<p><strong>ಚಿಕ್ಕಬಳ್ಳಾಪುರ: </strong>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಮತ್ತು ಸರ್ಕಾರದ ಭಾಷಾ ನೀತಿಯ ಅನುಷ್ಠಾನದಲ್ಲಿ ಜನರೂ ಪಾಲ್ಗೊಳ್ಳುವಂತೆ ನೋಡಿಕೊಳ್ಳುವ ಉದ್ದೇಶದಿಂದ ರಚಿಸಿದ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಕನ್ನಡ ಜಾಗೃತಿ ಸಮಿತಿಗಳು ಜಿಲ್ಲೆಯಲ್ಲಿ ಮರೆವಿನ ಕಾಯಿಲೆಗೆ ತುತ್ತಾಗಿ, ತಮ್ಮ ಕರ್ತವ್ಯ ಮತ್ತು ಅಸ್ತಿತ್ವವನ್ನೇ ಮರೆತಿವೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.</p>.<p>ಕನ್ನಡಿಗರ ಪ್ರಾತಿನಿಧಿಕ ಮತ್ತು ಸಾಂಸ್ಕೃತಿಕ ಮೇರು ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಗಡಿಭಾಗದ ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ನಿಷ್ಕ್ರಿಯಗೊಳ್ಳುತ್ತಿವೆ ಎಂಬ ಬೇಸರ ಸಾಹಿತ್ಯ ವಲಯದಲ್ಲಿ ಮಡುಗಟ್ಟುತ್ತಿರುವಾಗಲೇ, ಜನರಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸಬೇಕಾದ ಕನ್ನಡ ಜಾಗೃತಿ ಸಮಿತಿಗಳೇ ನಿದ್ದೆಯಲ್ಲಿ ಮೈಮರೆತಿವೆ ಎಂಬ ಅಸಮಾಧಾನ ಎಲ್ಲೆಡೆ ಕೇಳಿಬರುತ್ತಿದೆ.</p>.<p>ರಾಜ್ಯ ಸರ್ಕಾರ 1997ರಲ್ಲಿ ಕನ್ನಡ ಜಾಗೃತಿ ಸಮಿತಿಗಳ ಪರಿಕಲ್ಪನೆಗೆ ಚಾಲನೆ ನೀಡಿತ್ತು. ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಡಿಡಿಪಿಐ), ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ, ನಾಮ ನಿರ್ದೇಶನಗೊಂಡ ಅಧಿಕಾರೇತರ ಸದಸ್ಯರು (ಐದು ಜನ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಸದಸ್ಯರಾಗಿರುತ್ತಾರೆ.</p>.<p>ತಾಲ್ಲೂಕು ಕನ್ನಡ ಜಾಗೃತಿ ಸಮಿತಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅಧ್ಯಕ್ಷರಾಗಿರುತ್ತಾರೆ. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಮನಿರ್ದೇಶನಗೊಳ್ಳುವ ಅಧಿಕಾರೇತರ ಸದಸ್ಯರು (ಐದು ಜನ), ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಸದಸ್ಯರಾಗಿರುತ್ತಾರೆ.</p>.<p>ಅದರಂತೆ ಲೆಕ್ಕ ಹಾಕಿದರೆ ಜಿಲ್ಲೆಯಲ್ಲಿ ಆರು ಕನ್ನಡ ಜಾಗೃತಿ ಸಮಿತಿಗಳು ಸಕ್ರಿಯವಾಗಿರಬೇಕಿತ್ತು. ದುರಂತವೆಂದರೆ ಒಂದೇ ಒಂದು ಸಮಿತಿ ಕೂಡ ಅಸ್ತಿತ್ವದಲ್ಲಿದೆ ಎಂಬ ಕುರುಹು ಇಲ್ಲದಷ್ಟು ಸಮಿತಿಗಳು ನಿಷ್ಕ್ರಿಯಗೊಂಡಿವೆ ಎನ್ನುತ್ತಾರೆ ಪ್ರಜ್ಞಾವಂತರು.