<p><strong>ಚಿಂತಾಮಣಿ</strong>: ಪುರಾಣ ಪ್ರಸಿದ್ಧ ಆಲಂಬಗಿರಿ ಗ್ರಾಮದ ಕಲ್ಕಿ ಲಕ್ಷ್ಮಿ ವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವ ಶನಿವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ದೇವಾಲಯವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು.</p>.<p>ಕೈವಾರದಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಯನ್ನು ತಂದು ಪ್ರತಿಷ್ಠಾಪಿಸಲಾಗಿತ್ತು. ದೇವಾಲಯದ ಪ್ರಾಂಗಣದಲ್ಲಿರುವ ಕಲ್ಯಾಣ ಮಂಟಪದಲ್ಲಿ ಯೋಗಿನಾರೇಯಣ ಮಠದ ಧರ್ಮಾಧಿಕಾರಿ ಎಂ.ಆರ್.ಜಯರಾಂ ದಂಪತಿಗಳು ಶ್ರೀಕೃಷ್ಣ ಗಂಧೋತ್ಸವ ಸಮರ್ಪಿಸಿದರು.</p>.<p>ಗಂಧೋತ್ಸವದ ನಂತರ ಆಸ್ಥಾನ ಸೇವೆ ನೆರವೇರಿಸಿ, ಭೂನಿಳಾ ಸಮೇತ ಲಕ್ಷ್ಮಿ ವೆಂಕಟರಮಣಸ್ವಾಮಿಯ ಉತ್ಸವಮೂರ್ತಿಯನ್ನು ವೇದಘೋಷ ಮತ್ತು ಮಂಗಳವಾದ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ಉತ್ಸವ ಪಲ್ಲಕ್ಕಿಯಲ್ಲಿ ಕರೆತಂದು ಅಲಂಕೃತಗೊಂಡಿದ್ದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವದ ಅಂಗವಾಗಿ ರಥಶಾಂತಿ, ರಥಪೂಜೆ, ಹೋಮ, ಪೂರ್ಣಾಹುತಿ ಸಮರ್ಪಿಲಾಯಿತು. </p>.<p>ರಥಕ್ಕೆ ಚಾಲನೆ ನೀಡುತ್ತಿದ್ದಂತೆ ಗೋವಿಂದಾ, ಗೋವಿಂದಾ ನಾಮಸ್ಮರಣೆ ಮುಗಿಲುಮುಟ್ಟಿತು. ಸಾವಿರಾರು ಭಕ್ತರು ರಥವನ್ನು ಎಳೆದು ಪುನೀತರಾದರು. ಭಕ್ತರು ತೇರಿಗೆ ಬಾಳೆಹಣ್ಣು, ದವನ ಸಮರ್ಪಿಸಿದರು. </p>.<p>ಜಾತ್ರೆಯಲ್ಲಿ ಭಕ್ತರಿಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಜತೆಗೆ ಅನ್ನಸಂತರ್ಪಣೆ ನೆರವೇರಿತು. ನಾದಸ್ವರ, ತಮಟೆ ವಾದ್ಯಗಳೊಂದಿಗೆ ರಥೋತ್ಸವ ಸಾಗಿತು.</p>.<p>ಬ್ರಹ್ಮ ರಥೋತ್ಸವದ ಅಂಗವಾಗಿ ಸುಮಾರು 11 ದಿನಗಳು ಧಾರ್ಮಿಕ ಕೈಂಕರ್ಯಗಳು ನಡೆದವು.</p>.<p><strong>ಗಿರಿಪ್ರದಕ್ಷಿಣೆ:</strong> ದೇವಾಲಯದಿಂದ 1 ಕಿ.ಮೀ ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ನಡೆಸಲಾಯಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಪುರಾಣ ಪ್ರಸಿದ್ಧ ಆಲಂಬಗಿರಿ ಗ್ರಾಮದ ಕಲ್ಕಿ ಲಕ್ಷ್ಮಿ ವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವ ಶನಿವಾರ ಶ್ರದ್ಧಾ ಭಕ್ತಿಯಿಂದ ನೆರವೇರಿತು.