ಸಮಾಲೋಚಕರಾದ ಯಮುನಾ ಮತ್ತು ಆನಂದ್ ಸೂಕ್ತ ಸಲಹೆ, ಸೂಚನೆ ನೀಡಿದರು.</p>.<p>ಕೈವಾರ ಹಾಗೂ ಸುತ್ತಮುತ್ತಲಿನ ಗ್ರಾಮಗಳ 150ಕ್ಕೂ ಹೆಚ್ಚು ಜನರು ಆರೋಗ್ಯ ಶಿಬಿರದಲ್ಲಿ ತಪಾಸಣೆ ಮಾಡಿಸಿ ಸದುಪಯೋಗ ಪಡೆದುಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>