</p>.<p>ನೆರೆಯ ಆಂಧ್ರಪ್ರದೇಶಕ್ಕೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಮೇಲೆ ತೆಲುಗು ಭಾಷೆಯ ದಟ್ಟ ಛಾಯೆ ಇದೆ. ಇಂತಹ ನೆಲದಲ್ಲಿ ಕನ್ನಡದ ವಾತಾವರಣ ಕಾಪಿಟ್ಟುಕೊಳ್ಳುವ ಜವಾಬ್ದಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳಷ್ಟೇ, ಕನ್ನಡ ಜಾಗೃತಿ ಸಮಿತಿಗಳ ಮೇಲಿದೆ. ದುರದೃಷ್ಟವಶಾತ್, ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗಳಿಗೇ ಇವತ್ತು ಜಾಗೃತಿ ಮೂಡಿಸಬೇಕಾದ ಹೊತ್ತು ಬಂದಿದೆ ಎನ್ನುವುದು ಸಾರ್ವತ್ರಿಕ<br />ಟೀಕೆ.</p>.<p>ಪ್ರತಿ ಕನ್ನಡ ಜಾಗೃತಿ ಸಮಿತಿಗಳು ವರ್ಷದಲ್ಲಿ ಮೂರು ತಿಂಗಳಿಗೊಮ್ಮೆ ಒಂದರಂತೆ ವಾರ್ಷಿಕವಾಗಿ ನಾಲ್ಕು ಸಭೆಗಳನ್ನು ನಡೆಸಬೇಕು. ಆಡಳಿತದಲ್ಲಿ ಕನ್ನಡ ಯಾವುದೇ ಕಚೇರಿಯಲ್ಲಿ ಸಮರ್ಪಕವಾಗಿ ಬಳಕೆಯಾಗದೆ ಇರುವುದು ತಿಳಿದು ಬಂದಾಗ ಆ ವಿಚಾರವನ್ನು ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೆ ತಂದು, ನಿಗದಿಪಡಿಸಿದ ದಿನಾಂಕದಂದು ಅವರೊಂದಿಗೆ ಪರಿಶೀಲನೆಗೆ ಹೋಗುವ ಕೆಲಸವನ್ನು ಸಮಿತಿ ಸದಸ್ಯರು ಮಾಡಬೇಕು. ವಿಚಿತ್ರವೆಂದರೆ ಜಿಲ್ಲೆಯಲ್ಲಿ ಸಮಿತಿಗಳ ಅಧ್ಯಕ್ಷ ಸ್ಥಾನದಲ್ಲಿ ಇರಬೇಕಾದವರಿಗೆ ಅಂತಹದೊಂದು ಸಮಿತಿ ಅಸ್ತಿತ್ವದಲ್ಲಿದೆ ಎಂಬ ವಿಚಾರವೇ ಗೊತ್ತಿಲ್ಲ!</p>.<p>ಪರಿಣಾಮ, ಇಂದಿಗೂ ಬ್ಯಾಂಕ್ಗಳಲ್ಲಿ ಕರಾರು ಪತ್ರ, ಸಾಲದ ಅರ್ಜಿಗಳು, ರಸೀದಿಗಳು ಅನ್ಯಭಾಷೆಯಲ್ಲಿಯೇ ಹೆಚ್ಚು ಬಳಕೆಯಾಗುತ್ತಿದೆ. ಇದರಿಂದ ರೈತರು, ಜನಸಾಮಾನ್ಯರು ಪರದಾಡುವಂತಾಗುತ್ತಿದೆ. ನಗರದಲ್ಲಿ ಜಾಹೀರಾತು ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆಯಾಗುತ್ತಿಲ್ಲ. ಕನ್ನಡ ಬಳಕೆ ಉತ್ತೇಜಿಸುವಂತಹ ಕಾರ್ಯಕ್ರಮಗಳು, ಸಮಾವೇಶಗಳು ನಡೆಯುತ್ತಿಲ್ಲ ಎನ್ನುವುದು ಸದಸ್ಯರ ದೂರು.</p>.<p>ಈ ಹಿಂದೆ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ವೇಳೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಗೆ 2017ರ ಜುಲೈನಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದು ಬಿಟ್ಟರೆ ಈವರೆಗೆ ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದ ಒಂದೇ ಒಂದು ಚಟುವಟಿಕೆಯನ್ನು ಜಾಗೃತಿ ಸಮಿತಿಗಳು ನಡೆಸಿದ ಉದಾಹರಣೆಗಳಿಲ್ಲ.