<p><strong>ಚಿಂತಾಮಣಿ</strong>: ಮಹಾಶಿವರಾತ್ರಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಕೈವಾರದ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆಯಿಂದಲೇ ದೂರದ ಊರುಗಳಿಂದ ಬಂದಿದ್ದ ಭಕ್ತರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.</p>.<p>ಭೀಮಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ: ಭೀಮಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಬೆಳಿಗ್ಗೆ 8ರಿಂದ 11ಗಂಟೆವರೆಗೆ ಪಂಚ ಶಿವಲಿಂಗಗಳಿಗೆ ರುದ್ರಾಭಿಷೇಕ, ಅಷ್ಟವಧಾನ ಸೇವೆ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಹಾಮಂಗಳಾರತಿ ನೆರವೇರಿತು.</p>.<p>ಇತರ ದೇವಾಲಯಗಳಲ್ಲಿ ಭಕ್ತರ ಸಂದಣಿ: ಕೈವಾರ ಅಮರನಾರಾಯಣಸ್ವಾಮಿ ದೇವಾಲಯ ಮತ್ತು ಯೋಗಿನಾರಾಯಣ ಮಠದಲ್ಲೂ ಶಿವರಾತ್ರಿ ಪ್ರಯುಕ್ತ ಭಕ್ತರ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ತಾತಯ್ಯ ಅವರ ಮೂಲ ಬೃಂದಾವನವನ್ನು ವಿವಿಧ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.</p>.<p>ಆಂಧ್ರಪ್ರದೇಶ, ತಮಿಳುನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತರು ವಿಶೇಷವಾಗಿ ಯೋಗಿನಾರಾಯಣ ಮಠಕ್ಕೆ ಆಗಮಿಸಿದ್ದರು. ರಾತ್ರಿ ಜಾಗರಣೆಯಲ್ಲಿ ಭಾಗವಹಿಸಿದ್ದರು. ಮಠದಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. </p>.<p>ಧರ್ಮಾಧಿಕಾರಿ ಎಂ.ಆರ್. ಜಯರಾಂ ಮತ್ತು ಟ್ರಸ್ಟ್ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಮಹಾಶಿವರಾತ್ರಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಕೈವಾರದ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆಯಿಂದಲೇ ದೂರದ ಊರುಗಳಿಂದ ಬಂದಿದ್ದ ಭಕ್ತರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.</p>.<p>ಭೀಮಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ: ಭೀಮಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ಬೆಳಿಗ್ಗೆ 8ರಿಂದ 11ಗಂಟೆವರೆಗೆ ಪಂಚ ಶಿವಲಿಂಗಗಳಿಗೆ ರುದ್ರಾಭಿಷೇಕ, ಅಷ್ಟವಧಾನ ಸೇವೆ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಹಾಮಂಗಳಾರತಿ ನೆರವೇರಿತು.</p>.<p>ಇತರ ದೇವಾಲಯಗಳಲ್ಲಿ ಭಕ್ತರ ಸಂದಣಿ: ಕೈವಾರ ಅಮರನಾರಾಯಣಸ್ವಾಮಿ ದೇವಾಲಯ ಮತ್ತು ಯೋಗಿನಾರಾಯಣ ಮಠದಲ್ಲೂ ಶಿವರಾತ್ರಿ ಪ್ರಯುಕ್ತ ಭಕ್ತರ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ತಾತಯ್ಯ ಅವರ ಮೂಲ ಬೃಂದಾವನವನ್ನು ವಿವಿಧ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.</p>.<p>ಆಂಧ್ರಪ್ರದೇಶ, ತಮಿಳುನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತರು ವಿಶೇಷವಾಗಿ ಯೋಗಿನಾರಾಯಣ ಮಠಕ್ಕೆ ಆಗಮಿಸಿದ್ದರು. ರಾತ್ರಿ ಜಾಗರಣೆಯಲ್ಲಿ ಭಾಗವಹಿಸಿದ್ದರು. ಮಠದಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು. </p>.<p>ಧರ್ಮಾಧಿಕಾರಿ ಎಂ.ಆರ್. ಜಯರಾಂ ಮತ್ತು ಟ್ರಸ್ಟ್ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>