ಹಿಂದೂ ಜಾಗರಣಾ ವೇದಿಕೆ ತುಮಕೂರು ವಿಭಾಗೀಯ ಸಂಚಾಲಕ ಮುನೀಂದ್ರ ಮಾತನಾಡಿ, ‘ರಾಜಕೀಯ ಲಾಭಗಳಿಸಲು ಕಾನೂನು ಬಾಹಿರವಾಗಿ ಮುನೇಶ್ವರಸ್ವಾಮಿಯ ಬೆಟ್ಟ ಎಂದು ಪ್ರಸಿದ್ದಿ ಹೊಂದಿದ್ದ ಧಾರ್ಮಿಕ ಕ್ಷೇತ್ರವನ್ನು ಕ್ರೈಸ್ತೀಕರಣಗೊಳಿಸಲಾಗುತ್ತಿದೆ. ಈಗಾಗಲೇ ಚಾಮರಾಜ ನಗರ, ಕೊಳ್ಳೆಗಾಲ, ರಾಮನಗರ ವ್ಯಾಪ್ತಿಯಲ್ಲಿ ವ್ಯಾಪಕ ಆಮೀಷದ ಮತಾಂತರ ನಡೆಯುತ್ತಿದ್ದು, ಯೇಸು ಪ್ರತಿಮೆ ಸ್ಥಾಪಿಸಲು ಮುಂದಾಗಿರುವುದು ಮತಾಂತರಕ್ಕೆ ಮತ್ತಷ್ಟು ಅನುಕೂಲಮಾಡಿಕೊಡಲಿದೆ’ ಎಂದು ಹೇಳಿದರು.