</p>.<p>ಗಡಿಭಾಗದ ಗ್ರಾಮಾಂತರ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಕಲಿಯುವ ಮಕ್ಕಳೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಕನ್ನಡ ಓದುವ, ಬರೆಯುವವರ ಪ್ರಮಾಣ ಶೇಕಡ 15–20ಕ್ಕೆ ಕುಸಿಯುತ್ತಿದೆ. ಈ ಬಗ್ಗೆ ಪ್ರಾಧಿಕಾರ ಗಮನ ಹರಿಸಬೇಕಿತ್ತು. ಕನ್ನಡ ಬಳಕೆ ಹೆಚ್ಚಿಸುವ ಕೆಲಸ ಮಾಡಬೇಕಿತ್ತು. ಆ ಕೆಲಸ ನಡೆಯಲೇ ಇಲ್ಲ ಎನ್ನುವುದು ಪ್ರಜ್ಞಾವಂತರ ಅಳಲು.</p>.<p>‘ನಮ್ಮನ್ನು ಕಾಟಾಚಾರಕ್ಕೆ ಜಾಗೃತಿ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಿ ಅಧಿಕಾರಿಗಳು ಕೈತೊಳೆದುಕೊಂಡಿದ್ದಾರೆ. ವರ್ಷದಲ್ಲಿ ನಾಲ್ಕು ಸಭೆ ನಡೆಸಬೇಕು. ಆದರೆ ನಾಲ್ಕು ವರ್ಷಗಳಾದರೂ ನಮ್ಮನ್ನು ಒಂದೇ ಒಂದು ಸಭೆಗೆ ಕರೆದ ನೆನಪಿಲ್ಲ’ ಎಂದು ಅನೇಕ ಸದಸ್ಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.</p>.<p>‘ನಾನು ಜಿಲ್ಲಾ ಸಮಿತಿ ಸದಸ್ಯನಾದ ಬಳಿಕ ಐದು ಜಿಲ್ಲಾಧಿಕಾರಿಗಳನ್ನು ಕಂಡಿರುವೆ. ಈವರೆಗೆ ಒಬ್ಬೇ ಒಬ್ಬ ಜಿಲ್ಲಾಧಿಕಾರಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಅಧ್ಯಕ್ಷರಾಗಿ ಸದಸ್ಯರನ್ನು ಒಂದು ದಿನವೂ ಸಭೆಯ ಕರೆದು, ಚರ್ಚೆ ಮಾಡಲಿಲ್ಲ. ನಮಗೆ ಸದಸ್ಯ ಸ್ಥಾನ ಕಾಟಾಚಾರಕ್ಕೆ ನೀಡಿದ್ದಾರೆ. ಅದರಿಂದ ಏನು ಪ್ರಯೋಜನ ಬಂತು? ನಾವು ಹೇಳಿದ್ದನ್ನು ಒಬ್ಬರೂ ಕಿವಿಗೆ ಹಾಕಿಕೊಳ್ಳಲಿಲ್ಲ’ ಎಂದು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಮಂಚನಬಲೆ ಶ್ರೀನಿವಾಸ್ ತಿಳಿಸಿದರು.</p>.<p>ತುಂಬಾ ಬೇಸರ ತಂದಿದೆ: ನನ್ನನ್ನು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯನನ್ನಾಗಿ ನೇಮಕ ಮಾಡಿ ಐದು ವರ್ಷಗಳು ಕಳೆದಿವೆ. ಸದಸ್ಯರನ್ನು ವರ್ಷಕ್ಕೆ ನಾಲ್ಕು ಬಾರಿ ಸಭೆ ಕರೆಯಬೇಕು. ಆದರೆ, ನಮ್ಮನ್ನು ಎರಡು ಸಭೆಗಳಿಗೂ ಕರೆದಿಲ್ಲ. ಇದು ತುಂಬಾ ಬೇಸರ ತಂದಿದೆ ಎನ್ನುತ್ತಾರೆ ಗೌರಿಬಿದನೂರಿನಡಿ.