</p>.<p>ರಥೋತ್ಸವದ ಅಂಗವಾಗಿ ದೇವಾಲಯವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಬೆಳಿಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು.</p>.<p>ಕೈವಾರದಿಂದ ಅಲಂಕೃತ ಪಲ್ಲಕ್ಕಿಯಲ್ಲಿ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಯನ್ನು ತಂದು ಪ್ರತಿಷ್ಠಾಪಿಸಲಾಗಿತ್ತು. ದೇವಾಲಯದ ಪ್ರಾಂಗಣದಲ್ಲಿರುವ ಕಲ್ಯಾಣ ಮಂಟಪದಲ್ಲಿ ಯೋಗಿನಾರೇಯಣ ಮಠದ ಧರ್ಮಾಧಿಕಾರಿ ಎಂ.ಆರ್.ಜಯರಾಂ ದಂಪತಿಗಳು ಶ್ರೀಕೃಷ್ಣ ಗಂಧೋತ್ಸವ ಸಮರ್ಪಿಸಿದರು.</p>.<p>ಗಂಧೋತ್ಸವದ ನಂತರ ಆಸ್ಥಾನ ಸೇವೆ ನೆರವೇರಿಸಿ, ಭೂನಿಳಾ ಸಮೇತ ಲಕ್ಷ್ಮಿ ವೆಂಕಟರಮಣಸ್ವಾಮಿಯ ಉತ್ಸವಮೂರ್ತಿಯನ್ನು ವೇದಘೋಷ ಮತ್ತು ಮಂಗಳವಾದ್ಯಗಳೊಂದಿಗೆ ಶಾಸ್ತ್ರೋಕ್ತವಾಗಿ ಉತ್ಸವ ಪಲ್ಲಕ್ಕಿಯಲ್ಲಿ ಕರೆತಂದು ಅಲಂಕೃತಗೊಂಡಿದ್ದ ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ರಥೋತ್ಸವದ ಅಂಗವಾಗಿ ರಥಶಾಂತಿ, ರಥಪೂಜೆ, ಹೋಮ, ಪೂರ್ಣಾಹುತಿ ಸಮರ್ಪಿಲಾಯಿತು. </p>.<p>ರಥಕ್ಕೆ ಚಾಲನೆ ನೀಡುತ್ತಿದ್ದಂತೆ ಗೋವಿಂದಾ, ಗೋವಿಂದಾ ನಾಮಸ್ಮರಣೆ ಮುಗಿಲುಮುಟ್ಟಿತು. ಸಾವಿರಾರು ಭಕ್ತರು ರಥವನ್ನು ಎಳೆದು ಪುನೀತರಾದರು. ಭಕ್ತರು ತೇರಿಗೆ ಬಾಳೆಹಣ್ಣು, ದವನ ಸಮರ್ಪಿಸಿದರು. </p>.<p>ಜಾತ್ರೆಯಲ್ಲಿ ಭಕ್ತರಿಗೆ ಅಲ್ಲಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು. ಜತೆಗೆ ಅನ್ನಸಂತರ್ಪಣೆ ನೆರವೇರಿತು. ನಾದಸ್ವರ, ತಮಟೆ ವಾದ್ಯಗಳೊಂದಿಗೆ ರಥೋತ್ಸವ ಸಾಗಿತು.</p>.<p>ಬ್ರಹ್ಮ ರಥೋತ್ಸವದ ಅಂಗವಾಗಿ ಸುಮಾರು 11 ದಿನಗಳು ಧಾರ್ಮಿಕ ಕೈಂಕರ್ಯಗಳು ನಡೆದವು.</p>.<p><strong>ಗಿರಿಪ್ರದಕ್ಷಿಣೆ:</strong> ದೇವಾಲಯದಿಂದ 1 ಕಿ.ಮೀ ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ನಡೆಸಲಾಯಿತು. ಸಾವಿರಾರು ಭಕ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>