ಜೆ. ಚಂದ್ರಮೋಹನ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಮತ್ತು ಸರ್ಕಾರದ ಭಾಷಾ ನೀತಿಯ ಅನುಷ್ಠಾನದಲ್ಲಿ ಜನರೂ ಪಾಲ್ಗೊಳ್ಳುವಂತೆ ನೋಡಿಕೊಳ್ಳುವ ಉದ್ದೇಶದಿಂದ ರಚಿಸಿದ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಕನ್ನಡ ಜಾಗೃತಿ ಸಮಿತಿಗಳು ಜಿಲ್ಲೆಯಲ್ಲಿ ಮರೆವಿನ ಕಾಯಿಲೆಗೆ ತುತ್ತಾಗಿ, ತಮ್ಮ ಕರ್ತವ್ಯ ಮತ್ತು ಅಸ್ತಿತ್ವವನ್ನೇ ಮರೆತಿವೆ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.</p>.<p>ಕನ್ನಡಿಗರ ಪ್ರಾತಿನಿಧಿಕ ಮತ್ತು ಸಾಂಸ್ಕೃತಿಕ ಮೇರು ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಗಡಿಭಾಗದ ಜಿಲ್ಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ನಿಷ್ಕ್ರಿಯಗೊಳ್ಳುತ್ತಿವೆ ಎಂಬ ಬೇಸರ ಸಾಹಿತ್ಯ ವಲಯದಲ್ಲಿ ಮಡುಗಟ್ಟುತ್ತಿರುವಾಗಲೇ, ಜನರಲ್ಲಿ ಕನ್ನಡದ ಬಗ್ಗೆ ಜಾಗೃತಿ ಮೂಡಿಸಬೇಕಾದ ಕನ್ನಡ ಜಾಗೃತಿ ಸಮಿತಿಗಳೇ ನಿದ್ದೆಯಲ್ಲಿ ಮೈಮರೆತಿವೆ ಎಂಬ ಅಸಮಾಧಾನ ಎಲ್ಲೆಡೆ ಕೇಳಿಬರುತ್ತಿದೆ.</p>.<p>ರಾಜ್ಯ ಸರ್ಕಾರ 1997ರಲ್ಲಿ ಕನ್ನಡ ಜಾಗೃತಿ ಸಮಿತಿಗಳ ಪರಿಕಲ್ಪನೆಗೆ ಚಾಲನೆ ನೀಡಿತ್ತು. ಜಿಲ್ಲಾ ಕನ್ನಡ ಜಾಗೃತಿ ಸಮಿತಿಗೆ ಜಿಲ್ಲಾಧಿಕಾರಿ ಅಧ್ಯಕ್ಷರಾಗಿರುತ್ತಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಡಿಡಿಪಿಐ), ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ, ನಾಮ ನಿರ್ದೇಶನಗೊಂಡ ಅಧಿಕಾರೇತರ ಸದಸ್ಯರು (ಐದು ಜನ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ಸದಸ್ಯರಾಗಿರುತ್ತಾರೆ.</p>.<p>ತಾಲ್ಲೂಕು ಕನ್ನಡ ಜಾಗೃತಿ ಸಮಿತಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅಧ್ಯಕ್ಷರಾಗಿರುತ್ತಾರೆ. ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ, ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ನಾಮನಿರ್ದೇಶನಗೊಳ್ಳುವ ಅಧಿಕಾರೇತರ ಸದಸ್ಯರು (ಐದು ಜನ), ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದ ಅಧ್ಯಕ್ಷ ಸದಸ್ಯರಾಗಿರುತ್ತಾರೆ.</p>.<p>ಅದರಂತೆ ಲೆಕ್ಕ ಹಾಕಿದರೆ ಜಿಲ್ಲೆಯಲ್ಲಿ ಆರು ಕನ್ನಡ ಜಾಗೃತಿ ಸಮಿತಿಗಳು ಸಕ್ರಿಯವಾಗಿರಬೇಕಿತ್ತು. ದುರಂತವೆಂದರೆ ಒಂದೇ ಒಂದು ಸಮಿತಿ ಕೂಡ ಅಸ್ತಿತ್ವದಲ್ಲಿದೆ ಎಂಬ ಕುರುಹು ಇಲ್ಲದಷ್ಟು ಸಮಿತಿಗಳು ನಿಷ್ಕ್ರಿಯಗೊಂಡಿವೆ ಎನ್ನುತ್ತಾರೆ ಪ್ರಜ್ಞಾವಂತರು.</p>.<p>ನೆರೆಯ ಆಂಧ್ರಪ್ರದೇಶಕ್ಕೆ ಗಡಿ ಹಂಚಿಕೊಂಡಿರುವ ಜಿಲ್ಲೆಯ ಮೇಲೆ ತೆಲುಗು ಭಾಷೆಯ ದಟ್ಟ ಛಾಯೆ ಇದೆ. ಇಂತಹ ನೆಲದಲ್ಲಿ ಕನ್ನಡದ ವಾತಾವರಣ ಕಾಪಿಟ್ಟುಕೊಳ್ಳುವ ಜವಾಬ್ದಾರಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳಷ್ಟೇ, ಕನ್ನಡ ಜಾಗೃತಿ ಸಮಿತಿಗಳ ಮೇಲಿದೆ. ದುರದೃಷ್ಟವಶಾತ್, ಜಿಲ್ಲೆಯಲ್ಲಿ ಕನ್ನಡ ಜಾಗೃತಿ ಸಮಿತಿಗಳಿಗೇ ಇವತ್ತು ಜಾಗೃತಿ ಮೂಡಿಸಬೇಕಾದ ಹೊತ್ತು ಬಂದಿದೆ ಎನ್ನುವುದು ಸಾರ್ವತ್ರಿಕ<br />ಟೀಕೆ.</p>.<p>ಪ್ರತಿ ಕನ್ನಡ ಜಾಗೃತಿ ಸಮಿತಿಗಳು ವರ್ಷದಲ್ಲಿ ಮೂರು ತಿಂಗಳಿಗೊಮ್ಮೆ ಒಂದರಂತೆ ವಾರ್ಷಿಕವಾಗಿ ನಾಲ್ಕು ಸಭೆಗಳನ್ನು ನಡೆಸಬೇಕು. ಆಡಳಿತದಲ್ಲಿ ಕನ್ನಡ ಯಾವುದೇ ಕಚೇರಿಯಲ್ಲಿ ಸಮರ್ಪಕವಾಗಿ ಬಳಕೆಯಾಗದೆ ಇರುವುದು ತಿಳಿದು ಬಂದಾಗ ಆ ವಿಚಾರವನ್ನು ಪ್ರಾಧಿಕಾರದ ಅಧ್ಯಕ್ಷರ ಗಮನಕ್ಕೆ ತಂದು, ನಿಗದಿಪಡಿಸಿದ ದಿನಾಂಕದಂದು ಅವರೊಂದಿಗೆ ಪರಿಶೀಲನೆಗೆ ಹೋಗುವ ಕೆಲಸವನ್ನು ಸಮಿತಿ ಸದಸ್ಯರು ಮಾಡಬೇಕು. ವಿಚಿತ್ರವೆಂದರೆ ಜಿಲ್ಲೆಯಲ್ಲಿ ಸಮಿತಿಗಳ ಅಧ್ಯಕ್ಷ ಸ್ಥಾನದಲ್ಲಿ ಇರಬೇಕಾದವರಿಗೆ ಅಂತಹದೊಂದು ಸಮಿತಿ ಅಸ್ತಿತ್ವದಲ್ಲಿದೆ ಎಂಬ ವಿಚಾರವೇ ಗೊತ್ತಿಲ್ಲ!</p>.<p>ಪರಿಣಾಮ, ಇಂದಿಗೂ ಬ್ಯಾಂಕ್ಗಳಲ್ಲಿ ಕರಾರು ಪತ್ರ, ಸಾಲದ ಅರ್ಜಿಗಳು, ರಸೀದಿಗಳು ಅನ್ಯಭಾಷೆಯಲ್ಲಿಯೇ ಹೆಚ್ಚು ಬಳಕೆಯಾಗುತ್ತಿದೆ. ಇದರಿಂದ ರೈತರು, ಜನಸಾಮಾನ್ಯರು ಪರದಾಡುವಂತಾಗುತ್ತಿದೆ. ನಗರದಲ್ಲಿ ಜಾಹೀರಾತು ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಕೆಯಾಗುತ್ತಿಲ್ಲ. ಕನ್ನಡ ಬಳಕೆ ಉತ್ತೇಜಿಸುವಂತಹ ಕಾರ್ಯಕ್ರಮಗಳು, ಸಮಾವೇಶಗಳು ನಡೆಯುತ್ತಿಲ್ಲ ಎನ್ನುವುದು ಸದಸ್ಯರ ದೂರು.</p>.<p>ಈ ಹಿಂದೆ ಪ್ರೊ.ಎಸ್.ಜಿ. ಸಿದ್ದರಾಮಯ್ಯ ಕನ್ನಡ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ವೇಳೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಗೆ 2017ರ ಜುಲೈನಲ್ಲಿ ಜಿಲ್ಲೆಗೆ ಭೇಟಿ ನೀಡಿದ್ದು ಬಿಟ್ಟರೆ ಈವರೆಗೆ ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದ ಒಂದೇ ಒಂದು ಚಟುವಟಿಕೆಯನ್ನು ಜಾಗೃತಿ ಸಮಿತಿಗಳು ನಡೆಸಿದ ಉದಾಹರಣೆಗಳಿಲ್ಲ.</p>.<p>ಗಡಿಭಾಗದ ಗ್ರಾಮಾಂತರ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಕಲಿಯುವ ಮಕ್ಕಳೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಕನ್ನಡ ಓದುವ, ಬರೆಯುವವರ ಪ್ರಮಾಣ ಶೇಕಡ 15–20ಕ್ಕೆ ಕುಸಿಯುತ್ತಿದೆ. ಈ ಬಗ್ಗೆ ಪ್ರಾಧಿಕಾರ ಗಮನ ಹರಿಸಬೇಕಿತ್ತು. ಕನ್ನಡ ಬಳಕೆ ಹೆಚ್ಚಿಸುವ ಕೆಲಸ ಮಾಡಬೇಕಿತ್ತು. ಆ ಕೆಲಸ ನಡೆಯಲೇ ಇಲ್ಲ ಎನ್ನುವುದು ಪ್ರಜ್ಞಾವಂತರ ಅಳಲು.</p>.<p>‘ನಮ್ಮನ್ನು ಕಾಟಾಚಾರಕ್ಕೆ ಜಾಗೃತಿ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಿ ಅಧಿಕಾರಿಗಳು ಕೈತೊಳೆದುಕೊಂಡಿದ್ದಾರೆ. ವರ್ಷದಲ್ಲಿ ನಾಲ್ಕು ಸಭೆ ನಡೆಸಬೇಕು. ಆದರೆ ನಾಲ್ಕು ವರ್ಷಗಳಾದರೂ ನಮ್ಮನ್ನು ಒಂದೇ ಒಂದು ಸಭೆಗೆ ಕರೆದ ನೆನಪಿಲ್ಲ’ ಎಂದು ಅನೇಕ ಸದಸ್ಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.</p>.<p>‘ನಾನು ಜಿಲ್ಲಾ ಸಮಿತಿ ಸದಸ್ಯನಾದ ಬಳಿಕ ಐದು ಜಿಲ್ಲಾಧಿಕಾರಿಗಳನ್ನು ಕಂಡಿರುವೆ. ಈವರೆಗೆ ಒಬ್ಬೇ ಒಬ್ಬ ಜಿಲ್ಲಾಧಿಕಾರಿ ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಅಧ್ಯಕ್ಷರಾಗಿ ಸದಸ್ಯರನ್ನು ಒಂದು ದಿನವೂ ಸಭೆಯ ಕರೆದು, ಚರ್ಚೆ ಮಾಡಲಿಲ್ಲ. ನಮಗೆ ಸದಸ್ಯ ಸ್ಥಾನ ಕಾಟಾಚಾರಕ್ಕೆ ನೀಡಿದ್ದಾರೆ. ಅದರಿಂದ ಏನು ಪ್ರಯೋಜನ ಬಂತು? ನಾವು ಹೇಳಿದ್ದನ್ನು ಒಬ್ಬರೂ ಕಿವಿಗೆ ಹಾಕಿಕೊಳ್ಳಲಿಲ್ಲ’ ಎಂದು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಮಂಚನಬಲೆ ಶ್ರೀನಿವಾಸ್ ತಿಳಿಸಿದರು.</p>.<p>ತುಂಬಾ ಬೇಸರ ತಂದಿದೆ: ನನ್ನನ್ನು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯನನ್ನಾಗಿ ನೇಮಕ ಮಾಡಿ ಐದು ವರ್ಷಗಳು ಕಳೆದಿವೆ. ಸದಸ್ಯರನ್ನು ವರ್ಷಕ್ಕೆ ನಾಲ್ಕು ಬಾರಿ ಸಭೆ ಕರೆಯಬೇಕು. ಆದರೆ, ನಮ್ಮನ್ನು ಎರಡು ಸಭೆಗಳಿಗೂ ಕರೆದಿಲ್ಲ. ಇದು ತುಂಬಾ ಬೇಸರ ತಂದಿದೆ ಎನ್ನುತ್ತಾರೆ ಗೌರಿಬಿದನೂರಿನಡಿ.ಜೆ. ಚಂದ್ರಮೋಹನ್.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>